ಎಚ್‌ಡಿ ರೇವಣ್ಣರವರಿಗೆ ಕೈತಪ್ಪಿದ ಕೆಎಂಎಫ್ ಅಧ್ಯಕ್ಷ ಸ್ಥಾನ

Saturday, August 31st, 2019
revanna

ಹಾಸನ : ಬಹುವರ್ಷಗಳಿಂದ ಎಚ್‌ಡಿ ರೇವಣ್ಣ ಅವರ ಹಿಡಿತದಲ್ಲಿದ್ದ ಕೆಎಂಎಫ್‌ ಈ ಬಾರಿ ಕೈತಪ್ಪಿದೆ. ರೇವಣ್ಣ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೆಎಂಎಫ್‌ ಅಧ್ಯಕ್ಷರಾಗಿ ಆಯ್ಕೆ ಆಗಲಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ದೇವೇಗೌಡ ಕುಟುಂಬದಿಂದ ಹಾಲು ಉತ್ಪಾದಕರಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ ಪಡೆದಿದ್ದೇನೆ ಎಂದು ರೇವಣ್ಣ ಹೇಳಿದ್ದಾರೆ. ಒಕ್ಕೂಟದ ನೂತನ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಂಪೂರ್ಣ […]

ಸಮಾರಂಭದಲ್ಲಿ ರೇವಣ್ಣನ ಹಾಡಿ ಹೊಗಳಿದ ಜಯಮಾಲ

Monday, November 5th, 2018
jayamala

ಹಾಸನ: ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಯನ್ನು ಜೈನಕಾಶಿಯ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮಿಜೀಯವರಿಗೆ ಪ್ರದಾನ ಮಾಡಲಾಯ್ತು. ಕರ್ನಾಟಕ ಸರ್ಕಾರದ ಪರವಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಜಯಮಾಲಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಸೇರಿ ಹಲವು ಗಣ್ಯರು ಪ್ರಶಸ್ತಿಯನ್ನ ಪ್ರಧಾನ ಮಾಡಿದರು. ಈ ವೇಳೆ ಸಚಿವೆ ಜಯಮಾಲಾ ರೇವಣ್ಣನನ್ನ ಹಾಡಿ ಹೊಗಳಿದ ಘಟನೆ ಕೂಡಾ ನಡೆಯಿತು. ಹೆಚ್.ಡಿ.ರೇವಣ್ಣನವರು ಹಿಡಿದ ಕೆಲಸವನ್ನ ಎಂದು ಬಿಡುವವರಲ್ಲ. ಅದು ಯಾವುದೇ ಸರ್ಕಾರವಿದ್ರು ಕೂಡಾ […]

ಭ್ರಷ್ಟಾಚಾರ ಹಗರಣಗಳನ್ನು ಮಾಡುವುದರಲ್ಲಿ ನೀವು ಯಾರಿಗೆ ಕಡಿಮೆ ಇದ್ದೀರಿ: ಸಿಎಂ‌ಗೆ ಬಿಎಸ್​ವೈ ಪ್ರಶ್ನೆ

Tuesday, September 18th, 2018
yedyurappa

ಬೆಂಗಳೂರು: ಇಸ್ಪೀಟು ಆಡೋರು, ಜೂಜುಕೋರರು ಅಂತಾ ಆರೋಪ ಮಾಡಿರುವ ನೀವು ಯಾರಿಗೆ ಕಮ್ಮಿ ಇದ್ದೀರಾ‌ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಹೇಗೋ ಮುಖ್ಯಮಂತ್ರಿ ಆಗಿದ್ದೇನೆ ಎಂದು ದರ್ಪದಿಂದ ನಡದುಕೊಳ್ಳುತ್ತೀರಿ. ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದೀರಿ. ಭ್ರಷ್ಟಾಚಾರ ಹಗರಣಗಳನ್ನು ಮಾಡುವುದರಲ್ಲಿ ನೀವು ಯಾರಿಗೆ ಕಡಿಮೆ ಇದ್ದೀರಿ ಎಂದು ಬಿಎಸ್ವೈ ಪ್ರಶ್ನಿಸಿದ್ದಾರೆ. ರೇವಣ್ಣ ವಿರುದ್ದ ಭೂ ಕಬಳಿಕೆ ಆರೋಪ ಮಾಡಿರುವುದು […]

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ರೇವಣ್ಣ!

Tuesday, June 19th, 2018
h-d-revanna

ಮಂಗಳೂರು: ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರೇವಣ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಲ್ಲಾ ಪ್ರವಾಸದಲ್ಲಿರುವ ರೇವಣ್ಣ ಅವರು ಧರ್ಮಸ್ಥಳ ಪ್ರಕೃತಿ ಚಿಕಿತ್ಸಾಲಯದಲ್ಲಿ ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಸಚಿವ ರೇವಣ್ಣ ಅವರು ಗುಡ್ಡ ಕುಸಿತದಿಂದ ಸಮಸ್ಯೆಗಳೊಗಾದ ಚಾರ್ಮಾಡಿ ಘಾಟಿಯನ್ನು ವೀಕ್ಷಿಸಿದರು.

ಜನ ನಮ್ಮನ್ನು ತಿರಸ್ಕರಿಸಿದ್ದಾರೆ… ಸಾಲ ಮನ್ನಾಕ್ಕೆ ಸ್ವಲ್ಪ ದಿನ ಕಾಯಿರಿ: ಹೆಚ್‌.ಡಿ. ಕುಮಾರಸ್ವಾಮಿ

Tuesday, May 22nd, 2018
chikmagaluru

ಚಿಕ್ಕಮಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಅಷ್ಟು ಸುಲಭವಾಗಿ ನಿಭಾಯಿಸಲು ಸಾಧ್ಯವಿಲ್ಲ ಎಂಬುದು ನನಗೆ ಗೊತ್ತಿದೆ. ನನ್ನ ಜೀವನದಲ್ಲಿ ಇದೊಂದು ದೊಡ್ಡ ಸವಾಲು ಎಂದು ನಿಯೋಜಿತ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು. ಶೃಂಗೇರಿಯಲ್ಲಿ ಮಾತನಾಡಿದ ಅವರು, ಜನತೆಯಲ್ಲಿಯೂ ಯಾರು ರಾಜ್ಯ ಆಳುತ್ತಾರಾ ಎಂಬ ಅನುಮಾನ ಇದೆ. ತಾಯಿ ಶಾರದಾಂಬೆಯ ಆಶೀರ್ವಾದದಿಂದ ಎಲ್ಲವೂ ಸುಗಮ ಆಗುತ್ತೆ ಎಂಬ ನಂಬಿಕೆ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಸ್ಥಾನಕ್ಕೆ ಪೈಪೋಟಿ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಸಂಜೆ ಚರ್ಚೆ ನಡೆಸಿ […]

ಬಹುಮತ ಸಾಬೀತುಪಡಿಸುವಲ್ಲಿ ಬಿಎಸ್‌ವೈ ವಿಫಲರಾಗ್ತಾರೆ: ರೇವಣ್ಣ

Friday, May 18th, 2018
revanna

ಬೆಂಗಳೂರು: ನನಗೆ ವಿಶ್ವಾಸವಿದೆ, ಬಹುಮತ ಸಾಬೀತುಪಡಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಫಲರಾಗುತ್ತಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ಹೇಳಿದರು. ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಮತ ಸಾಬೀತು ಮಾಡಿ ನಾವು ಸರ್ಕಾರವನ್ನು ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಳೆ ಬಹುಮತ ಸಾಬೀತು ಪಡಿಸಲು ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಯಾವುದೇ ಶಾಸಕರು ಅವರೊಂದಿಗೆ ಹೋಗುವುದಿಲ್ಲ ಎಂದು ಹೇಳಿದರು. ಕುಮಾರಸ್ವಾಮಿಯವರು ಆಗಮಿಸಿದ ವೇಳೆ ಅವರನ್ನು ಮಾತನಾಡಿಸಲು ಮುಂದಾದಾಗ, ಈಗಾಗಲೇ ಸುಪ್ರೀಂಕೋರ್ಟ್ ತೀರ್ಪಿನ […]

ದೇವೇಗೌಡರಿಗೆ 86ನೇ ಜನ್ಮದಿನದ ಸಂಭ್ರಮ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಜೆಡಿಎಸ್‌‌ ವರಿಷ್ಠ

Friday, May 18th, 2018
ದೇವೇಗೌಡರಿಗೆ 86ನೇ ಜನ್ಮದಿನದ ಸಂಭ್ರಮ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಜೆಡಿಎಸ್‌‌ ವರಿಷ್ಠ

ಹೈದರಾಬಾದ್: ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ, ಜೆಡಿಎಸ್‌‌ ವರಿಷ್ಠ ಹೆಚ್‌‌.ಡಿ.ದೇವೇಗೌಡ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಇಂದು 86ನೇ ವಸಂತಕ್ಕೆ ಕಾಲಿಟ್ಟಿರುವ ಗೌಡರು, ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. 1933ರ ಮೇ 18ರಂದು ಜನಿಸಿರುವ ದೇವೇಗೌಡರು, ದೇಶದ ಪ್ರಧಾನಿಯಾದ ಏಕೈಕ ಕನ್ನಡಿಗರು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ ತಮ್ಮದೇ ಆದ ವರ್ಚಸ್ಸನ್ನು ಗೌಡರು ಹೊಂದಿದ್ದಾರೆ. 7 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದ ಅವರು 1994ರಿಂದ 1996ರವರೆಗೂ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಾದ ನಂತರ […]

ಬಸ್ ನಿಲ್ದಾಣ, ಡಿಪೋಗಳಿಗೂ ಲಗ್ಗೆಯಿಟ್ಟ ಮೆಟ್ರೋ ಬೈಕ್… ಬಳಕೆ ಹೇಗೆ!?

Wednesday, March 14th, 2018
revenna

ಬೆಂಗಳೂರು : ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸಂಸ್ಥೆಯು ಮತ್ತೊಂದು ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ಬಿಎಂಟಿಸಿ ನಿಲ್ದಾಣ ಹಾಗೂ ಡಿಪೋಗಳಿಗೆ ಮೆಟ್ರೋ ಬೈಕ್‍ಗಳು ಬರಲಿವೆ. ಶಾಂತಿನಗರ ಬಿಎಂಟಿಸಿ ಡಿಪೋದಲ್ಲಿ ಈ ಬೈಕ್ ಸೇವೆಗೆ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ರೇವಣ್ಣ ಮಾತನಾಡಿ, ಬಿಎಂಟಿಸಿ ಬಸ್ ನಿಲ್ದಾಣ ಮನೆಯಿಂದ ದೂರ ಇದ್ದರೆ ಹಾಗೂ ನೀವು ತಲುಪಬೇಕಾದ ಸ್ಥಳ, ಇಳಿಯುವ ಸ್ಥಳ […]

ಅಮಿತ್ ಶಾ ಬಂದು ಹೋದ ಮೇಲೆ ರಾಜ್ಯದಲ್ಲಿ ಕೋಮು ಗಲಭೆ: ಸಚಿವ ರೇವಣ್ಣ

Tuesday, January 9th, 2018
H-M-Revanna

ರಾಯಚೂರು: ಕರ್ನಾಟಕಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಂದು ಹೋದ ಬಳಿಕ ಕೋಮು ಗಲಭೆ ಆಗುತ್ತಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಇಲ್ಲಿ ಮಂಗಳವಾರ ಆರೋಪ ಮಾಡಿದರು. ಅಮಿತ್ ಶಾ ಸೂಚನೆಯ ಪ್ರಕಾರವೇ ಬಿಜೆಪಿ ನಾಯಕರು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕೂಡ ರೇವಣ್ಣ ಹೇಳಿದ್ದಾರೆ. ಇಷ್ಟು ಕಾಲ ಸುಮ್ಮನಿದ್ದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಂವಿಧಾನ ಬದಲಿಸುವ ಮಾತನಾಡುತ್ತಿದ್ದಾರೆ. ಹರಕು ಬಾಯಿಯ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ಹೀಗೆ ಅನೇಕರು ಪ್ರಚೋದನಕಾರಿಯಾದಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು […]