ಹೆಂಡತಿ ಮಗುವನ್ನು ಹೊರಗೆ ಹಾಕಿ ಮೂರನೇ ಮದುವೆಯಾದ ಭೂಪ

Monday, October 4th, 2021
Raghavendra Kulakarni

ಮೂಡಬಿದ್ರೆ :  ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017 ರ ಜೂನ್ 18 ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದ. ಮದುವೆ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿ ವರದಕ್ಷಿಣೆ ಕೂಡ ಪಡೆದಿದ್ದ. ಮದುವೆಯಾದ […]