ಕರೊನಾ ಸಂದರ್ಭದಲ್ಲೇ ಅತಿಥಿಗಳ ಓಡಾಟಕ್ಕೆ 36 ಹೊಸ ವಾಹನಗಳನ್ನು ಖರೀದಿಸಿದ ರಾಜ್ಯ ಸರಕಾರ

Saturday, June 19th, 2021
innova-cresta

ಬೆಂಗಳೂರು:  ರಾಜ್ಯ ಸರಕಾರ ಅತಿಥಿಗಳ ಓಡಾಟಕ್ಕೆ 36 ಐಷಾರಾಮಿ ವಾಹನಗಳನ್ನು ಕೊಂಡಿದ್ದು ಇದಕ್ಕಾಗಿ 8.11 ಕೋಟಿ ರೂ. ವೆಚ್ಚ ಮಾಡಿದೆ. ಕರೊನಾದಂತಹ ಸಂದರ್ಭದಲ್ಲಿ ಕಳೆದೊಂದು ವರ್ಷದಿಂದೀಚೆಗೆ ಸಂಕಷ್ಟಮಯ ಸನ್ನಿವೇಶ ಇರುವಾಗಲೇ ಸರಕಾರ ಈ ನಿರ್ಧಾರ ಕೈಗೊಂಡಿರುವುದು ಆಚಾರಿ ಮೂಡಿಸಿದೆ . 36 ಹೊಸ ವಾಹನಗಳ ಪೈಕಿ 35 ಇನ್ನೋವಾ ಕ್ರಿಸ್ಟಾ ಆಗಿದ್ದು, ಒಂದು ವೋಲ್ವೋ ಸೇರಿದೆ. ರಾಜ್ಯಕ್ಕೆ ಬರುವ ಅತಿಥಿಗಳು, ಕೇಂದ್ರದಿಂದ ಬರುವ ಅಧಿಕಾರಿಗಳು, ರಾಜತಾಂತ್ರಿಕರು ಹಾಗೂ ವಿಶೇಷ ಸಂದರ್ಭಕ್ಕೆ ಈ ದುಬಾರಿ ವಾಹನಗಳನ್ನು  ಬಳಸಿಕೊಳ್ಳಲಾಗುತ್ತದೆಯಂತೆ. ಇನ್ನೊವಾ ಕ್ರಿಸ್ಟಾ ಬೆಂಗಳೂರಲ್ಲಿ […]

ರಾಜ್ಯ ಸರಕಾರಕ್ಕೆ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಪಡಿಸುವ ಅಧಿಕಾರವಿಲ್ಲ : ಯು.ಟಿ ಖಾದರ್

Thursday, January 14th, 2021
ut Khader

ಮಂಗಳೂರು : ಸುಳ್ಯ ಶಾಸಕ ಎಸ್. ಅಂಗಾರ ಸಚಿವರಾಗಿರುವುದು ಸಂತೋಷದ ವಿಷಯ. ಕೋಟ ಶ್ರೀನಿವಾಸ ಪೂಜಾರಿ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮುಂದುವರಿಸುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅವರನ್ನು ಉಡುಪಿಯ ಬದಲು ದ.ಕ. ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಿರುವುದರ ಉದ್ದೇಶವೇನು ಎಂಬುದನ್ನು ಸರಕಾರ ಸ್ಪಷ್ಟಪಡಿಸಲಿ ಎಂದು ಶಾಸಕ ಯು.ಟಿ  ಖಾದರ್  ಪ್ರಶ್ನಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಸುನೀಲ್ ಕುಮಾರ್ ಕೂಡಾ ‘ನನಗೆ ಪಕ್ಷ ನಿಷ್ಠೆ ಗೊತ್ತು, ಬ್ಲಾಕ್ ಮೇಲ್ ಗೊತ್ತಿಲ್ಲ’ […]

ಕೋವಿಡ್ ಹೆಸರಿನಲ್ಲಿ ರಾಜ್ಯ ಸರಕಾರ ನಡೆಸಿರುವ ಭ್ರಷ್ಟಾಚಾರ ತಿಳಿಸಲು ಕಾಂಗ್ರೆಸ್ನಿಂದ ಲೆಕ್ಕಕೊಡಿ ಅಭಿಯಾನ

Sunday, September 13th, 2020
saleem

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಲೆಕ್ಕಕೊಡಿ ಅಭಿಯಾನದೊಂದಿಗೆ ರಾಜ್ಯ ಸರಕಾರ ಕೋವಿಡ್ ಹೆಸರಿನಲ್ಲಿ ನಡೆಸಿರುವ ಭ್ರಷ್ಟಾಚಾರ ವನ್ನು ಜನರಿಗೆ ತಿಳಿಸುವ ಅಭಿಯಾನ ವನ್ನು ಹಮ್ಮಿಕೊಂಡಿದೆ  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ. ರಾಜ್ಯಕ್ಕೆ ಜಿ.ಎಸ್ ಟಿ ಮೂಲಕ ಬರಬೇಕಾದ ಪಾಲು ಬಂದಿಲ್ಲ, ನೆರೆ ಪರಿಹಾರ ವಾಗಿ ಕಳೆದ ವರ್ಷ ಬರಬೇಕಾದ 50 ಸಾವಿರ ಕೋಟಿ ರೂ ನಷ್ಟ ಆಗಿತ್ತು. ಕೇಂದ್ರ ಸರಕಾರದಿಂದ ಕೇವಲ 1800 ಕೋಟಿ ನೆರವು ಮಾತ್ರ ಬಂದಿದೆ. ಈ ಬಾರಿ 10 ಸಾವಿರ […]

ಮಂಗಳೂರು : ರಾಜ್ಯ ಸರಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಡಿಸಿ ಸೂಚನೆ

Saturday, March 14th, 2020
Sindhu-B-Rupesh

ಮಂಗಳೂರು : ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ನಿರ್ಬಂಧಗಳನ್ನು ಹೇರಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚಿಸಿದ್ದಾರೆ. ಮಾಲ್ ಗಳು, ಚಿತ್ರಮಂದಿರ, ನಾಟಕ, ರಂಗಮಂದಿರ, ಪಬ್, ನೈಟ್ ಕ್ಲಬ್ ಗಳು, ವಸ್ತುಪ್ರದರ್ಶನ, ಸಂಗೀತ ಕಾರ್ಯಕ್ರಮಗಳು, ಮ್ಯಾರಥಾನ್, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಭಾಗವಹಿಸುವ ಕ್ರೀಡಾಕೂಟಗಳು, ಹೆಚ್ಚು ಜನರು ಭಾಗವಹಿಸುವ ಮದುವೆಗಳನ್ನು ರಾಜ್ಯ ಸರಕಾರ ನಿರ್ಬಂಧಿಸಿದೆ. ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವಂತೆ ಆಯೋಜಕರು ಗಮನಹರಿಸಬೇಕು. ಹೆಚ್ಚು […]

ರಾಜ್ಯ ಸರಕಾರದ ಆದೇಶದಂತೆ ಮುಜರಾಯಿ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ

Friday, June 7th, 2019
Kadri Temple

ಮಂಗಳೂರು : ರಾಜ್ಯ ಸರಕಾರದ ನಿರ್ದೇಶದಂತೆ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯ ಹೋಮ ಮತ್ತು ವಿಶೇಷ ಪೂಜೆ ಗುರುವಾರ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಟ್ಟ ಒಟ್ಟು 491 ಮತ್ತು ಉಡುಪಿ ಜಿಲ್ಲೆಯಲ್ಲಿ 802 ದೇವಸ್ಥಾನಗಳಿವೆ. ಈ ಪೈಕಿ ಬಹುತೇಕ ದೇವಸ್ಥಾನಗಳಲ್ಲಿ ಪರ್ಜನ್ಯ ಹೋಮ ನಡೆದಿದ್ದು, ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೂ ಜರಗಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಮಂಗಳೂರಿನ ಕದ್ರಿ ಶ್ರೀ ಮಂಜುನಾಥ […]

ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಸಿಟಿ ರವಿ ಆಗ್ರಹ

Thursday, January 4th, 2018
C-T-Ravi

ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನ ಕಾಟಿಪಳ್ಳದಲ್ಲಿ ದುರ್ಷರ್ಮಿಗಳಿಂದ ಹತ್ಯೆಗೇಡಾದ ದೀಪಕ್ ರಾವ್ ಅವರ ಕುಟುಂಬಕ್ಕೆ ಪರಿಹಾರವಾಗಿ ರಾಜ್ಯ ಸರಕಾರ 25 ಲಕ್ಷ ರೂಪಾಯಿ ನೀಡಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ದೀಪಕ್ ಕೊಲೆ ಪ್ರಕರಣ, ಸಿನಿಮೀಯ ರೀತಿಯಲ್ಲಿ 4 ಶಂಕಿತರ ಬಂಧನ ದುಷ್ಕರ್ಮಿಗಳ ದಾಳಿಯಲ್ಲಿ ಮೃತಪಟ್ಟ ದೀಪಕ್ ರಾವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಎ.ಜೆ.ಆಸ್ಪತ್ರೆಗ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ […]

ರಾಜ್ಯ ಸರಕಾರದ ಕಾರ್ಯವೈಖರಿಗೆ ಪಾಂಡಿಚೇರಿ ಮುಖ್ಯಮಂತ್ರಿ ಶ್ಲಾಘನೆ

Monday, January 1st, 2018
congress

ಮಂಗಳೂರು: ಹೊಸ ವರ್ಷವನ್ನು ವಿಶಿಷ್ಟವಾಗಿ ಆಚರಿಸುವ ನಿಟ್ಟಿನಲ್ಲಿ ಶಾಸಕ ಬಿ.ಎ.ಮೊಯ್ದಿನ್ ಬಾವಾರ ನೇತೃತ್ವದಲ್ಲಿ ಸೌಹಾರ್ದ ಸಂಭ್ರಮ, ಅಂಬೇಡ್ಕರ್ ಭವನ ಉದ್ಘಾಟನೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 580ಕ್ಕೂ ಆಧಿಕ ಫಲಾನುಭವಿಗಳಿಗೆ 4 ಕೋ.ರೂ. ಮೊತ್ತದ ವಿವಿಧ ಸವಲತ್ತುಗಳು ಹಾಗೂ ಅರ್ಹ ಮಹಿಳೆಯರಿಗೆ ಶಾಸಕರ ವೈಯಕ್ತಿಕ ಖರ್ಚಿನಿಂದ ಸೀರೆ ವಿತರಣೆ ಕಾರ್ಯಕ್ರಮವು ರವಿವಾರ ಸುರತ್ಕಲ್‌ನ ಶ್ರೀನಿವಾಸ ಮಲ್ಯ ಭವನದಲ್ಲಿ ಜರಗಿತು. ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪಾಂಡಿಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ರಾಜ್ಯ ಸರಕಾರದ ಕಾರ್ಯವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದರಲ್ಲದೆ, […]

ರಾಜ್ಯ ಸರಕಾರದ ವಿರುದ್ಧ ಸಂಘ ಪರಿವಾರದಿಂದ ಪ್ರತಿಭಟನೆ

Wednesday, October 11th, 2017
kadri

ಮಂಗಳೂರು: ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಇಂದು ಕದ್ರಿ ಸರ್ಕೂಟ್ ಹೌಸ್ ಎದುರುಗಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮನಪಾ ಸದಸ್ಯೆ ರೂಪಾ ಡಿ. ಬಂಗೇರ, ಹಿಂಜಾವೇ ಜಿಲ್ಲಾ ಸಂಚಾಲಕ ಅಮಿತ್ ಕುಮಾರ್, ಸಹ ಸಂಚಾಲಕ ಸಂದೀಪ್ ಅಂಬ್ಲಮೊಗರು, ಕದ್ರಿ ನಗರ ಸಂಚಾಲಕ ಹರೀಶ್ ಜೋಗಿಮಠ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಳ, ಪರಿಹಾರಕ್ಕೆ ಸರಕಾರದ ದಿವ್ಯ ನಿರ್ಲಕ್ಷ್ಯ : ಮೋನಪ್ಪ ಭಂಡಾರಿ

Friday, March 10th, 2017
bjp protest

ಮಂಗಳೂರು  :  ರಾಜ್ಯ ಸರಕಾರದ ಬರ ನಿರ್ವಹಣಾ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ದಕ ಜಿಲ್ಲಾ ಸಮಿತಿಯ ಸದಸ್ಯರು  ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು . ರಾಜ್ಯದಲ್ಲಿ ಅಧಿಕೃತವಾಗಿ 160 ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದ್ದು ರಾಜ್ಯ ಸರ್ಕಾರ ಈ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. ದುರದೃಷ್ಟದ ಸಂಗತಿಯೆಂದರೆ ಬರಗಾಲದ ಭೀಕರತೆ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಬರ ಪರಿಹಾರ ಕಾಮಗಾರಿಯನ್ನು ಕೈಗೊಳ್ಳಬೇಕಾದ ಮುಖ್ಯಮಂತ್ರಿ ಮತ್ತು ಆಡಳಿತ ಪಕ್ಷದ ಅಧ್ಯಕ್ಷರು ದಿವ್ಯ ನಿರ್ಲಕ್ಷ್ಯ ತೋರುತ್ತಿ ದ್ದಾರೆ  ಎಂದು […]

ಕಂಬಳದ ಬಗ್ಗೆ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು: ರವಿಶಂಕರ ಪ್ರಸಾದ್

Wednesday, January 25th, 2017
BJP

ಮಂಗಳೂರು: ಕಂಬಳದ ಬಗ್ಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ ಈ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಲು ಮುಂದಾಗಲಿ ಆಗ ಕೇಂದ್ರ ಸರ್ಕಾರ ಮುಕ್ತವಾಗಿ ಸ್ಪಂದಿಸಲಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ. ತಮಿಳುನಾಡು ಸರ್ಕಾರ ಕೈಗೊಂಡ ಸುಗ್ರೀವಾಜ್ಞೆ ರೀತಿಯಲ್ಲೆ ಕರ್ನಾಟಕ ಸರ್ಕಾರ ಕಂಬಳ ಬಗ್ಗೆ ನಿರ್ಣಯ ಕೈಗೊಳ್ಳಲಿ ಕಂಬಳದ ಬಗ್ಗೆ ಮೋದಿ ಸರ್ಕಾರ ಗೌರವ ಇರಿಸಿದ್ದು ಸ್ಥಳೀಯ ಕಲೆ ಸಂಸ್ಕೃತಿ ಆಚರಣೆ ಕ್ರೀಡೆಗಳ ಬಗ್ಗೆ ಕೇಂದ್ರ ಸರ್ಕಾರ ಗೌರವ ಹೊಂದಿದೆ […]