ಎಪಿಎಂಸಿ ಅಧ್ಯಕ್ಷರಾಗಿ ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ರಜನಿ ದುಗ್ಗಣ್ಣ ಆಯ್ಕೆ

Wednesday, July 15th, 2020
APMc

ಮಂಗಳೂರು : ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಹಿರಿಯ ಸದಸ್ಯ ಮೂಡಬಿದ್ರೆಯ ಕೃಷ್ಣರಾಜ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾರ್ಕಳ ತಾಲೂಕು ಪಂಚಾಯತ್‌ ಸದಸ್ಯರಾಗಿ,ಮಂಡಲ ಪ್ರಧಾನರಾಗಿ, ಮೂಡಬಿದ್ರೆ ಪುರಸಭೆಯ ಸದಸ್ಯರಾಗಿ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ, ಕೆಎಸ್‌ಆರ್‌ಟಿಸಿ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಮೇಯರ್‌ ರಜನಿ ದುಗ್ಗಣ್ಣ ಆಯ್ಕೆಯಾಗಿದ್ದು, ಅವರು  ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಉಳ್ಳಾಲದ ರಾಣಿ ಅಬ್ಬಕ ಉತ್ಸವಕ್ಕೆ ಅದ್ದೂರಿ ಚಾಲನೆ

Saturday, January 29th, 2011
ವೀರ ರಾಣಿ ಅಬ್ಬಕ ಉತ್ಸವ

ಕೋಣಾಜೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ವೀರ ರಾಣಿ ಅಬ್ಬಕ ಉತ್ಸವ ಸಮಿತಿ ವತಿಯಿಂದ ಮಂಗಳೂರು ಹೊರವಲಯ ಅಸೈಗೋಳಿಯ ರಾಣಿ ಅಬ್ಬಕ್ಕ ವೇದಿಕೆಯಲ್ಲಿ ಮೇಯರ್ ರಜನಿ ದುಗ್ಗಣ್ಣ ದೀಪ ಬೆಳಗಿಸುವುದರ ಮೂಲಕ ವೀರ ರಾಣಿ ಅಬ್ಬಕ್ಕ ಉತ್ಸವ 2011ಕ್ಕೆ ಚಾಲನೆ ನೀಡಿದರು. ಜನಪದ ದಿಬ್ಬಣದ ವಿಶೇಷ ಆಕರ್ಷಣೆಗಳಾದ ಪೂರ್ಣಕೊಂಭ, ಮಂಗಳವಾದ್ಯ, ಕೀಲುಕುದುರೆ, ಯಕ್ಷಗಾನ ಗೊಂಬೆ, ಕರಗನೃತ್ಯ, ಬ್ಯಾರಿ ಸಂಪ್ರದಾಯದ ದಫ್, ತಾಲೀಮು ಆಟ, ಕಳಂಜಿ, ಕಂಗೀಲು, ಬಣ್ಣದ ಕೊಡೆಗಳು, ಬ್ಯಾಂಡ್, ಚೆಂಡೆ ವಾದನ, ದೋಣಿಯೇರಿದ […]