ಸಾಣೂರು ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಹಕ ಮಾಹಿತಿ ಕಾರ್ಯಕ್ರಮ
Friday, January 3rd, 2020ಕಾರ್ಕಳ : ಕಾರ್ಕಳ ತಾಲ್ಲೂಕಿನ ಸಾಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಹಕ ಮಾಹಿತಿ ಕಾರ್ಯಕ್ರಮ ಜನವರಿ 2, 2020 ರಂದು ನಡೆಯಿತು. ಮೂಡುಬಿದಿರೆಯ ಗ್ರಾಹಕ ಸಂಘಟನೆಯ ಅಧ್ಯಕ್ಷ, ರಾಜ್ಯ ಸಂಪನ್ಮೂಲ ವ್ಯಕ್ತಿ, ದ.ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜತೆ ಕಾರ್ಯದರ್ಶಿ ರಾಯೀ ರಾಜಕುಮಾರರು ತಮ್ಮ 353 ನೇ ಮಾಹಿತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ತಮ್ಮ ಮಾಹಿತಿ ಕಾರ್ಯಕ್ರಮದಲ್ಲಿ ಬಳಕೆದಾರರ ಹಿತರಕ್ಷಣಾ ಕಾಯಿದೆಯ ಎಲ್ಲಾ ಅಂಶಗಳನ್ನೂ ತಿಳಿಸಿಕೊಟ್ಟರು. ಗ್ರಾಹಕ ಹಕ್ಕು ಹಾಗೂ ಕರ್ತವ್ಯಗಳ ಸಂಪೂರ್ಣ ಮಾಹಿತಿಯನ್ನು ಹಲವಾರು […]