ಇಂದೇ ಕರ್ನಾಟಕಕ್ಕೆ ಸಿಎಂ ಆಯ್ಕೆ ಮಾಡಿ ಹೈಕಮಾಂಡ್ ಸೂಚನೆ, ಸಿಎಂ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಈ ವರದಿ ನೋಡಿ !

Tuesday, July 27th, 2021
dharmendra Pradhan

ಮಂಗಳೂರು  : ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ, ಇಂದೇ ಕರ್ನಾಟಕಕ್ಕೆ ಮುಂದಿನ ಸಿಎಂ ಆಯ್ಕೆ ಮಾಡಿ ಎಂದು ಹೈಕಮಾಂಡ್ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್ ಮತ್ತು ಕಿಶನ್ ರೆಡ್ಡಿಅವರಿಗೆ ಸೂಚನೆ ನೀಡಿದೆ. ಹೀಗಾಗಿ ಇಂದೇ ಹೊಸ ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗುತ್ತಿದೆ. ಇಂದು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಗುತ್ತಿದೆ. ಶಾಸಕಾಂಗ ಸಭೆ ಹಿನ್ನೆಲೆ ಬಿಜೆಪಿ ಶಾಸಕರಿಗೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ಮುಂದಿನ ಸಿಎಂ ಯಾರು ಎಂಬುದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರವಾಗಲಿದೆ. ಶಾಸಕಾಂಗ ಪಕ್ಷದ ಸಭೆ […]

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ

Monday, July 26th, 2021
BS Yediyurappa

ಬೆಂಗಳೂರು: ಸರ್ಕಾರ ಎರಡು ವರ್ಷ ಪೂರೈಸುತ್ತಿದ್ದಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಬಿ ಎಸ್ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ […]

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ರಾಜೀನಾಮೆ ಸಲ್ಲಿಸಲು ಕಾರಣವಾದ ವಿಷಯ ಇಲ್ಲಿದೆ ನೋಡಿ !

Friday, June 4th, 2021
shilpa Nagesh

ಮೈಸೂರು: ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಕೇಸ್ ಇಲ್ಲದ ಏರಿಯಾಗಳನ್ನ ರೆಡ್ ಜೋನ್ ಅಂತಾ ಘೋಷಣೆ ಮಾಡಿದ್ದಾರೆ.  ಪಾಲಿಕೆಯ ಕೆಳ ಹಂತದ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವುದನ್ನು ನಾನು ಸಹಿಸುವುದಿಲ್ಲಎಂದು  ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಆರೋಪ  ಹೊರಿಸಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ. ಸೂಕ್ತವಾಗಿ ಕೊರೋನಾ ನಿರ್ವಹಣೆ ಮಾಡಿದರೂ, ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ಬಿಂಬಿಸಲಾಗುತ್ತಿದೆ. ಸಿಎಸ್‌ಆರ್ ಫಂಡ್‌ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ […]

ರಾಸಲೀಲೆ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

Wednesday, March 3rd, 2021
jarakiholi

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ. ಸೆಕ್ಸ್ ಸಿಡಿ ಬಯಲಿಗೆ ಬಂದ ಬೆನ್ನಲ್ಲೇ ಅಜ್ಞಾತ ಸ್ಖಳಕ್ಕೆ ಹೋಗಿರುವ ರಮೇಶ್ ಜಾರಕಿಹೊಳಿ ಅವರು, ಇಂದು ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನದ ಬಳಿಕ ರಾಜಿನಾಮೆ ನೀಡಿದ್ದರು. ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ. ಈ […]

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಸಚಿವ ಸಿ.ಟಿ.ರವಿ ರಾಜೀನಾಮೆ

Sunday, October 4th, 2020
ctRavi

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಒಬ್ಬ ವ್ಯಕ್ತಿಗೆ ಒಂದು ಸ್ಥಾನ ಹಿನ್ನೆಲೆಯಲ್ಲಿ ಸಿ.ಟಿ ರವಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಆದರೆ ಸಿ.ಟಿ ರವಿ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇನ್ನು ಮುಂದೆ ಹೆಚ್ಚಿನ ಸಮಯವನ್ನು ನೀಡಬೇಕಾಗಿರುವುದರಿಂದ ಸಚಿವ […]

ಕಾಂಗ್ರೆಸ್​ಗೆ ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

Tuesday, March 10th, 2020
jyothiradhithya

ನವದೆಹಲಿ : ಕಳೆದೆರಡು ದಿನಗಳಿಂದ ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಗೆ ತಲೆನೋವಾಗಿದ್ದು, ಕಮಲ್ನಾಥ್ ನೇತೃತ್ವದ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳುವ ಸಾಧ್ಯತೆಯಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿದ್ದ ಮತ್ತೊಬ್ಬ ನಾಯಕ ಕಾಂಗ್ರೆಸ್ ತೊರೆದಿದ್ದಾರೆ. ಜತೆಗೆ ಬಿಜೆಪಿಯನ್ನು ಇಂದು ಸಂಜೆಯೇ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಮಿತ್ ಶಾ […]

ಉಪಚುನಾವಣೆಯಲ್ಲಿ ಸೋಲಿಗೆ ಕಾರಣವೇನು ಎಂಬ ಬಗ್ಗೆ ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ; ಡಿಕೆ ಶಿವಕುಮಾರ್​​

Tuesday, December 10th, 2019
DK-Shiv-Kumar

ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಏನು? ಯಾಕೆ ನಮಗೆ ಹಿನ್ನೆಡೆಯಾಯಿತು ಎಂಬ ಬಗ್ಗೆ ಶೀಘ್ರದಲ್ಲಿಯೇ ಬಹಿರಂಗ ಪಡಿಸುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಫಲಿತಾಂಶದ ಕುರಿತು ಇಂದು ಪ್ರತಿಕ್ರಿಯಿಸಿದ ಅವರು, ಚುನಾವಣಾ ಸೋಲಿನ ಬಗ್ಗೆ ಈಗಲೇ ಏನು ಹೇಳುವುದಿಲ್ಲ. ಆದರೆ, ಈ ಸೋಲಿಗೆ ಕಾರಣ ಏನು, ಯಾಕೆ ಹೀಗಾಯ್ತು ಎಂಬ ಬಗ್ಗೆ ಎಲ್ಲವನ್ನು ಸವಿವರವಾಗಿ ಹೇಳುತ್ತೇನೆ. ನಾಡಿನ ಜನರ ಮುಂದೆ ಎಲ್ಲಿ ಏನಾಯ್ತು, ಹೇಗಾಯ್ತು ಎಂಬುದನ್ನು ತಿಳಿಸುತ್ತೇನೆ. ಆದರೆ, […]

ಅಮಿತ್ ಶಾ, ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್​ನಿಂದ ಬೃಹತ್​ ಪ್ರತಿಭಟನೆ

Tuesday, November 5th, 2019
Pratibhatane

ಬೆಂಗಳೂರು: ವೈರಲ್ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿಡಿಯೋ ಸಂಭಾಷಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾಗಿಯಾಗಿದ್ದಾರೆ. ಇಬ್ಬರೂ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಎಂ.ಜಿ. ರಸ್ತೆಯ ಟ್ರಿನಿಟಿ ವೃತ್ತದ ವಿಜಯ ಬ್ಯಾಂಕ್ ಜಂಕ್ಷನ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ವಿವಿಧ ನಾಯಕರು ಭಾಗಿಯಾಗಿದ್ದರು. ಅಮಿತ್ ಶಾ ಹಾಗೂ ಬಿ.ಎಸ್.ಯಡಿಯೂರಪ್ಪ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. […]

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಜೀನಾಮೆ ಸಲ್ಲಿಸಿದ ಅನರ್ಹ ಶಾಸಕ ಕೆ.ಸುಧಾಕರ್

Saturday, September 21st, 2019
sudhakar

ಚಿಕ್ಕಬಳ್ಳಾಪುರ : ಕ್ಷೇತ್ರದ ಅರ್ನಹ ಶಾಸಕ ಡಾ.ಕೆ.ಸುಧಾಕರ್, ಮೈತ್ರಿ ಸರ್ಕಾರದಲ್ಲಿ ನೇಮಕವಾಗಿದ್ದ ಮಹತ್ವದ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿದ ಸುಧಾಕರ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಕಾಂಗ್ರೆಸ್ ಶಾಸಕರಾಗಿದ್ದ ಡಾ.ಕೆ.ಸುಧಾಕರ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಲು ಸಾಕಷ್ಟು ಹೋರಾಟ ನಡೆಸಿದ್ದರು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಶಿಪಾರಸ್ಸಿನಂತೆ ಸಿಎಂ ಆಗಿದ್ದ ಕುಮಾರಸ್ವಾಮಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿದ್ದರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ […]

ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿರುವ ವಿಚಾರ ಆಘಾತ : ಡಿ.ವೇದವ್ಯಾಸ್ ಕಾಮತ್

Friday, September 6th, 2019
vedhavyas

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ಕೊಟ್ಟಿರುವ ವಿಚಾರ ಆಘಾತ ತರಿಸಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ರಾಜೀನಾಮೆಯ ವಿಚಾರವಾಗಿ ಈಗಾಗಲೇ ನಾನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಲ್ಲಿ ಮಾತನಾಡಿದ್ದೇನೆ. ನಾನು ಕೂಡ ರಾಜೀನಾಮೆ ವಿಚಾರವಾಗಿ ಜಿಲ್ಲಾಧಿಕಾರಿಗಳ ಬಳಿ ಮಾತನಾಡಿ, ರಾಜೀನಾಮೆಯನ್ನು ಹಿಂಪಡೆಯಬೇಕು. ಒಂದು ವೇಳೆ ರಾಜೀನಾಮೆ ಹಿಂಪಡೆಯುವುದಾದರೆ ಜಿಲ್ಲಾಧಿಕಾರಿಯವರಿಗೆ ಮತ್ತೆ ಕಾರ್ಯ ನಿರ್ವಹಿಸಲು ಸರ್ಕಾರದ ವತಿಯಿಂದ […]