ಬೆಳ್ತಂಗಡಿ ತಾಲೂಕುಗಳಲ್ಲಿ ಡಿ.17ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144ರಡಿ ನಿಷೇಧಾಜ್ಞೆ

Thursday, December 16th, 2021
pfi-protest

ಮಂಗಳೂರು: ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿರುವುದರಿಂದ  ಪುತ್ತೂರು ಉಪವಿಭಾಗವಾದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳಲ್ಲಿ ಡಿ.17ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144ರಡಿ ನಿಷೇಧಾಜ್ಞೆ ವಿಧಿಸಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ. ಪುತ್ತೂರು, ಕಡಬ, ಬೆಳ್ಳಾರೆ, ಸವಣೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಕಡೆಯಿಂದ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿಗೆ ಆಗಮಿಸಿ ಕಾನೂನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿದ್ದು, ಮುಂದುವರಿದು ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ […]

ಪಿಎ ಕಾಲೇಜಿನಲ್ಲಿ ಕಲ್ಲುತೂರಾಟ ಲಾಠಿಚಾರ್ಜ್

Friday, March 21st, 2014
pa collage

ಮಂಗಳೂರು : ಪಿಎ ಕಾಲೇಜಿನಲ್ಲಿ ಕಳೆದ ಐದಾರು ದಿನಗಳಿಂದ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಗುರುವಾರ ತಾರಕಕ್ಕೇರಿತ್ತು. ವಿದ್ಯಾರ್ಥಿಗಳ ಬೇಡಿಕೆಗೆ ಮಣಿದ ಕಾಲೇಜು ಆಡಳಿತ ಮಂಡಳಿ ಕೊನೆಗೆ ಪೊಲೀಸರನ್ನು ಕರೆಸಿಕೊಂಡು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್ ಮಾಡಿಸಿದ ಪ್ರಸಂಗ ನಡೆಯಿತು. ಮಾ.15ರಿಂದ ಕಾಲೇಜಿನ ಮೂಲ ಸೌಕರ್ಯ ಕೊರತೆ, ಕಳಪೆ ಆಹಾರ ನೀಡಿಕೆ, ಬೌದ್ಧಿಕ ಗುಣಮಟ್ಟದ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಿರತರಾಗಿದ್ದಾರೆ. ಗುರುವಾರ ಪಾಠ ಪ್ರವಚನಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಪ್ರತಿಭಟನೆ ನಿರತರಾಗಿದ್ದರು. ಮಾ.19ರೊಳಗೆ ಸೂಕ್ತ ವ್ಯವಸ್ಥೆ […]