ಕೃಷ್ಣಕುಮಾರ್ ಪೂಂಜಾಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Thursday, November 29th, 2018
karnataka

ಮಂಗಳೂರು: ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಆರೋಗ್ಯ ಶಿಬಿರ ಮೊದಲಾದ ಸೇವಾ ಕಾರ್ಯಗಳಿಂದ ನಿರಂತರವಾಗಿ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿದ್ದಾರೆ. ವಿಜಯಾ ಬ್ಯಾಂಕ್ ಉದ್ಯೋಗಿಯಾಗಿದ್ದ ಕೃಷ್ಣ ಕುಮಾರ್ ಪೂಂಜಾ 2001ರಿಂದ ಸ್ವಯಂ ನಿವೃತ್ತಿ ಪಡೆದುಕೊಂಡು ಸದ್ಯ ಹಲವಾರು ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ 20 ವರ್ಷಗಳಿಂದ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರ, 99 […]

ವೈಶಾಲಿ ಕಾಸರವಳ್ಳಿ ಅಂತಿಮ ಯಾತ್ರೆ

Tuesday, September 28th, 2010
ವೈಶಾಲಿ ಕಾಸರವಳ್ಳಿ

ಬೆಂಗಳೂರು  : ಕನ್ನಡ ಚಿತ್ರರಂಗದಲ್ಲಿ ಬೆಳ್ಳಿ ಪರದೆ ಮತ್ತು  ಕಿರುತೆರೆ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿದ ಹಿರಿಯ ನಟಿ  ವೈಶಾಲಿ ಕಾಸರವಳ್ಳಿ ಅವರ ಅಂತ್ಯಸಂಸ್ಕಾರ ಇಂದು ಸಂಜೆ ನಾಲ್ಕು ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ. ವೈಶಾಲಿ ಕಾಸರವಳ್ಳಿ ದೀರ್ಘ ಕಾಲದ ಅನಾರೋಗ್ಯದಿಂದ ಚೇತರಿಸದೆ ಸೋಮವಾರ ನಿಧನರಾಗಿದ್ದಾರೆ. ರಂಗಭೂಮಿಯಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ವೈಶಾಲಿ ಕಾಸರವಳ್ಳಿ ನಿರ್ದೇಶಕಿ, ವಸ್ತ್ರವಿನ್ಯಾಸಕಿ ನಟಿಯೂ ಆಗಿದ್ದರು, ಪತಿ, ಖ್ಯಾತ ನಿರ್ದೇಶಕ ಗಿರೀಶ ಕಾಸರವಳ್ಳಿ, ಪುತ್ರಿ ಅನನ್ಯ ಹಾಗೂ ಪುತ್ರ ಅಪೂರ್ವ ಅವರನ್ನು ಅಗಲಿದ್ದಾರೆ. […]