ಸಾಣೂರು ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಹಕ ಮಾಹಿತಿ ಕಾರ‍್ಯಕ್ರಮ

Friday, January 3rd, 2020
karkala

ಕಾರ್ಕಳ : ಕಾರ್ಕಳ ತಾಲ್ಲೂಕಿನ ಸಾಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಹಕ ಮಾಹಿತಿ ಕಾರ‍್ಯಕ್ರಮ ಜನವರಿ 2, 2020 ರಂದು ನಡೆಯಿತು. ಮೂಡುಬಿದಿರೆಯ ಗ್ರಾಹಕ ಸಂಘಟನೆಯ ಅಧ್ಯಕ್ಷ, ರಾಜ್ಯ ಸಂಪನ್ಮೂಲ ವ್ಯಕ್ತಿ, ದ.ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜತೆ ಕಾರ‍್ಯದರ್ಶಿ ರಾಯೀ ರಾಜಕುಮಾರರು ತಮ್ಮ 353 ನೇ ಮಾಹಿತಿ ಕಾರ‍್ಯಕ್ರಮವನ್ನು ನಡೆಸಿಕೊಟ್ಟರು. ಅವರು ತಮ್ಮ ಮಾಹಿತಿ ಕಾರ‍್ಯಕ್ರಮದಲ್ಲಿ ಬಳಕೆದಾರರ ಹಿತರಕ್ಷಣಾ ಕಾಯಿದೆಯ ಎಲ್ಲಾ ಅಂಶಗಳನ್ನೂ ತಿಳಿಸಿಕೊಟ್ಟರು. ಗ್ರಾಹಕ ಹಕ್ಕು ಹಾಗೂ ಕರ್ತವ್ಯಗಳ ಸಂಪೂರ್ಣ ಮಾಹಿತಿಯನ್ನು ಹಲವಾರು […]

ಅಕ್ರಮ ಪಿಸ್ತೂಲ್​​​ ಹೊಂದಿದ್ದ ಆರೋಪಿಯ ಬಂಧನ

Wednesday, November 28th, 2018
pistool

ಕಲಬುರಗಿ: ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಆರೋಪಿಯನ್ನ ಮಾದನ ಹಿಪ್ಪರಗಾ ಪೊಲೀಸರು ಬಂಧಿಸಿದ್ದಾರೆ. ಮಾದನ ಹಿಪ್ಪರಗಾ ಗ್ರಾಮದ ರಾಜಕುಮಾರ ಸಾವರೆ ಬಂಧಿತ ಆರೋಪಿ. ಬಂಧಿತನಿಂದ ಒಂದು ನಾಡ ಪಿಸ್ತೂಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಶಾಂತಪ್ಪ ಮನೆ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದ ಹೊಲದಲ್ಲಿ ಅಕ್ರಮ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಬಂಧಿತ […]