ಗಾಂಜಾ ಮಾರಾಟ, ಕೊಲೆ ಯತ್ನ ಪ್ರಕರಣದ ಆರೋಪಿ ಸೆರೆ
Thursday, March 29th, 2018ಮಂಗಳೂರು: ಕೊಲೆ ಯತ್ನ ಮತ್ತು ಗಾಂಜಾ ಮಾರಾಟ ಪ್ರಕರಣಗಳಲ್ಲಿ ಶಾಮೀಲಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಕೋಟೆಕಾರ್ ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಮಂಗಳೂರು ದಕ್ಷಿಣ ವಿಭಾಗ ಎಸಿಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹದಳ ಬಂಧಿಸಿದೆ. ಮುಳ್ಳುಗುಡ್ಡೆ ನಿವಾಸಿ ಇಮ್ತಿಯಾಜ್ ಬಂಧಿತ ಆರೋಪಿ. ಈತ ಈ ಹಿಂದೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತಿಲಪದವು ಎಂಬಲ್ಲಿ ಅಜೀಜ್ ಎಂಬಾತನ ಜತೆ ಸೇರಿ ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡಸಿದಾಗ ಪರಾರಿಯಾಗಿದ್ದ. […]