“ತಂದೆಯ ನಿರ್ಧಾರದ ಕುರಿತು ಹೆಮ್ಮೆಯಿದೆ” : ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ

Wednesday, March 11th, 2020
sindhiya

ಭೋಪಾಲ್ : ಪಕ್ಷ ತೊರೆದಿರುವ ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ನಡೆಯನ್ನು, ಹಲವರು ಬೆಂಬಲಿಸಿದರೆ ಇನ್ನೂ ಕೆಲವರು ಟೀಕಿಸಿದ್ದಾರೆ. ಸಿಂಧಿಯಾ ಅವರ ಎರಡನೇ ರಾಜಕೀಯ ಇನ್ನಿಂಗ್ಸ್ ಹೇಗಿರುತ್ತದೆ ಎಂಬುದನ್ನು ಕಾದು ನೋಡಲು ಪರ-ವಿರೋಧಿಗಳೂ ಕಾತರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ತಮ್ಮ ತಂದೆಯ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ, ತಂದೆಯ ನಿರ್ಧಾರದ ಕುರಿತು ಹೆಮ್ಮೆಯಿದೆ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಹಾನಾರ್ಯಮನ್ ಸಿಂಧಿಯಾ, ತಂದೆಯ ದೃಢ ನಿರ್ಧಾರಕ್ಕೆ […]