ಬಿ.ಎಸ್.ಯಡಿಯೂರಪ್ಪ ಉತ್ತರ ಸಮಾಧಾನ ತಂದಿಲ್ಲ : ಹಂಸರಾಜ್

Monday, December 20th, 2010
ರಾಜ್ಯಪಾಲ ಹಂಸರಾಜ್ ಮತ್ತು ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯಪಾಲರು ಅಕ್ರಮ ಗಣಿಗಾರಿಕೆ ಮತ್ತು ಭೂ ಹಗರಣದ ಕುರಿತು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಉತ್ತರ ಸಮಾಧಾನ ತಂದಿಲ್ಲ. ಹಾಗಾಗಿ ಸ್ಪಷ್ಟ ಉತ್ತರಕ್ಕಾಗಿ ಮತ್ತೆ ಪತ್ರ ಬರೆಯುವುದಾಗಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ. ಒಂದೆಡೆ ಅಕ್ರಮ ಗಣಿಗಾರಿಕೆ ನಡೆದಿಲ್ಲ ಅಂತಾರೆ. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೋಟಿ, ಕೋಟಿ ಲೂಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳುತ್ತಾರೆ. ಆ ನಿಟ್ಟಿನಲ್ಲಿ ನಾನು ರಾಜ್ಯದ ರಾಜ್ಯಪಾಲನಾಗಿ ಉತ್ಸವ ಮೂರ್ತಿಯಂತಿರಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ನಾನು ಕರ್ತವ್ಯ […]