ಪುತ್ತೂರು ಪತ್ರಕರ್ತನ ಪತ್ನಿ ಮನೆಗೆ ಬರುವುದಾಗಿ ರೌಡಿಶೀಟರ್ ಬೆದರಿಕೆ, ಪೊಲೀಸರಿಗೆ ದೂರು

Sunday, January 28th, 2024
Naveen-Rai

ಪುತ್ತೂರು : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಪ್ರದೀಪ್ ಕುಮಾರ್ ಶೆಟ್ಟಿ ಅವರಿಗೆ ರೌಡಿಶೀಟರ್ ಆಗಿರುವ ನವೀನ್ ರೈ ಪನಡ್ಕ ಕೈಕಾರ ಎಂಬಾತ ರಾತ್ರಿ ವೇಳೆ ಸಂದೇಶ ಹಾಗೂ ಕರೆಗಳ ಮೂಲಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ . ಅಲ್ಲದೆ ಪತ್ನಿ ಮನೆಗೆ ಬರುವುದಾಗಿ ಬೆದರಿಕೆಯನ್ನು ಹಾಕಿದ್ದಾನೆ. ನವೀನ್‌ ರೈ ಪನಡ್ಕ ವರದಿಯೊಂದರ ವಿಚಾರಕ್ಕೆ ಸಂಬಂದಿಸಿದಂತೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದ. ನವೀನ್‌ ರೈ ಪನಡ್ಕ ವಿರುದ್ದ 2022ರಲ್ಲಿ ಪುತ್ತೂರು […]

ಬಾಲಕಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ರೌಡಿಶೀಟರ್

Monday, November 8th, 2021
ಬಾಲಕಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ರೌಡಿಶೀಟರ್

ಮಂಗಳೂರು : ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾವೆಸಗಿರುವ ಆರೋಪದ ಮೇಲೆ ರೌಡಿಶೀಟರ್ನನ್ನು ನಗರದ ಪಾಂಡೇಶ್ವರ ಮಹಿಳಾ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆಯ ರೌಡಿಶೀಟರ್ ನವೀನ್ ಸಿಕ್ವೇರ (34) ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನವೀನ್ ಸಿಕ್ವೇರ ಸಂತ್ರಸ್ತ ಬಾಲಕಿಯ ಸಹೋದರನೊಂದಿಗೆ ಗೆಳೆತನವಿತ್ತು. ಈ ಹಿನ್ನೆಲೆ ಆರೋಪಿ ಬಾಲಕಿಯ ಮನೆಗೆ ಕೆಲವೊಮ್ಮೆ ಬಂದು ಹೋಗುತ್ತಿದ್ದ. ಇತ್ತೀಚೆಗೆ ಆರೋಪಿ ಬಾಲಕಿಯ ಮನೆಗೆ ಯಾರೂ ಇಲ್ಲದ ಸಂದರ್ಭ ಬಂದಿದ್ದು, ಈ ಸಂದರ್ಭ ಜ್ಯೂಸ್‌ನಲ್ಲಿ ಅಮಲು ಪದಾರ್ಥ […]

ಕಾರ್ಪೊರೇಟರ್ ಕೊಲೆ ಮಾಡಲು ಸಂಚು, , ರೌಡಿಶೀಟರ್ ಪಿಂಕಿ ನವಾಜ್ ಸೇರಿದಂತೆ ಐವರ ಬಂಧನ

Friday, October 22nd, 2021
pinki Nawaz

ಮಂಗಳೂರು: ಸುರತ್ಕಲ್ ಬಸ್ ನಿಲ್ದಾಣಕ್ಕೆ ದಿ.ದೀಪಕ್ ರಾವ್ ಹೆಸರಿಟ್ಟ ಬಳಿಕ  ದೀಪಕ್ ರಾವ್ ಕೊಲೆ ಪ್ರಕರಣದ ಸಾಕ್ಷಿ ಆಗಿರುವ ಸ್ಥಳೀಯ ಕಾರ್ಪೊರೇಟರ್ ಒಬ್ಬರನ್ನು ಕೊಲೆ ಮಾಡಲು ಸಂಚು ರೂಪಿಸಿದ ಆಡಿಯೋವೊಂದು ವೈರಲ್ ಆದ ಬಳಿಕ, ರೌಡಿಶೀಟರ್ ಪಿಂಕಿ ನವಾಜ್ ಸೇರಿದಂತೆ ಐವರನ್ನ ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ರೌಡಿ ಶೀಟರ್ ಪಿಂಕಿ ನವಾಜ್ ಬಂಧಿತನಾಗಿದ್ದ. ಜಾಮಿನಿನ ಮೇಲೆ ಬಿಡುಗಡೆಗೊಂಡಿರುವ ಪಿಂಕಿ ನವಾಜ್ ಇದೀಗ ಕೊಲೆ ಪ್ರಕರಣಕ್ಕೆ […]

ರೌಡಿಶೀಟರ್ ಪಿಂಕಿ ನವಾಸ್ ಮೇಲೆ ಕಾಟಿಪಳ್ಳದಲ್ಲಿ ಮಾರಕಾಸ್ತ್ರಗಳಿಂದ ದಾಳಿ

Wednesday, February 10th, 2021
pinki-nawaz

ಮಂಗಳೂರು : ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಪಿಂಕಿ ನವಾಸ್ ಮೇಲೆ ರೌಡಿಗಳ ಗುಂಪೊಂದು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದಿದೆ. ಪಿಂಕಿ ನವಾಸ್ ಮೇಲೆ ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಪಿಂಕಿ ನವಾಸ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಕ್ ರಾವ್ ಹತ್ಯೆಗೆ ಪ್ರತಿಕಾರದ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು,  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು : ಮದುವೆ ಮನೆಗೆ ದಾರಿ ಕೇಳಿದ್ದಕ್ಕೆ ಹಲ್ಲೆ, ರೌಡಿಶೀಟರ್ ಮತ್ತು ಸಹಚರರ ಬಂಧನ

Wednesday, December 9th, 2020
Gowrish

ಮಂಗಳೂರು :  ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ಸುಮಂತ್ ಮತ್ತು ಆಶಿತ್ ಬಂಧಿತ ಆರೋಪಿಗಳು. ಇವರು ಪಡೀಲ್ ಬಡ್ಲಗುಡ್ಡೆಯಲ್ಲಿ ಸೋಮವಾರ ರಾತ್ರಿ ಮದುವೆಗೆ ಬಂದವರಿಗೆ ಹಲ್ಲೆ ನಡೆಸಿದ್ದರು. ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಬಂದ ಅತಿಥಿಗಳನ್ನು ಗೌರೀಶ್ ತನ್ನ ಗೆಳೆಯರನ್ನು ಕರೆಸಿ ಮಹಿಳೆಯರನ್ನು ಸಹಿತ ಎಳೆದಾಡಿ, ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ್ದಾನೆ ಎಂದು ದೂರಲಾಗಿದೆ. ಗೌರೀಶ್ ಬಳಿ ಮದುವೆ  ಮನೆಗೆ ದಾರಿ […]

ರೌಡಿಶೀಟರ್ ಇಂದ್ರಜಿತ್ ಕೊಲೆ, ಎಂಟು ಮಂದಿ ಪೊಲೀಸರ ವಶಕ್ಕೆ

Friday, November 27th, 2020
Indrajeet

ಮಂಗಳೂರು : ರೌಡಿಶೀಟರ್ ಇಂದ್ರಜಿತ್‌ನನ್ನು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕುದ್ರೋಳಿ ಕರ್ನಲ್ ಗಾರ್ಡನ್ ಬಳಿ ಬುಧವಾರ ತಡರಾತ್ರಿ ರೌಡಿಶೀಟರ್ ಇಂದ್ರಜಿತ್ (28) ಕೊಲೆಯಾಗಿತ್ತು. ಸ್ನೇಹಿತನೊಬ್ಬನ ವಿವಾಹದ ಮೆಹಂದಿ ಕಾರ್ಯಕ್ರಮಕ್ಕೆಂದು ಇಂದ್ರಜಿತ್ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಮನೆಯಿಂದ ಹೊರಹೋಗಿದ್ದು, ಅಲ್ಲಿಂದ ಮರಳಿ ಬರುವ ಸಂದರ್ಭ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ. ಬರ್ಕೆ ಪೊಲೀಸರು […]

ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಚಾಕುವಿನಿಂದ ಇರಿದು ಹತ್ಯೆ

Wednesday, October 21st, 2020
Surendra Bantwal

ಮಂಗಳೂರು : ರೌಡಿಶೀಟರ್, ತುಳು ನಟ ಸುರೇಂದ್ರ ಬಂಟ್ವಾಳರನ್ನು ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್ನಲ್ಲಿ ಸುರೇಂದ್ರರನ್ನು ಹತ್ಯೆಗೈಯ್ಯಲಾಗಿದೆ. ಸುರೇಂದ್ರ ಬಂಟ್ವಾಳ ಅವರು ಚಾಲಿಪೋಲಿಲು ತುಳು ಚಲನಚಿತ್ರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪಾತ್ರ ನಿರ್ವಹಿಸಿದ್ದರು. ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಅಂದಾಜಿಸಲಾಗಿದೆ. ಇಂದು ಮಧ್ಯಾಹ್ನದವರೆಗೆ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ‌. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, […]

ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Tuesday, December 17th, 2019
bharath

ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಮತ್ತೆ ಲಾಂಗು-ಮಚ್ಚುಗಳು ಝಳಪಿಸಿವೆ. ಹಲವರು ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಎಂಬ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೆಲವು ಕೊಲೆ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದ ಭರತ್ ಎಂಬ ರೌಡಿಶೀಟರ್ ಸೋಮವಾರ ರಾತ್ರಿ ಸಂಪಿಗೆಹಳ್ಳಿಯ ಬಾರ್ನ ಎದುರು ಕೊಲೆಯಾಗಿದ್ದಾನೆ. ಸಂಪಿಗೆಹಳ್ಳಿಯ ಚೌಡೇಶ್ವರಿ ಬಾರ್ ಮುಂಭಾಗದಲ್ಲಿ ಭರತ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಭರತ್ ವಿರುದ್ಧ ಯಲಹಂಕ, ಸಂಪಿಗೆಹಳ್ಳಿ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ನಿನ್ನೆ ರಾತ್ರಿ 9.30ರ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು […]

ಬೆಂಗಳೂರು : ಖಾರದ ಪುಡಿ ಎರಚಿ ರೌಡಿಶೀಟರ್ ನ ಬರ್ಬರ ಹತ್ಯೆ

Monday, September 23rd, 2019
Dileep

ಬೆಂಗಳೂರು : ಖಾರದ ಪುಡಿ ಎರಚಿ ತಡರಾತ್ರಿ ರೌಡಿಶೀಟರ್ವೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಯಲಹಂಕ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಯಲಹಂಕದ ದಿಲೀಪ್ ಕೊಲೆಯಾಗೀಡಾಗಿರುವ ರೌಡಶೀಟರ್. ಈತನ ಮೇಲೆ ಸರಗಳ್ಳತನಗಳ ಹಿನ್ನೆಲೆಯಲ್ಲಿ ಯಲಹಂಕ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿತ್ತು. ಯಲಹಂಕದ ಸುತ್ತಮುತ್ತಲಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ಸರಗಳ್ಳತನ ಪ್ರಕರಣದಲ್ಲಿ ರೌಡಿಪಟ್ಟಿಯಲ್ಲಿ ಗುರ್ತಿಸಿಕೊಂಡಿದ್ದ ದಿಲೀಪ್, ಇತ್ತೀಚೆಗೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದೇ ಆಟೋ ಓಡಿಸಿಕೊಂಡು ಇದ್ದ. ನಿನ್ನೆ ರಾತ್ರಿ ಮನೆಗೆ ಹೋಗದೆ ರಸ್ತೆ ಬದಿಯಲ್ಲೇ […]

ರಾಮನಗರ : ಮುಂಜಾನೆ ವೇಳೆಯಲ್ಲಿ ರೌಡಿಶೀಟರ್ ಮೇಲೆ ಗುಂಡೇಟು

Friday, August 30th, 2019
rama-nagara

ರಾಮನಗರ : ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಒಬ್ಬನ ಮೇಲೆ ಪೊಲೀಸರು ರಾಮನಗರದಲ್ಲಿ ಬೆಳ್ಳಂಬೆಳಿಗ್ಗೆ ಫೈರಿಂಗ್ ನಡೆಸಿದ್ದಾರೆ. ರೌಡಿಶೀಟರ್ ರೇಣುಕಾ ಪ್ರಸಾದ್ ಗುಂಡೇಟು ತಿಂದ ಆರೋಪಿ. ಈ ಹಿಂದೆ ರೇಣುಕಾಪ್ರಸಾದ್ ಜೋಡಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದನು. ಇನ್ನೂ ನಾಲ್ಕೈದು ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದನು. ಕಳೆದ ವಾರವೂ ಕೊಲೆ ನಡೆದಿದ್ದು, ಅದರಲ್ಲೂ ರೇಣುಕಾಪ್ರಸಾದ್ ಭಾಗಿಯಾಗಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿಯೂ ರಾಮನಗರದ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಪ್ಪ ವೃತ್ತದ ಬಳಿ ಇಬ್ಬರ ಮೇಲೆ ಮಾರಣಾಂತಿಕವಾಗಿ […]