ಮಂಗಳೂರು: ನೆರೆ ಸಂತ್ರಸ್ತರ ನಿರ್ಲಕ್ಷ್ಯ – ಕಾಂಗ್ರೆಸ್ ಪ್ರತಿಭಟನೆ

Thursday, September 12th, 2019
Congress-protest

ಮಂಗಳೂರು: ಕರ್ನಾಟಕ ನೆರೆ ಸಂತ್ರಸ್ತರ ಬಗ್ಗೆ ನಿರ್ಲಕ್ಷ ತೋರಿದ ಕೇಂದ್ರದ ಹಾಗೂ ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯಿತು. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಮೇಯರ್ ಕವಿತಾ ಸನಿಲ್ ಮೊದಲಾದವರು ಹಾಜರಿದ್ದರು.

ಹಾಡಿನ ಮೂಲಕ ರಂಜಿಸಿದ ಮಾಜಿ ಸಚಿವ ರಮಾನಾಥ್ ರೈ..!

Monday, September 17th, 2018
ramanath-rai

ಮಂಗಳೂರು: ಸದಾ ಸಕ್ರೀಯ ರಾಜಕೀಯ ಚಟುವಟಿಕೆ, ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದ ಮಾಜಿ ಸಚಿವ ರಮಾನಾಥ್ ರೈ ಈ ಬಾರಿ ಕಾರ್ಯಕ್ರಮವೊಂದರಲ್ಲಿ ಸುಶ್ರಾವ್ಯವಾಗಿ ಹಳೆ ಹಿಂದಿ ಚಿತ್ರಗೀತೆಯೊಂದನ್ನು ಹಾಡಿ ಜನರನ್ನು ರಂಜಿಸುವ ಮೂಲಕ ಸುದ್ದಿಯಲ್ಲಿದ್ದಾರೆ. ರಮಾನಾಥ್ ರೈ ರಾಜಕಾರಣದಿಂದ ಬಿಡುವು ಪಡೆದುಕೊಳ್ಳುವುದು ಬಲು ಅಪರೂಪ ಅಂತಾನೇ ಹೇಳಬಹುದು. ವಿದ್ಯಾರ್ಥಿ ಜೀವನದ ದಿನಗಳಲ್ಲಿ ರೈ ಖ್ಯಾತ ಕ್ರೀಡಾಪಟು ಆಗಿದ್ದರು. ಅದಲ್ಲದೇ ಸಂಗೀತ ಪ್ರೇಮಿ ಕೂಡ. ಕಾಲೇಜು ದಿನಗಳಲ್ಲಿ ಸ್ಟೇಜ್ ಮೇಲೆ ಸುಶ್ರಾವ್ಯವಾಗಿ ಹಾಡುತ್ತಿದ್ದರು. ಬಂಟ್ವಾಳದಲ್ಲಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಒಂದರಲ್ಲಿ […]

ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ: ರಮಾನಾಥ್ ರೈ

Tuesday, July 17th, 2018
ramanath-rai

ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಬಿಜೆಪಿ ಎಂದರೆ ಭಾರತೀಯ ಜೂಟ್ (ಸುಳ್ಳು) ಪಾರ್ಟಿ ಎಂದು ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕ ಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಹೊರಗಿರುವ ಕಪ್ಪು ಹಣವನ್ನು ತರುವುದಾಗಿ ಬಡಾಯಿ ಕೊಚ್ಚಿದ್ದ ನರೇಂದ್ರ ಮೋದಿ ಅವರು ಈವರೆಗೆ ಕಪ್ಪುಹಣ ತಂದಿಲ್ಲ ಎಂದರು. ಕಪ್ಪು ಹಣ ತಂದರೆ ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರುಪಾಯಿ ಹಾಕುವುದಾಗಿ […]

ಕಾನತ್ತೂರಿನಲ್ಲಿ ಏನು ಪ್ರಾರ್ಥನೆ ಮಾಡಿದ್ದೇನೆ ಅನ್ನೋದು ನನಗೆ, ದೈವಗಳಿಗೆ ಬಿಟ್ಟಿದ್ದು : ರಮಾನಾಥ್ ರೈ

Monday, June 11th, 2018
Kanathoor

ಮಂಗಳೂರು : ಬಂಟ್ವಾಳದ ಬಿಸಿ ರೋಡ್ ನಲ್ಲಿ ಹತ್ಯೆಗೀಡಾಗಿದ್ದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆಗೆ ರಮಾನಾಥ್ ರೈ ಅವರೇ ಕಾರಣ ಅವರ ಬೆಂಬಲಿಗರು ಇದನ್ನು ಮಾಡಿದ್ದಾರೆ ಎಂಬ ವ್ಯವಸ್ಥಿತ ಅಪಪ್ರಚಾರ ಮಾಡಿದ ಕಾರಣ ತಮಗೆ ಸೋಲಾಗಿದೆ ಎಂಬುದು  ಸುಳ್ಳು,  ಅವರಿಗೆ ಶಿಕ್ಷೆ ಆಗಬೇಕು  ಎಂದು ಕಾನತ್ತೂರಿಗೆ ಭೇಟಿ ನೀಡಿ ದೈವಗಳ ಸನ್ನಿಧಾನದಲ್ಲಿ ದೂರು ನೀಡಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7 ಕಾಂಗ್ರೆಸ್ ಹೀನಾಯವಾಗಿ ಸೋತಿದೆ. […]

ಎಲೆಕ್ಟ್ರಾನಿಕ್ ಮತಯಂತ್ರದ ಬಗ್ಗೆ ಅನುಮಾನ ಇದೆ: ರಮಾನಾಥ್ ರೈ

Tuesday, May 15th, 2018
ramanath-rai

ಮಂಗಳೂರು: ಎಲೆಕ್ಟ್ರಾನಿಕ್ ಮತಯಂತ್ರದ ಬಗ್ಗೆ ಅನುಮಾನ ಇದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿದ್ದೇವೆ ಎಂದು ಸಚಿವ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ರಮಾನಾಥ್ ರೈ ಹೇಳಿದ್ದಾರೆ. ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ರೈ, ನಮಗೆ ಕೆಲವು ಬೂತ್ ಗಳಲ್ಲಿ ನಮ್ಮ ಅನುಮಾನಕ್ಕೆ ಪುಷ್ಟಿ ಸಿಕ್ಕಿದೆ. ಚುನಾವಣೆಯಲ್ಲಿ ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿದೆ. ಆದಾಯ ತೆರಿಗೆ ದಾಳಿ ನನ್ನ ರಾಜಕೀಯ ಜೀವನದಲ್ಲೇ ಕಂಡುಕೇಳರಿಯದ ಹಾಗೆ ನಡೆದಿದೆ ಎಂದು ಆರೋಪಿಸಿದರು.

ನಾನು ಹಿಂದೂಗಳ ಮತ ಬೇಡ ಅಂತ ಹೇಳಿಲ್ಲ : ರಮಾನಾಥ್ ರೈ

Tuesday, May 8th, 2018
ramanath-rai

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಪ್ರಬಲ ಶಕ್ತಿಯಾಗಿ ಹೊರಹೊಮ್ಮುವ ಸೂಚನೆ ಸಿಕ್ಕಿದೆ ಎಂದು ಸಚಿವ ರಮಾನಾಥ್ ರೈ ಹೇಳಿದ್ರು. ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ನಮ್ಮ ಸಾಧನೆಯನ್ನು ಜನರು ಒಪ್ಪಿಕೊಂಡಿದ್ದಾರೆ. ಆದರೆ, ಬಿಜೆಪಿಗೆ ಅಪಪ್ರಚಾರವೇ ಚುನಾವಣಾ ಅಸ್ತ್ರ. ಇದಕ್ಕೆ ಕಿವಿಗೊಡಬೇಡಿ. ಅಭಿವೃದ್ಧಿಗೆ ಬೆಂಬಲ ಕೊಡಿ, ನಮಗೆ ಮತ ನೀಡಿ ಎಂದು ಮನವಿ ಮಾಡಿದರು. ಇನ್ನು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಹಿಂದೂಗಳ ಮತ […]

ಎಸ್ ಡಿ ಪಿ‌ ಐ ಗೆ ಹಣ ಕೊಟ್ಟು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ: ಹರಿಕೃಷ್ಣ ಬಂಟ್ವಾಳ

Saturday, April 28th, 2018
harikrishna-bantwal

ಮಂಗಳೂರು: ಎಸ್ ಡಿ ಪಿ ಐ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ. ಕಾಂಗ್ರೆಸ್ ವರದಕ್ಷಿಣೆ ಕೊಟ್ಟು ಎಸ್.ಡಿ.ಪಿ.ಐನೊಂದಿಗೆ ನಿಖಾ‌ ಮಾಡಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವರದಕ್ಷಿಣೆ ಕೊಟ್ಟು ಎಸ್ ಡಿ ಪಿ ಐ ನೊಂದಿಗೆ ನಿಖಾ‌ ಮಾಡಿದೆ. ಎಸ್ ಡಿ ಪಿ‌ ಐ ಗೆ ಹಣ ಕೊಟ್ಟು ಹೊಂದಾಣಿಕೆ ಮಾಡಿದೆ ಎಂದು ಸುದ್ದಿ ಹರಿದಾಡುತ್ತಿದೆ. ಇದರ ಹಿಂದೆ ರಮನಾಥ ರೈ ಇದ್ದಾರೆ. ಹಿಂದೊಮ್ಮೆ ‌ರಮನಾಥ ರೈ […]

ನಳಿನ್ ಗೆ ಬಿಜೆಪಿ ಕಾರ್ಯಕರ್ತರೇ ವಿಶ್ರಾಂತಿ ನೀಡಲಿದ್ದಾರೆ: ರಮಾನಾಥ್ ರೈ

Tuesday, April 24th, 2018
congress

ಮಂಗಳೂರು : ಬಿಜೆಪಿ ಪೂರ್ತಿ ಗೊಂದಲದ ಗೂಡಾಗಿದೆ. ಬಿಜೆಪಿ ಹಿರಿಯ ನಾಯಕರನ್ನೇ ಕಾರ್ಯಕರ್ತರು ಅವಾಚ್ಯವಾಗಿ ನಿಂದಿಸುತ್ತಿದ್ದಾರೆ . ಬಿಜೆಪಿ ಕಾರ್ಯಕರ್ತರೇ ಬಿಜೆಪಿ ನಾಯಕರಿಗೆ ವಿಶ್ರಾಂತಿ ಕೊಡಲಿದ್ದಾರೆ ಎಂದು ಸಚಿವ ರಮಾನಾಥ್ ರೈ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಗೆ ಬೆಂಗಳೂರಿನಲ್ಲಿ ಎಂಟು ಬಾಗಿಲು ಇದೆ. ದಕ್ಷಿಣ ಕನ್ನಡದ ಬಿಜೆಪಿಗೆ ಐದು ಬಾಗಿಲು ತೆರೆದುಕೊಂಡಿದೆ ಎಂದು ಲೇವಡಿ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಬಿಜೆಪಿ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲಾ ಕಾಂಗ್ರೆಸ್ ಗೆ ಶೀಘ್ರದಲ್ಲೇ ಸೇರ್ಪಡೆಯಾಗಲಿದ್ದಾರೆ. […]

ಬಿಜೆಪಿಯವರು ವೋಟಿಗಾಗಿ ರಾಮಭಕ್ತರು, ನಾವು ನೈಜ ರಾಮಭಕ್ತರು: ರಮಾನಾಥ್‌ ರೈ

Tuesday, February 27th, 2018
ramanath-rai

ಮಂಗಳೂರು: ಬಿಜೆಪಿಯವರು ಅನ್ಯಧರ್ಮವನ್ನು ದ್ವೇಷ ಮಾಡುವ ಭಾಷಣ ಮಾಡಿ ಸುಲಭವಾಗಿ ಹಿಂದೂ ಮುಖಂಡರಾಗುತ್ತಾರೆ. ಆದರೆ ಹಿಂದೂ ಧರ್ಮಕ್ಕೆ ಒಂದು ಪೈಸೆ ದೇಣಿಗೆ ನೀಡುವುದಿಲ್ಲ ಎಂದು ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ. ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಚಿವ ರೈ, ಬಿಜೆಪಿಯವರು ವೋಟಿಗಾಗಿ ರಾಮಭಕ್ತರಾಗಿದ್ದಾರೆ. ಆದರೆ ಕಾಂಗ್ರೆಸ್‌ನವರು ನೈಜ ರಾಮಭಕ್ತರು. ನಾನು ಪ್ರತಿದಿನ ರಾಮಯಣದ ಶ್ಲೋಕವನ್ನು ಹೇಳಿಯೇ ದಿನಚರಿ ಆರಂಭಿಸುತ್ತೇನೆ ಎಂದಿದ್ದಾರೆ. ಬಿಜೆಪಿಯಲ್ಲಿ ಕೆಲವರು ಅನ್ಯಧರ್ಮವನ್ನು ದ್ವೇಷ ಮಾಡುವ ಭಾಷಣ ಮಾಡಿ ಸುಲಭವಾಗಿ ಹಿಂದೂ ಮುಖಂಡರಾಗುತ್ತಾರೆ. […]

ಕಟೀಲು ದುರ್ಗಾಪರಮೇಶ್ವರಿ ದೇವರ ಮೊರೆ ಹೋದ ರಮಾನಾಥ್ ರೈ

Wednesday, February 14th, 2018
kateelu

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2018 ಸಮೀಪಿಸುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಯಕ್ಷಗಾನದ ಮೊರೆ ಹೋಗಿದ್ದಾರೆ. ತಮ್ಮ ಮನೆಯಲ್ಲಿ ಕಟೀಲು ಮೇಳದ ಶ್ರೀದೇವಿ ಮಹಾತ್ಮೆ ಯಕ್ಷಗಾನವನ್ನು ಅವರು ಆಯೋಜಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಸಫಲತೆಗೆ ಪ್ರಾರ್ಥಿಸಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವರ ಮೊರೆ ಹೋಗಿದ್ದಾರೆ. ಹಾಗೆ ನೋಡಿದರೆ ರಮಾನಾಥ ರೈ ಅವರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ನಡೆಯುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಫೆ. 24 ರಂದು ರಮನಾಥ್ ರೈ […]