ಯೋಗಿ ಮುಖಕ್ಕೆ ಚಪ್ಪಲಿಯಲ್ಲಿ ಹೊಡಿಯಬೇಕು ಎನಿಸಿತ್ತು: ವ್ಯಗ್ರರಾದ ಉದ್ಧವ್‌

Saturday, May 26th, 2018
yogi-adithyanath

ಮುಂಬೈ: ಶಿವಸೇನೆ ಮುಖ್ಯಸ್ಥ ಉದ್ಧವ್‌‌ ಠಾಕ್ರೆ ತಮ್ಮ ಸಾಮ್ನಾ ಪತ್ರಿಕೆಯಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ವಿರುದ್ಧ ವಿವಾದಾತ್ಮಕ ಬರಹ ಪ್ರಕಟಿಸಿದ್ದಾರೆ. ಸಿಎಂ ಯೋಗಿಯನ್ನು ಅವರ ಚಪ್ಪಲಿಯಿಂದಲೇ ಅವರ ಮುಖಕ್ಕೆ ಹೊಡೆಯಬೇಕೆಂದು ಶಿವಸೇನಾ ವರಿಷ್ಠ ಉದ್ಧವ್‌ ಠಾಕ್ರೆಗೆ ಅನಿಸಿತ್ತಂತೆ. ಹೀಗಂತಾ ಅವರೇ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಹೊಸ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಪಲ್ಗಾರ್‌ಗೆ ಭೇಟಿ ನೀಡಿದ್ದ ವೇಳೆ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಸ್ಪಷ್ಟನಮನ ಸಲ್ಲಿಸುವಾಗ ಸಿಎಂ ಯೋಗಿ ಚಪ್ಪಲಿ ಧರಿಸಿದ್ದರ […]

ನಾನು ಭಾರತೀಯ ಮಹಿಳೆ ಎಂದು ಹೇಳಲು ನಾಚಿಕೆಯಾಗುತ್ತಿದೆ : ಪ್ರತಿಭಾ ಕುಳಾಯಿ

Monday, April 16th, 2018
prathiba-speach

ಮಂಗಳೂರು : ಉನ್ನಾವೋ, ಕಥುವಾ ಅತ್ಯಾಚಾರ ಪ್ರಕರಣ ಸಂಬಂಧ ಮಾತನಾಡಿದ ಪ್ರತಿಭಾ ಕುಳಾಯಿ ಅವರು ತುಂಬಾ ಹೆಣ್ಮಕ್ಕಳು ಈ ದೇಶದಲ್ಲಿ ಅತ್ಯಾಚಾರಕ್ಕೊಳಗಾಗಿದ್ದಾರೆ.ನಾನು ಭಾರತೀಯ ಮಹಿಳೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಹಿಂದೂ, ಆದರೆ ಬಿಜೆಪಿ ಹಿಂದೂ ಅಲ್ಲ. ವಿಶ್ವದಲ್ಲಿ ಗಂಡು, ಹೆಣ್ಣು ಜಾತಿ ಮಾತ್ರ ಇರುವುದು. ನನಗೆ, ನಮಗೆ ಖಂಡಿತಾ ಜಾತಿ ಇಲ್ಲ. ಭಾರತ ಮಾತೆ ಅನ್ನುವವರು ಮಹಿಳೆಯರಿಗೆ ರಕ್ಷಣೆ ಕೊಡುತ್ತಿಲ್ಲ. ಸ್ವತಃ ನಾನು ಕೂಡಾ ಹಿಂಸೆ ಅನುಭವಿಸಿದ್ದೇನೆ. ಅದಕ್ಕಾಗಿ ಯಾರು ರಕ್ಷಣೆ […]

ಯೋಗಿ, ಅಮಿತ್ ಶಾ ಬಂದರೂ ಬಿಜೆಪಿ ಗೆಲ್ಲುವುದಿಲ್ಲ : ಸಿದ್ದರಾಮಯ್ಯ

Wednesday, March 21st, 2018
siddaramaih

ಮಂಗಳೂರು: ‘ಕರ್ನಾಟಕ ಶಿಶುನಾಳ ಷರೀಫ, ಬಸವಣ್ಣ ಅವರ ನಾಡು. ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಎಷ್ಟು ಬಾರಿ ಬೇಕಾರೂ ಬರಲಿ, ಅವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಸಂಜೆ ಮಂಗಳೂರಿನ ನೆಹರು ಮೈದಾನದಲ್ಲಿ ಜನಾಶೀರ್ವಾದ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬೃಹತ್ ಸಮಾವೇಶ ಕರಾವಳಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಯಿತು. ಕಾಂಗ್ರೆಸ್ ಪಾಂಡವರಂತೆ, ಬಿಜೆಪಿ ಕೌರವರಂತೆ : ರಾಹುಲ್ ಗಾಂಧಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ […]

ಯೋಗಿ ಆಟ ಕರ್ನಾಟಕದಲ್ಲಿ ನಡೆಯಲ್ಲ: ರಮಾನಾಥ ರೈ

Friday, March 16th, 2018
ramanath-rai

ಮಂಗಳೂರು: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ತನ್ನ ಸ್ಟಾರ್ ಪ್ರಚಾರಕ ಎಂದು ಬಿಂಬಿಸುತ್ತಾ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಅವರನ್ನು ಬಳಸಿಕೊಂಡು ಮತ ಪಡೆಯಲು ನಿರ್ಧರಿಸಿದೆ. ಆದರೆ, ಈಗ ಆದಿತ್ಯನಾಥ್ ಅವರು ಮುಗ್ಗರಿಸಿ ಬಿದ್ದಿದ್ದಾರೆ. ಬಿಜೆಪಿಯ ಸ್ಟಾರ್ ಪ್ರಚಾರಕ ಇನ್ನು ಸುಲಭದಲ್ಲಿ ಏಳೋದು ಕಷ್ಟ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಲೇವಡಿ ಮಾಡಿದರು. ಪುತ್ತೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂವತ್ತು ವರ್ಷಗಳಿಂದ ಬಿಜೆಪಿಯನ್ನೇ ಗೆಲ್ಲಿಸುತ್ತಾ ಬಂದಿರುವ ಮತ್ತು ಯೋಗಿ […]

ಕರ್ನಾಟಕದಲ್ಲಿ ಭಾಷಣ ಬಿಗಿಯುವ ಬದಲು, ಉತ್ತರ ಪ್ರದೇಶದ ಬಗ್ಗೆ ಯೋಗಿ ತಲೆಕೆಡಿಸಿಕೊಳ್ಳಲಿ: ಸಿದ್ದರಾಮಯ್ಯ

Thursday, March 15th, 2018
siddaramaih

ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕರ್ನಾಟಕದಲ್ಲಿ ಭಾಷಣ ಬಿಗಿಯುವ ಬದಲು, ಉತ್ತರ ಪ್ರದೇಶದ ಬಗ್ಗೆ ಯೋಗಿ ತಲೆಕೆಡಿಸಿಕೊಳ್ಳಲಿ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ. ಈ ಹಿಂದೆಯೂ ಟ್ವಿಟರ್‌‌ನಲ್ಲಿ ಪರಸ್ಪರ ಇಬ್ಬರು ಮುಖಂಡರು ವಾಗ್ದಾಳಿ ನಡೆಸಿದ್ದರು. ಈಗ ಯೋಗಿ ತವರು ಕ್ಷೇತ್ರ ಗೋರಖ್‌ಪುರದಲ್ಲಿ ಬಿಜೆಪಿ ಸೊಲುಂಡಿರುವುದ್ದಕ್ಕೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಉತ್ತರ ಪ್ರದೇಶದ ಅಭಿವೃದ್ಧಿಯ ಬಗ್ಗೆ ಗಮನ […]