ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿ : ಯುವ‌ಮೋರ್ಚಾ ಕಾರ್ಯಕರ್ತರಿಂದ ರಸ್ತೆ ತಡೆ

Monday, September 16th, 2019
kasaragod

ಕಾಸರಗೋಡು : ತಲಪಾಡಿ ಯಿಂದ ಕಾಸರಗೋಡು ತನಕ ಸಂಪೂರ್ಣ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ನಡೆಸದೆ ಜನತೆಯನ್ನು ಸಂಕಷ್ಟಕ್ಕೆ ತಳ್ಳಿರುವ ಕೇರಳದ ಎಡರಂಗ ಸರಕಾರದ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ – 66 ದುರಸ್ತಿ ಕಾಮಗಾರಿಗೆ ಶೀಘ್ರ ಕ್ರಮಕೈಗೊಳ್ಳ ಬೇಕೆಂದು ಆಗ್ರಹಿಸಿ ಯುವ‌ಮೋರ್ಚಾ ಕಾರ್ಯಕರ್ತರು ಕಾಸರಗೋಡಿನ ಅಶ್ವಿ‌ನಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ  ನಡೆಸಿದರು. ರಸ್ತೆ ತಡೆ ಚಳವಳಿಯನ್ನು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ವಿಜಯ ಕುಮಾರ್‌ ರೈ ಅವರು ಉದ್ಘಾಟಿಸಿದರು. ಕೇಂದ್ರ ಸರಕಾರ ಈಗಾಗಲೇ ತಲಪಾಡಿ […]

ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ಸೋಮವಾರ ನಾಮಪತ್ರ ಸಲ್ಲಿಕೆ

Saturday, April 21st, 2018
Harish Poonja

ಬೆಳ್ತಂಗಡಿ : ಬೆಳ್ತಂಗಡಿಯ ವಿಧಾನ ಸಭಾ ಕ್ಷೇತ್ರಕ್ಕೆ  ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ಯುವ ರಾಜಕಾರಣಿ, ಹಾಗೂ ಉದ್ಯಮಿ ಹರೀಶ್ ಪೂಂಜ ಸೋಮವಾರ ನಾಮಪತ್ರ  ಸಲ್ಲಿಸಲಿದ್ದಾರೆ . ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು,  ಎಬಿವಿಪಿ ಮೂಲಕ ವಿದ್ಯಾರ್ಥಿ ಹೋರಾಟ ಕ್ಷೇತ್ರದಲ್ಲಿ ಸಂಘಟನಾ ಚತುರತೆ ಮೆರೆದಿರುವ ಅವರು ಬೆಳ್ತಂಗಡಿ ತಾಲ್ಲೂಕಿನ ಮಾತ್ರವಲ್ಲದೇ ಹಲವಾರು ದೇವಸ್ಥಾನಗಳ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವದಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದಾರೆ. ಎ.ಬಿ.ವಿ.ಪಿ […]

ಜನಚೇತನ ಯಾತ್ರೆಗೆ ಜಿಲ್ಲೆಯಲ್ಲಿ ಈಗಾಗಲೇ ಉತ್ಸಾಹದ ವಾತಾವರಣ ಮೂಡಿದೆ : ರವಿ

Tuesday, October 25th, 2011
CT Ravi

ಮಂಗಳೂರು: ಆಡ್ವಾಣಿಯವರ ಜನಚೇತನ ಯಾತ್ರೆಯ ಸಿದ್ಧತೆ ಕುರಿತಂತೆ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿವರಣೆ ನೀಡಿದರು. ಅಕ್ಟೋಬರ್ 31 ರಂದು ಜನಚೇತನ ಯಾತ್ರೆ ಮಂಗಳೂರು ನಗರಕ್ಕೆ ಬರಲಿದೆ. ನಗರದ ಕೇಂದ್ರ ಮೈದಾನಿನಲ್ಲಿ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದ್ದು ಬಳಿಕ ಯಾತ್ರೆ ಉಡುಪಿಗೆ ತೆರಳಲಿದೆ. ಯಾತ್ರೆಯ ಕುರಿತಂತೆ 30 ವಿವಿಧ ವಿಭಾಗಗಳನ್ನು ರಚಿಸಲಾಗಿದ್ದು ಸಿದ್ದತೆಯಲ್ಲಿ ಕಾರ್ಯೊನ್ಮುಖವಾಗಿದೆ. ಯುವಮೋರ್ಚಾದಿಂದ ಯುವಜಾಗೃತಿ ರಥಯಾತ್ರೆ ನಡೆಯಲಿದ್ದು ಜಿಲ್ಲೆಯ 8 ವಿಧಾನಸಭಾ […]