ಶಿರೂರು ಮೂಲ ಮಠದ ಬೆಲೆಬಾಳುವ ಸೊತ್ತುಗಳು ಉಡುಪಿಗೆ

Thursday, August 2nd, 2018
Shiroor math

ಉಡುಪಿ :  ಹಿರಿಯಡ್ಕ ಸಮೀಪದ ಶಿರೂರು ಮೂಲ ಮಠದಲ್ಲಿದ್ದ ಬೆಲೆಬಾಳುವ, ಅಮೂಲ್ಯ ಸೊತ್ತುಗಳನ್ನು ಸುರಕ್ಷತೆಯ ದೃಷ್ಠಿಯಿಂದ ದ್ವಂದ್ವ ಮಠವಾದ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಇಂದು ಪೊಲೀಸರ ಸಮ್ಮುಖದಲ್ಲಿ ಉಡುಪಿಯ ಶಿರೂರು ಮಠಕ್ಕೆ ತಂದು ಅಲ್ಲಿನ ಲಾಕರ್‌ನಲ್ಲಿರಿಸಿದರು. ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಜು.19ರಂದು  ಮೃತಪಟ್ಟ ನಂತರ ತನಿಖೆಯ ಹಿನ್ನೆಲೆಯಲ್ಲಿ ಪೊಲೀಸರು ಶಿರೂರು ಮೂಲ ಮಠವನ್ನು ತಮ್ಮ ಸುಪರ್ದಿಗೆ ಪಡೆದು ಬಿಗಿ ಭದ್ರತೆಯನ್ನು ಒದಗಿಸಿದ್ದರು. ತೀರಾ ಗ್ರಾಮೀಣ ಪ್ರದೇಶವಾದ ಶಿರೂರಿನ ಮೂಲಮಠದಲ್ಲಿರುವ ಬೆಲೆಬಾಳುವ ಹಲವು […]

ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿ ಗಂಭೀರ

Wednesday, July 18th, 2018
shiroor swamiji

ಉಡುಪಿ : ಅಷ್ಟ ಮಠದ ವಿವಾದದಲ್ಲಿದ್ದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಬುಧವಾರ ಬೆಳಗ್ಗೆ ಅಸ್ವಸ್ಥರಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವಾಮೀಜಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವಿಪರೀತ ವಾಂತಿ ಮಾಡಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆಯ ವರೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸ್ವಾಮೀಜಿಯವರನ್ನು ಡಯಾಲಿಸಿಸ್ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಸ್ವಾಮೀಜಿಯ ಆಪ್ತವಲಯದವರು ತಿಳಿಸಿದ್ದಾರೆ. ಸ್ವಾಮೀಜಿ ರಕ್ತ ವಾಂತಿ ಮಾಡುತ್ತಿದ್ದು, ರಕ್ತದೊತ್ತಡ ಮತ್ತು ಹೃದಯಬಡಿತ […]