ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಪೊಲೀಸ್ ಶೂಟೌಟ್

Tuesday, January 9th, 2024
Akashbhavan-Sharan

ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ನಗರದ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿರುವುದಾಗಿ ವರದಿಯಾಗಿದೆ. ಜ.2ರಂದು ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳ (ಸಿಸಿಬಿ)ದ ಪೊಲೀಸರ ಮೇಲೆ ರೌಡಿಶೀಟರ್ ಆಕಾಶಭವನ ಶರಣ್ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ಆರೋಪವಿತ್ತು. ಕೃತ್ಯ ಎಸಗಿದ ಬಳಿಕ ಆತ ತಲೆಮರೆಸಿಕೊಂಡಿದ್ದ. ಇದೀಗ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿದೆ ಎಂದು ತಿಳಿದು ಬಂದಿದೆ. ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ರೇಣುಕಾಪ್ರಸಾದ್ […]

ಕುದ್ರೋಳಿ ಸಮೀಪ ಮೆಹೆಂದಿ ಕಾರ್ಯಕ್ರಮಕ್ಕೆ ಬಂದಿದ್ದ ರೌಡಿ ಶೀಟರ್ ಹತ್ಯೆ

Thursday, November 26th, 2020
Indrajeet

ಮಂಗಳೂರು : ರೌಡಿ ಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕುದ್ರೋಳಿ ಸಮೀಪದ ಕರ್ನಲ್‌ ಗಾರ್ಡನ್ ಬಳಿ ನಡೆದಿದೆ. ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾದ ವ್ಯಕ್ತಿ ಎಂದು  ತಿಳಿದುಬಂದಿದೆ. ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಈತನ ಮೇಲೆ ತಲವಾರ್‌ ದಾಳಿ ನಡೆದಿತ್ತು ಎಂಬ ಮಾಹಿತಿ ಲಭಿಸಿದೆ. ಬುಧವಾರ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಗುರುವಾರ […]

ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸಿದ ಪೊಲೀಸರು

Saturday, October 24th, 2020
KhalilShoot

ಬಂಟ್ವಾಳ : ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ  ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ. ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಶರಣಾಗುವಂತೆ ಸೂಚಿಸಿದರು ತಪ್ಪಿಸಲು ಯತ್ನಿಸಿದ ಆರೋಪಿಯನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.  ಘಟನೆಯಲ್ಲಿ  ಬಂಟ್ವಾಳ  ಎಸ್ಸೈ  ಪ್ರಸನ್ನ  ಗಾಯಗೊಂಡಿದ್ದಾರೆ ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಉಮರ್ ಫಾರೂಕ್ ಎಂಬಾತನನ್ನು […]

ಮೇಲ್ಕಾರ್​​​​​ನ ಗುಡ್ಡೆಯಂಗಡಿ ಬಳಿ ಮಾರಕಾಸ್ತ್ರಗಳಿಂದ ಇರಿದು ರೌಡಿ ಶೀಟರ್ ಹತ್ಯೆ

Friday, October 23rd, 2020
Farooq

ಬಂಟ್ವಾಳ: ಶುಕ್ರವಾರ ಸಂಜೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲ್ಕಾರ್ನ ಗುಡ್ಡೆಯಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ನಡೆಸಲಾಗಿದೆ. ರೌಡಿ ಶೀಟರ್ ಉಮ್ಮರ್ ಫಾರೂಕ್ ಅಲಿಯಾಸ್ ಚೆನ್ನಾ ಫಾರೂಕ್ (32)  ಎಂಬಾತನನ್ನು ಗುಂಪೊಂದು ಹತ್ಯೆ ಮಾಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಬೈಕಿನಲ್ಲಿ ಹೋಗುತ್ತಿದ್ದ ಫಾರೂಕ್ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡ ಫಾರೂಕ್ ಕೊನೆಯುಸಿರೆಳೆದಿದ್ದಾನೆ. ರೌಡಿಶೀಟರ್ ಫಾರೂಕ್ ಯಾನೆ ಚೆನ್ನ ಫಾರೂಕ್ ಎಂಬಾತನನ್ನು ಆತನ ಸೇಹಿತನೇ ಕೊಲೆ ಮಾಡಿದ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ […]

ವಿಕಾಸ್ ದುಬೆ ಎನ್‌ಕೌಂಟರ್‌ ಆಗುವ ವಿಷಯ ಮೊದಲೇ ತಿಳಿದಿತ್ತು !

Friday, July 10th, 2020
vikas-dube

ನವದೆಹಲಿ: ಕಳೆದ ಶುಕ್ರವಾರ ಜುಲೈ 3, ಕುಖ್ಯಾತ ರೌಡಿ ಶೀಟರ್‌ ವಿಕಾಸ್‌ ದುಬೆಯನ್ನು ಬಂಧಿಸಲು ಪೊಲೀಸರು ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮಕ್ಕೆ ತೆರಳಿದ್ದರು. ಆದರೆ, ಪೊಲೀಸರ ಬರುವಿಕೆ ಮಾಹಿತಿ ಪಡೆದಿದ್ದ ದುಬೆ ಗ್ಯಾಂಗ್‌, ಪೊಲೀಸರ ಮೇಲೆಯೇ ದಾಳಿ ನಡೆಸಿತ್ತು. ಏಕಾಏಕಿ ನಡೆದ ದಾಳಿಯಲ್ಲಿ ಡಿವೈಎಸ್‌ಪಿ ಸೇರಿದಂತೆ ಎಂಟು ಪೊಲೀಸರು ಹತ್ಯೆಯಾದರು. ಗುರವಾರ  ಕಾನ್ಪುರದ ಮಹಾಕಾಲ ದೇವಾಲಯದಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆಯುತ್ತಲೇ, ಈತನ ಎನ್‌ಕೌಂಟರ್‌ ಆಗುವ ಸಾಧ್ಯತೆಯನ್ನು ಮೊದಲೇ ಅರಿತಿದ್ದ ಕೆಲವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. […]

ಬೆಳ್ತಂಗಡಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ

Wednesday, December 18th, 2019
beltangady

ಬೆಳ್ತಂಗಡಿ : ತಾಲೂಕಿನ ಗೇರುಕಟ್ಟೆಯ ಕಜೆ ಎಂಬಲ್ಲಿ ಪತಿ ಪತ್ನಿಯನ್ನು ಕೊಲೆಗೈದ್ದಾನೆ ಎನ್ನಲಾದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಉಮ್ಮರ್ ಫಾರೂಕ್ ಆರೋಪಿ ಎಂದು ತಿಳಿದುಬಂದಿದೆ. ಆತನ ಪತ್ನಿ ಮೂಲತಃ ಪುತ್ತೂರು ಸಾಲ್ಮರದ ತಸ್ಲೀಮ (25) ಮೃತರು. ತಸ್ಲೀಮ ಅವರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾಗಿದ್ದು, ದೇಹದಲ್ಲಿ ಅಲ್ಲಲ್ಲಿ ಗಾಯದ ಗುರುತುಗಳಿವೆ ಎಂದು ತಿಳಿದುಬಂದಿದೆ. ಗಾಂಜಾ ವ್ಯಸನಿಯಾಗಿದ್ದ ಉಮರ್ ಫಾರೂಕ್ ಗೆ ಈಕೆ ಮೂರನೇ ಪತ್ನಿ ಎಂದು ಹೇಳಲಾಗುತ್ತಿದೆ. ಈಕೆಗೆ ನಾಲ್ಕು ವರ್ಷದ ಒಂದು ಹೆಣ್ಣು, ಒಂದು ವರ್ಷ ನಾಲ್ಕು ತಿಂಗಳ ಒಂದು ಗಂಡು ಮಗುವಿದೆ. ಈತನ […]

ಮಹದೇವಪುರ : ರೌಡಿ ಶೀಟರ್ ನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

Saturday, October 26th, 2019
Mahadevapura

ಬೆಂಗಳೂರು : ಬೆಂಗಳೂರಿನ ಫೀನಿಕ್ಸ್ ಮಾಲ್ ಮುಂದೆ ರೌಡಿ ಶೀಟರ್ ನನ್ನು ಲಾಂಗ್, ಮಚ್ಚಿನಿಂದ ಬರ್ಬರವಾಗಿ ಕೊಲೆಗೈದ ಭಯಾನಕ ಘಟನೆ ಅಕ್ಟೊಬರ್ 25 ರಂದು ಬೆಂಗಳೂರಿನ ಮಹದೇವಪುರದಲ್ಲಿ ನಡೆದಿದೆ. ಮಾರತಹಳ್ಳಿ ಪೊಲೀಸ್ ಠಾಣೆಯ ಮಂಜುನಾಥ್ ಅಲಿಯಾಸ್ ಮಂಜು (28) ಕೊಲೆಯಾದ ರೌಡಿ ಶೀಟರ್. ಫೀನಿಕ್ಸ್ ಮಾಲ್ ಮುಂದೆ ಮಧ್ಯಾಹ್ನ ಘಟನೆ ನಡೆದಿದೆ. ಮಂಜುನಾಥ್ ಯುವತಿಯೊಂದಿಗೆ ಜಾಲಿ ರೈಡ್ ಹೋಗುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿ, ಕೊಲೆ ಮಾಡಿದ್ದಾರೆ. ಮಂಜುನಾಥ್ ಕಳೆದ ಒಂದೂವರೆ ವರ್ಷದ ಹಿಂದೆ ವರ್ತೂರು ಕೋಡಿ ಬಳಿ […]

ರೌಡಿ ಶೀಟರ್​​ನನ್ನು ಕಲ್ಲುಗಳಿಂದ ಹೊಡೆದು ಕೊಲೆಗೈದ ಗ್ರಾಮಸ್ಥರು

Tuesday, October 15th, 2019
beedar

ಬೀದರ್ : ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ಗ್ರಾಮಸ್ಥರೇ ಕಲ್ಲುಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಸಿರಗೂರ ಗ್ರಾಮದಲ್ಲಿ ನಡೆದಿದೆ. ಬಟಗೇರಾವಾಡಿ ಗ್ರಾಮದ ಬಸವರಾಜ ಹಣಮಂತ ಚಂಡಕಾಳೆ (38) ಕೊಲೆಯಾದ ರೌಡಿ ಶೀಟರ್. ಕೊಲೆಯಾದ ರೌಡಿ ಶೀಟರ್ ಬಸವರಾಜ ಬಿಎಸ್‍ಎಫ್‍ನಲ್ಲಿ ಸುಮಾರು 10 ವರ್ಷಗಳಿಗೂ ಅಧಿಕ ಕಾಲ ಸೇವೆಸಲ್ಲಿಸಿದ್ದ. ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಿರಗೂರ ಗ್ರಾಮದಲ್ಲಿ ಭಾನುವಾರ ರಾತ್ರಿ […]

ಲಾರಿ ಚಾಲಕನ ಮೇಲೆ ಹಲ್ಲೆ, ರೌಡಿ ಶೀಟರ್ ಮೇಲೆ ಗುಂಡಿನ ದಾಳಿ ನಡೆಸಿ ಬಂಧನ

Tuesday, July 9th, 2019
Bhuvithraj

ಮಂಗಳೂರು : ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ರೌಡಿ ಶೀಟರ್ ಭವಿತ್ ರಾಜ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಜುಲೈ 7ರ ತಡರಾತ್ರಿ ಮಂಗಳೂರು ಹೊರವಲಯದ ಕುಲಶೇಖರ ಸಿಲ್ವರ್‌ಗೇಟ್ ಬಳಿ ಲಾರಿ ಚಾಲಕ ಉಳಾಯಿಬೆಟ್ಟು ನಿವಾಸಿ ಉಮರ್ ಫಾರೂಕ್ (32) ಮೇಲೆ ಹಲ್ಲೆ ನಡೆಸಲಾಗಿತ್ತು. ಟೆಂಪೋ ಗೂಡ್ಸ್ ವಾಹನದಲ್ಲಿ ಮಾವಿನಹಣ್ಣನ್ನು ಲೋಡ್ ಮಾಡಿಕೊಂಡು ಮಂಗಳೂರಿನ ಮಾರುಕಟ್ಟೆಗೆ ಕೊಂಡೊಯ್ಯಲಾಗುತ್ತಿದ್ದ ಸಂದರ್ಭ ಕುಲಶೇಖರ ಸಿಲ್ವರ್‌ಗೇಟ್ ಸಮೀಪಿಸುತ್ತಿದ್ದಂತೆ ಬೈಕ್ ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು […]

ಹಿರಿಯಡ್ಕದಲ್ಲಿ ರೌಡಿ ಶೀಟರ್ ಪ್ರವೀಣ್ ಕುಲಾಲ್ ವರ್ವಾಡಿಯ ಬರ್ಬರ ಹತ್ಯೆ

Tuesday, December 20th, 2016
Praveen Kulal

ಉಡುಪಿ: ಇಲ್ಲಿನ ಹಿರಿಯಡ್ಕದಲ್ಲಿ ರೌಡಿ ಶೀಟರ್ ಪ್ರವೀಣ್ ಕುಲಾಲ್ ವರ್ವಾಡಿ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪ್ರವೀಣ್‌‌ನನ್ನು ಮೂವರು ದುಷ್ಕರ್ಮಿಗಳು ತಲವಾರು, ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುಮಾರು 12ರ ಸಮಯದಲ್ಲಿ ಹಿರಿಯಡ್ಕದ ದಿಯಾ ಗಾರ್ಡನ್ ಎಂಬ ಬಾರ್‌‌ಗೆ ಪ್ರವೀಣ್ ಬಂದಿದ್ದ. ಅದೇ ಸಮಯದಲ್ಲಿ ಅಲ್ಲಿಗೆ ಒಬ್ಬ ವ್ಯಕ್ತಿ ಆಗಮಿಸಿದ್ದು, ಪರಸ್ಪರ ಮಾತು ಬೆಳೆದಿದೆ. ಈ ಸಂದರ್ಭದಲ್ಲಿ ಅವರಿಬ್ಬರ ಮಧ್ಯೆ ಜಗಳ ಆರಂಭವಾಗಿದೆ. ತಕ್ಷಣ ಬಾರಿನ ಮಾಲೀಕ ಅವರನ್ನು ಹೊರಗೆ […]