ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ವಿರುದ್ಧ ವ್ಯಂಗ್ಯ
Thursday, November 2nd, 2017ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುರಿತಂತೆ ವ್ಯಂಗ್ಯ ಮಾಡಿ ಸಂದೇಶವನ್ನು ಶೇರ್ ಮಾಡಿದ್ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ರಾಜ ಶಿವಪ್ಪ ಎಂಬುವವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಮಾನಿಸಿದ ಫೇಸ್ಬುಕ್ನಲ್ಲಿನ ಸಂದೇಶವನ್ನು ಶೇರ್ ಮಾಡಿಕೊಂಡಿದ್ದರು. ‘ಕೋಟ್ಯಂತರ ಹಿಂದೂ ಜನ ಆರಾಧಿಸುವ ನಾಡಿನ ಪ್ರಮುಖ ದೇವಸ್ಥಾನವನ್ನು ಮಾಂಸದ ಊಟ ಸೇವಿಸಿ ದೇವರ ದರ್ಶನ ಮಾಡಿದ ಮುಖ್ಯಮಂತ್ರಿ’ ಎಂದು ಫೇಸ್ಬುಕ್ ಖಾತೆಯೊಂದರಲ್ಲಿ ಹಾಕಲಾಗಿತ್ತು. ಅಲ್ಲದೇ, ‘ಮೈಲಾರಿ ಕಂಡಾಗ ಸಿಡುಕಿದ […]