ದುಬೈನಲ್ಲಿ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು

Friday, February 23rd, 2024
ದುಬೈನಲ್ಲಿ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು

ಮಂಗಳೂರು : ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಉಳ್ಳಾಲ ಮೂಲದ ಯುವತಿ ಸಾವನ್ನಪ್ಪಿದ್ದಾರೆ. ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ವಿಧಿವಶರಾದ ದುರ್ದೈವಿ. ಇವರು ಮಂಗಳೂರು ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷೆ ಬಿಜೆಪಿ ಮುಖಂಡೆ ರಾಜೀವಿ ಹಾಗೂ ವಿಠಲ ಕುಲಾಲ್ ದಂಪತಿಯ ಏಕೈಕ ಪುತ್ರಿ. ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬಳಿಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು. ಬಳಿಕ […]

ಮಹಾರಾಷ್ಟ್ರದ ಸಾಂಗ್ಯೋಲಾ ಬಳಿಕ ರಸ್ತೆ ಅಪಘಾತ : ಐವರು ವಿಠಲನ ಭಕ್ತರು ಮೃತ್ಯು

Friday, November 8th, 2019
apghata

ಬೆಳಗಾವಿ : ಏಕಾದಶಿಯ ಅಂಗವಾಗಿ ಪಂಢರಪುರದ ವಿಠಲನ ದರ್ಶನಕ್ಕಾಗಿ ಹೋಗುತ್ತಿದ್ದ ಬೆಳಗಾವಿಯ ಐವರು ಭಕ್ತರು ಮಹಾರಾಷ್ಟ್ರ ದ ಸಾಂಗೋಲ್ಯಾ ಬಳಿ ಶುಕ್ರವಾರ ಬೆಳಗ್ಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ಕೆ.ವಿ. ಕಣಬರಕರ, ಮಹಾದೇವ ಎಂ.ಕಣಬರಕರ , ಬಾಳು ಅಂಬೇವಾಡಿಕರ, ಅರುಣ ಮುತಗೇಕರ ಹಾಗೂ ಹಂಗರಗಾ ಗ್ರಾಮದ ಎ.ಪಾಟೀಲ ಎಂದು ಗುರುತಿಸಲಾಗಿದೆ. ಎಂ.ಸಾಳವಿ, ಗಣಪತ ದಳವಿ, ಪರಶುರಾಮ ದಳವಿ ಗಾಯಗೊಂಡಿದ್ದಾರೆ. ಮಂಡೋಳಿ ಗ್ರಾಮದಿಂದ ಗುರುವಾರ ರಾತ್ರಿ ಟೆಂಪೋದಲ್ಲಿ ಪಂಢರಪುರಕ್ಕೆ ತೆರಳಿದ್ದರು. ಮಹಾರಾಷ್ಟ್ರದ ಸಾಂಗೋಲ್ಯಾ […]

ರಸ್ತೆ ಅಪಘಾತ: ಪತ್ರಕರ್ತ ಹೇಮಾಚಾರ್ಯರ ಪುತ್ರ ಮೃತ್ಯು

Saturday, December 23rd, 2017
road-accident

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕುಂಟಿಕಾನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕರೊಬ್ಬರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ದಾಯ್ಜಿವರ್ಲ್ಡ್ ಸಾಪ್ತಾಹಿಕದ ಪ್ರಧಾನ ಸಂಪಾದಕ ಹೇಮಾಚಾರ್ಯರ ಪುತ್ರ ಇಯಾನ್ ಮಸ್ಕರೇನ್ಹಸ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಂಟಿಕಾನದಲ್ಲಿ ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದು ಅಪಘಾತ ಸಂಭವಿಸಿತ್ತು. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡವರಲ್ಲಿ ಇಯಾನ್ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಪುತ್ತೂರು: ಭೀಕರ ರಸ್ತೆ ಅಪಘಾತ, ವಿದ್ಯಾರ್ಥಿನಿ ಮೃತ್ಯು

Wednesday, October 25th, 2017
road accident

ಮಂಗಳೂರು:ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ  ದ್ವಿ ಚಕ್ರ ವಾಹನವೊಂದು ರಸ್ತೆ ವಿಭಜಕಕ್ಕೆ ಢಿಕ್ಕಿಯಾದ ಪರಿಣಾಮ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಪುತ್ತೂರು ನಗರದ ದರ್ಬೆ ಎಂಬಲ್ಲಿ ನಡೆದಿದೆ. ಇಲ್ಲಿನ ಕೂರ್ನಡ್ಕ ನಿವಾಸಿ, ನಗರದ ಸಿಟಿ ಬಝಾರ್ ಅಂಗಡಿಯ ಮಾಲಕ ಹಸೈನಾರ್ ಹಾಜಿ ಎಂಬವರ ಪುತ್ರಿ ಮರಿಯಮ್ ಸಮ್ರೀನಾ (18) ಮೃತರು ಎಂದು ಗುರುತಿಸಲಾಗಿದೆ. ಮರಿಯಮ್ ಅವರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಕಾಲೇಜಿಗೆ ತೆರಳಲೆಂದು ಮನೆಯಿಂದ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. […]

ಕಾರು ಹಾಗೂ ಟ್ರಕ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ದಾರುಣ ಸಾವು

Wednesday, January 4th, 2017
Car-truck-collision

ಮಂಗಳೂರು: ಬೆಳ್ಳಂಬೆಳಗ್ಗೆ ಕಾರು ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ತಂದೆ, ತಾಯಿ, ಮಗ ಹಾಗೂ ಓರ್ವ ಯುವಕ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಇಲ್ಲಿನ ಮಂಜೇಶ್ವರದ ಎ.ಜೆ ಆಂಗ್ಲ ಮಾಧ್ಯಮ ಶಾಲಾ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ 4ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೇರಳದ ತ್ರಿಶೂರು ನಿವಾಸಿಗರಾದ ಡಾ. ರಾಮನಾರಾಯಣ ಸಿಕೆ (52) ಪತ್ನಿ ವತ್ಸಲ, ಮಗ ರಂಜಿತ್‌ (20) ಮತ್ತು […]

ಗ್ಯಾಸ್ ಟ್ಯಾಂಕರ್ ಮತ್ತು ಟ್ರ್ಯಾಕ್ಸ್ ತೂಫಾನ್ ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ

Tuesday, June 3rd, 2014
Shiradi Accident

ಮಂಗಳೂರು : ಗ್ಯಾಸ್ ಟ್ಯಾಂಕರ್ ಮತ್ತು ಟ್ರ್ಯಾಕ್ಸ್ ತೂಫಾನ್ ನಡುವೆ ಶಿರಾಡಿಯ ಅಡ್ಡಹೊಳೆ ಸಮೀಪ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, 13 ಜನರು ಗಾಯಗೊಂಡಿದ್ದಾರೆ. ತೂಫಾನ್‌ ಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ದಾವಣಗೆರೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸುಬ್ರಮಣ್ಯ ದೇವರ ದರ್ಶನ ಪಡೆದು ರಾಷ್ಟ್ರೀಯ ಹೆದ್ದಾರಿ 75ರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದಾಗ, ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಸೋಮವಾರ ತೂಫಾನ್‌ ವಾಹನಕ್ಕೆ ಗ್ಯಾಸ್ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಮೃತಪಟ್ಟವರನ್ನು ತೂಫಾನ್ […]

ಕಾಪು : ರಸ್ತೆ ಅಪಘಾತ ದಂಪತಿ ಸಾವು

Wednesday, May 22nd, 2013
bike bus accident Kaup

ಕಾಪು : ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ನ ಚಾಲಕ ಟ್ಯಾಂಕರೊಂದನ್ನು ಹಿಂದಿಕ್ಕುವ ಭರದಲ್ಲಿ ಕೈನೆಟಿಕ್‌ ಹೋಂಡಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಹಳೇ ಮಾರಿಗುಡಿ ದೇವಸ್ಥಾನದ ಮುಂಭಾಗದ ದ್ವಾರದ ಬಳಿ ನಡೆದಿದೆ. ಮೃತರು ಕಾಪು ಪಡು ಗ್ರಾಮದ ತೆಂಕುಕರೆ ಹೊಸಮನೆಯ ಬಾಲಕೃಷ್ಣ ಶೆಟ್ಟಿ(50), ಮತ್ತು ಅವರ ಪತ್ನಿ ಮಮತಾ ಶೆಟ್ಟಿ (40).  ಮೃತ ಬಾಲಕೃಷ್ಣ   ಕುರ್ಕಾಲು -ಸುಭಾಶ್ ನಗರದಲ್ಲಿ ಜೀನಸು ವ್ಯಾಪಾರ ನಡೆಸುತ್ತಿದ್ದು, ಮಂಗಳವಾರ ದಂಪತಿ ಕುರ್ಕಾಲುವಿನಿಂದ ಕಾಪು […]

ಕಾಸರಗೋಡು : ಮೊಗ್ರಾಲ್ ಪುತ್ತೂರು ಪೇಟೆಯಲ್ಲಿ ಭೀಕರ ರಸ್ತೆ ಅಪಘಾತ ಬೈಕ್ ಸವಾರರಿಬ್ಬರ ಸಾವು

Saturday, March 30th, 2013
Mishap at Mogral Puttur

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ಪೇಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮೃತರನ್ನು ಮೊಗ್ರಾಲ್ ಪುತ್ತೂರು ಕೆ.ಕೆ. ರಸ್ತೆಯ ಕುನ್ನಿಲ್‌ನ ಸಾದಿಕ್(19) ಮತ್ತು ಕುನ್ನಿಲ್ ಸಬೀನಾ ಮಂಝಿಲ್‌ನ ಸಮೀರ್ ಆಸಿಫ್ (20) ಎಂದು ಗುರುತಿಸಲಾಗಿದೆ. ಆಟೊ ಪ್ರಯಾಣಿಕರಾದ ಮುಹಮ್ಮದ್ ಎಂಬವರ ಪುತ್ರಿ ಡಾನಿಯಾ ಗಂಭೀರ ಗಾಯ ಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಉಳಿದ ಪ್ರಯಾ ಣಿಕರಾದ ಅಬ್ದುಲ್ ಖಾದರ್ ಎಂಬವರ ಪತ್ನಿ ಮರಿಯಾ, […]

ಕುಲಶೇಖರದ ಬಳಿ ರಸ್ತೆ ಅಪಘಾತ : ಓರ್ವನ ಸಾವು

Wednesday, March 27th, 2013
Accsident near Kulashekar

ಮಂಗಳೂರು : ಇಂದು ಬೆಳಗ್ಗೆ  ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಓಮ್ನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು ಇನ್ನೋರ್ವ ಮಹಿಳೆಗೆ ಗಂಭೀರ ಗಾಯಗೊಂಡ ಘಟನೆ  ಕುಲಶೇಖರದ ಸೇಕ್ರೆಡ್ ಹಾರ್ಟ್ ಸ್ಕೂಲ್ ಬಳಿ ನಡೆದಿದೆ. ವಾಮಂಜೂರಿನಿಂದ ಕುಲಶೇಖರದ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು  ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆಲ್ಬರ್ಟ್ ಫ್ರಾನ್ಸಿಸ್ಕೋ ಹಾಗೂ ಮಹಿಳೆಗೆ ಡಿಕ್ಕಿ ಹೊಡೆಯಿತು ಪರಿಣಾಮ ಆಲ್ಬರ್ಟ್ ಫ್ರಾನ್ಸಿಸ್ಕೋ(60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಚಿಕ್ಕಮಗಳೂರಿನ ಕಡೂರು ಬಳಿ ರಸ್ತೆ ಅಪಘಾತ ಯುವ ವರದಿಗಾರ ಮೃತ್ಯು

Friday, February 22nd, 2013
Sanath Rao

ಮೂಡುಬಿದಿರೆ : ಚಿಕ್ಕಮಗಳೂರಿನ ಕಡೂರು ರಸ್ತೆಯಲ್ಲಿ ಗುರುವಾರ ಸಂಜೆ ನಡೆದ ಅಪಘಾತವೊಂದರಲ್ಲಿ ಮೂಡುಬಿದಿರೆ ಅಲಂಗಾರು ನಿವಾಸಿ, ದಾವಣಗೆರೆ ಟಿವಿ9 ಸುದ್ದಿವಾಹಿನಿಯ ವರದಿಗಾರ ರಾದ ಸನತ್ ರಾವ್(23) ಮೃತಪಟ್ಟಿದ್ದಾರೆ ಸನತ್ ದಾವಣಗೆರೆಯಿಂದ ಮೂಡುಬಿದಿರೆಗೆ ತನ್ನ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಆಲ್ಟೋ ಕಾರಿಗೆ ಢಿಕ್ಕಿಯಾಗಿ ತೀವ್ರ ಗಾಯಗೊಂಡ ಇವರನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸನತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೂಡುಬಿದಿರೆ ಕಡಲಕೆರೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಜಯರಾಮ ರಾವ್ ಹಾಗೂ ಕಲ್ಲಮುಂಡ್ಕೂರ್ ನ ಸಿ.ಆರ್.ಪಿ […]