ಎಂಟು ತಿಂಗಳ ಹೆಣ್ಣು ಮಗುವನ್ನು ಕೊಲೆ ಮಾಡಿದ ತಂದೆ

Thursday, May 30th, 2019
laxmana

ಮಂಗಳೂರು :  ತಂದೆಯೇ ಎಂಟು ತಿಂಗಳ ಹೆಣ್ಣು ಮಗುವನ್ನು ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನ ಬೋಳಾರ ಸಮೀಪ ನೇತ್ರಾವತಿ ನದಿ ದಡದಲ್ಲಿ ಸೋಮವಾರ ಮೇ 27ರಂದು ಎಂಟು ತಿಂಗಳ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ, ಕೊಪ್ಪಳ ಮೂಲದ ಲಕ್ಷ್ಮಣ ತೆಂಗಿನಹಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ ತೆಂಗಿನಹಾಳ ಮತ್ತು ರೂಪಾ ದಂಪತಿ ಬೋಳಾರದಲ್ಲಿರುವ ಕಟ್ಟಡ ನಿರ್ಮಾಣ ಸಂಸ್ಥೆಯೊಂದರ ತಾತ್ಕಾಲಿಕ ಶೆಡ್ ‌ನಲ್ಲಿ ಮಗುವಿನೊಂದಿಗೆ ವಾಸವಾಗಿದ್ದರು. […]

ಸಿಸಿಬಿಯಿಂದ ಕುಖ್ಯಾತ ರೌಡಿ ಮಿರ್ಲೆ ವರದರಾಜ್​ ಅರೆಸ್ಟ್

Thursday, December 6th, 2018
bengaluru

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಿರ್ಲೆ ವರದರಾಜ್ಗೆ ಸಿಸಿಬಿ ಪೊಲೀಸರು ಶಾಕ್ ನೀಡಿದ್ದಾರೆ. ಮಿರ್ಲೆ ವರದರಾಜ್ಗೆ ಸೇರಿದ ಕೆಂಗೇರಿ ಸ್ಯಾಟಲೇಟ್ ಟೌನ್ ಬಳಿಯಿರುವ ಮನೆ ಮೇಲೆ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಈತ ಭೂ ಹಗರಣ, ಹಫ್ತಾ ವಸೂಲಿ ಸೇರಿದಂತೆ ಹಲವು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಆತನ ಸಹಚರರಾದ ಲಕ್ಷ್ಮಣ ಹಾಗೂ ಡಿಪೋ ನಾಗರಾಜ್ […]