ಕೂಳೂರು ಪರಿಸರದಲ್ಲಿ ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ
Monday, September 9th, 2019ಮಂಗಳೂರು : ಮಹಾತ್ಮಾ ಗಾಂಧೀಜಿಯವರು ಹೇಳಿದಂತೆ ‘ಸ್ವಾತಂತ್ರ್ಯಕ್ಕಿಂತಲೂ ಶುಚಿತ್ವ ಮಹತ್ವವಾದುದು’ ಎಂಬ ನೆಲೆಯಲ್ಲಿ ಸ್ವಚ್ಛತೆಯತ್ತ ಪ್ರತಿಯೊಬ್ಬರು ಗಮನ ನೀಡಬೇಕು. ವಿಶೇಷವಾಗಿ ಯುವಜನರು ಸ್ವಚ್ಚತೆಯನ್ನು ಮೈಗೂಡಿಸಿಕೊಂಡು ಅದನ್ನು ಸಮಾಜದಲ್ಲಿ ಪಸರಿಸುವ ಕೆಲಸ ಮಾಡುವಂತಾಗಬೇಕು ಎಂದು ಎ.ಬಿ. ಶೆಟ್ಟಿ ದಂತ ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಮುಖ್ಯಸ್ಥ ಡಾ| ಶಿಶಿರ್ ಶೆಟ್ಟಿ ಹೇಳಿದರು. ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ 4 ವರ್ಷಗಳಿಂದ ಹಮ್ಮಿಕೊಳ್ಳಲಾಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 40ನೇ ಶ್ರಮದಾನವನ್ನು ಕೂಳೂರು ಪರಿಸರದಲ್ಲಿ ರವಿವಾರ ಕೈಗೊಳ್ಳಲಾಯಿತು. ಮುಖ್ಯ ಅತಿಥಿಯಾಗಿದ್ದ […]