ಮನೆಯಿಂದ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ

Wednesday, February 28th, 2024
ಮನೆಯಿಂದ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ

ಕಾರ್ಕಳ : ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು […]

ಪಳ್ಳಿಕೆರೆ ರೈಲ್ವೇ ಟ್ರ್ಯಾಕ್ ಬಳಿ ಯುವತಿಯ ಮೃತದೇಹ ಪತ್ತೆ

Saturday, January 6th, 2024
Ishwarya-Joseph

ಕಾಸರಗೋಡು : ಯುವತಿಯೊಬ್ಬಳ ಮೃತದೇಹ ಪಳ್ಳಿಕೆರೆ ಮಾಸ್ತಿ ಗುಡ್ಡೆ ಯಲ್ಲಿ ಎಂಬಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೃತ ಯುವತಿಯನ್ನು ಕಾವುಮಂದದ ಐಶ್ವರ್ಯ ಜೋಸೆಫ್ (30) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಪರಿಸರವಾಸಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತ ದೇಹದ ಬಳಿ ಲಭಿಸಿದ ಪರ್ಸ್ ನಲ್ಲಿದ್ದ ಗುರುತು ಚೀಟಿಯಿಂದ ಯುವತಿಯ ಗುರುತು ಪತ್ತೆ ಹಚ್ಚಲಾಗಿದೆ. ಕೋಜಿಕ್ಕೊಡ್ […]

ಐಟಿ ಕಂಪನಿ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

Wednesday, October 18th, 2023
ಐಟಿ ಕಂಪನಿ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ : ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಲೊಟ್ಟೆ ಎಂಬಲ್ಲಿ ನಡೆದಿದೆ. ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಉಡುಪಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಕೆಲಸಕ್ಕಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ

Friday, October 13th, 2023
vinitha

ಶಿರ್ವ : ಉಡುಪಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಅಕ್ಟೊಬರ್ 13ರ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿ. ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಸಮೀಪದ ನದಿ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಕ್ಟೊಬರ್ 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಹಿಂತಿರುಗದ […]

ಲಾಡ್ಜ್‌ನಲ್ಲಿದ್ದ 19 ವರ್ಷದ ಯುವತಿ ನಾಪತ್ತೆ

Wednesday, April 6th, 2022
Prema

ಮಂಗಳೂರು :  ಲಾಡ್ಜ್‌ನಲ್ಲಿದ್ದ ತುಮಕೂರಿನ 19 ವರ್ಷದ ಯುವತಿಯೊಬ್ಬಳು ಮಂಗಳೂರಿನಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕಾಣೆಯಾದ ಬಾಲಕಿಯನ್ನು ತುಮಕೂರು ಜಿಲ್ಲೆ ಸಿರಾ ತಾಲೂಕಿನ ಕೆಂಚಪ್ಪನ ಹಳ್ಳಿಯ ಕೆ ವಡ್ಡರಹಳ್ಳಿಯ ನಿವಾಸಿ ಪ್ರೇಮಾ ಎಂದು ಗುರುತಿಸಲಾಗಿದೆ. ಪ್ರೇಮಾ ಕಳೆದ ಭಾನುವಾರ ಚಿಕ್ಕಮ್ಮ ಲಕ್ಷ್ಮಿ ಅವರೊಂದಿಗೆ ಮಂಗಳೂರಿಗೆ ಬಂದಿದ್ದಳು.  ಏಪ್ರಿಲ್ 4ರ ಸೋಮವಾರ ಬೆಳಗ್ಗೆ 7.15ಕ್ಕೆ ಟೀ ತರಲು ಹೋದ ಯುವತಿ ಮಧ್ಯಾಹ್ನದ ನಂತರವೂ ವಾಪಸ್ ಬಂದಿಲ್ಲ. ಪ್ರೇಮಾ ತನ್ನ ಹೆತ್ತವರನ್ನು ಕಳೆದುಕೊಂಡಿದ್ದರಿಂದ ಅವಳನ್ನು ತನ್ನ ಚಿಕ್ಕಮ್ಮನವರು ನೋಡಿಕೊಳುತ್ತಿದ್ದು, ಅವಳಿಗೆ ಓದು ಬರಹ […]

ಯುವತಿಯರನ್ನು ಬಳಸಿ ಹನಿಟ್ರ್ಯಾಪ್, ಓರ್ವನ ಬಂಧನ

Monday, December 20th, 2021
Ranjith S

ಉಡುಪಿ : ಹಣಕ್ಕಾಗಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ. ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಡಿ.17ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಆರೋಪಿಯನ್ನು ಡಿ.18ರಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ […]

ಕೆಲಸಕ್ಕೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆ

Tuesday, November 9th, 2021
Tara

ಭಟ್ಕಳ: ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿ ನಾಲ್ಕು ದಿನ ಕಳೆದರೂ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ತಾರಾ ನಾರಾಯಣ ಮರಾಠಿ ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12-00 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ ವಾಪಸ್ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ . ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ […]

ಡೆತ್​​ನೋಟ್​​ನಲ್ಲಿ ಕೆಲವರ ಹೆಸರು ಬರೆದಿಟ್ಟು, ವಿಟ್ಲ ದೇವಸ್ಥಾನದ ಸಮೀಪ ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

Monday, October 11th, 2021
Nishmitha

ಬಂಟ್ವಾಳ : ಯುವತಿಯೊಬ್ಬಳು ವಿಟ್ಲ ದೇವಸ್ಥಾನ ಸಮೀಪ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸ್ಥಳೀಯ ನೆತ್ರಕೆರೆ ನಿವಾಸಿ ನಿಶ್ಮಿತಾ (22) ಸಾವನ್ನಪ್ಪಿದವರು. ನಿಶ್ಮಿತಾ ಸ್ಥಳೀಯ ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು ಭಾನುವಾರ  ಸಂಜೆಯಿಂದ ಕಾಣೆಯಾಗಿದ್ದರು. ಈಕೆ ಡೆತ್ ನೋಟ್ ಮತ್ತು ಮೊಬೈಲ್ ಅನ್ನು ಕೆರೆ ಬದಿಯಲ್ಲಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.11ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ನೋಟ್ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, […]

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಬೆಂಗಳೂರಿನಲ್ಲಿ ಆರೋಪಿ ವಶಕ್ಕೆ

Thursday, September 23rd, 2021
Rape-Accused

ಮಂಗಳೂರು : ಮೈಸೂರಿನ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ಯುವತಿ ತನಗೆ ಮೋಸ ಆಗಿದೆ ಎಂದು ಮಂಗಳೂರಿನ ಮುಡಿಪುವಿನಲ್ಲಿರುವ ಯುವಕನ ಮನೆಗೆ ಬಂದಿದ್ದಾಳೆ. ಈ ವೇಳೆ ಯುವಕನ ಮನೆಯಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿ ಮನೆಯಿಂದ ಹೊರ ಕಳುಹಿಸಿದ್ದಾರೆ. ಇದರಿಂದ ಬೇಸರಗೊಂಡ ಯುವತಿ ಬಸ್ ತಂಗುದಾಣದಲ್ಲಿ ಅಳುತ್ತಾ ಕುಳಿತಿದ್ದಳು. ಪೊಲೀಸರಿಗೆ ಮಾಹಿತಿ ಸಿಕ್ಕಿ […]

ಯುವತಿಯ ಫೇಸ್ ಬುಕ್ ನಕಲಿ ಖಾತೆ, ಕಡಬದ ಯುವಕನ ಬಂಧನ

Saturday, September 4th, 2021
cyber Crime

ಕಡಬ : ಯುವತಿ ಯೊಬ್ಬಳ ಫೇಸ್ ಬುಕ್ ಖಾತೆ ನಕಲಿ ಮಾಡಿದ್ದಕ್ಕೆ ಸೈಬರ್‌ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಪೊಲೀಸರು ಕಡಬದ ಯುವಕನೋರ್ವನನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ, ಮಂಗಳೂರಿನಲ್ಲಿ ಟ್ರೇಡಿಂಗ್‌ ವ್ಯವಹಾರ ನಡೆಸುತ್ತಿರುವ ಸಂಜಯ್‌ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯೋರ್ವಳ ಹೆಸರಿನ ನಕಲಿ ಸಾಮಾಜಿಕ ಜಾಲತಾಣ ಖಾತೆ ತೆರೆದ ಆರೋಪದ ಮೇರೆಗೆ ಸಂಜಯ್‌ ಕೃಷ್ಣನನ್ನು ಬಂಧಿಸಲಾಗಿದೆ. ತನ್ನ ಹೆಸರಿನ ನಕಲಿ ಸಾಮಾಜಿಕ […]