ನಾನೇನೂ ತಪ್ಪು ಮಾಡಿಲ್ಲ, ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ: ರಮಾನಾಥ ರೈ
Friday, June 15th, 2018ಮಂಗಳೂರು: ತಾಲೂಕಿನ ಪೊಳಲಿಯ ರಾಜರಾಜೇಶ್ವರಿ ದೇವಾಲಯಕ್ಕೆ ನೀಡಲಾದ ಕೊಡಿಮರಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ವಾಗುತ್ತಿರುವುದಾಗಿ ನೊಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರು ಇಂದು ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಜೀರ್ಣೋದ್ಧಾರ ವೇಳೆ ದೇವಾಲಯದ ಮುಂಭಾಗದಲ್ಲಿ ಕೊಡಿಮರವನ್ನು ಪ್ರತಿಷ್ಠಾಪಿಸಲಾಗಿದೆ. ದೇವಾಲದ ಮುಂಭಾದಲ್ಲಿ ಕೊಡಿಮರವನ್ನು ಧ್ವಜಸ್ತಂಭವಾಗಿ ಬಳಸಲಾಗುತ್ತದೆ. ಧ್ವಜಸ್ತಂಭಕ್ಕಾಗಿ ಅರಣ್ಯ ಇಲಾಖೆಯ ಬೆಲೆಬಾಳುವ ಮರವನ್ನು ಕಡಿಯಲಾಗಿತ್ತು. ಮರಕ್ಕೆ ಅರಣ್ಯ ಇಲಾಖೆಯು 21 ಲಕ್ಷ ರೂಪಾಯಿ ಶುಲ್ಕ ವಿಧಿಸಿತ್ತು. ಪೊಳಲಿ ದೇವಸ್ಥಾನದ ಗೌರವಾಧ್ಯಕ್ಷರಾಗಿದ್ದ ರಮಾನಾಥ ರೈಯವರು ಈ […]