ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Monday, September 13th, 2021
ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು  : ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ. ನಮ್ಮ ಹಿರಿಯ ನಾಯಕರಾದ, ಹಾಲಿ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕೆಪಿಸಿಸಿ  ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಉಡುಪಿ ಪಾಲಿಕೆ ಸದಸ್ಯರಾಗಿ ರಾಜಕಾರಣ ಪ್ರಾರಂಭಿಸಿ ಸತತ ನಾಲ್ಕು ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರದ ಮಂತ್ರಿಯಾಗಿ, ನಂತರ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು ಸಸ್ಯಹಾರಿಗಳು. ನಿತ್ಯ ಕನಿಷ್ಠ ಒಂದೂವರೆ ಗಂಟೆ ಯೋಗ ಮಾಡುತ್ತಿದ್ದರು. ಆರೋಗ್ಯದ ಮೇಲೆ ಅಷ್ಟು ಕಾಳಜಿ […]

ಆಸ್ಕರ್‌ ಫರ್ನಾಂಡಿಸ್‌ ಅವರ ಮಿದುಳಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ಹೊರ ತೆಗೆದ ವೈದ್ಯರ ತಂಡ

Tuesday, July 27th, 2021
Oscar Fernandese

ಮಂಗಳೂರು : ತೀವ್ರ ನಿಗಾ ಘಟಕದಲ್ಲಿ  ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸಿಗ ಆಸ್ಕರ್‌ ಫರ್ನಾಂಡಿಸ್‌ ಅವರ ಚಿಕಿತ್ಸೆ ಮುಂದುವರೆದಿದ್ದು ಮಂಗಳವಾರ ಮುಂಜಾನೆ ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಲಾಗಿದೆ. ನಗರದ ಖ್ಯಾತ ನ್ಯೂರೊ ಸರ್ಜನ್‌ ಡಾ.ಸುನಿಲ್‌ ಶೆಟ್ಟಿ ಹಾಗೂ ಅವರ ತಂಡ ಆಸ್ಕರ್‌  ಅವರ ಮಿದುಳಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ತೆಗೆಯುವಲ್ಲಿ ಯಶಸ್ವಿಯಾಗಿದೆ. ಸೋಮವಾರ ಮಧ್ಯರಾತ್ರಿ 12.30 ರಿಂದಲೇ ಶಸ್ತ್ರಕ್ರಿಯೆ ಪ್ರಾರಂಭಿಸಿದ್ದು ಮಂಗಳವಾರ ಮುಂಜಾನೆ 4.40 ರ ವರೆಗೂ ನಡೆದಿದೆ. ಕಾಂಗ್ರೆಸ್‌ ಮುಖಂಡರಾದ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರತಾಪಚಂದ್ರ ಶೆಟ್ಟಿ, ವಿನಯ ಕುಮಾರ್‌ […]

ಆಸ್ಕರ್ ಫೆರ್ನಾಂಡಿಸ್ ಶೀಘ್ರ ಗುಣಮುಖರಾಗಲೆಂದು ನಾವು ಪ್ರಾರ್ಥಿಸುತ್ತೇವೆ : ಡಿ.ಕೆ. ಶಿವಕುಮಾರ್

Friday, July 23rd, 2021
Dk Shivakumar

ಮಂಗಳೂರು : ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಿ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ನಗರದ ಕೋಡಿಯಲ್ ಬೈಲ್ ನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರನ್ನು ಭೇಟಿ ಮಾಡಿದರು. ಅಲ್ಲದೆ, ಆಸ್ಕರ್ ಅವರ ಕುಟುಂಬಸ್ಥರು, ವೈದ್ಯರೊಂದಿಗೆ ಚರ್ಚೆ ನಡೆಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿವಕುಮಾರ್ ಆಸ್ಕರ್ […]