ಸ್ಕೂಟಿ – ಲಾರಿ ಅಪಘಾತ ಸ್ಕೂಟಿ ಚಾಲಕ ಮೃತ್ಯು

Sunday, September 13th, 2020
scooty accident

ಬೆಳ್ತಂಗಡಿ : ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ ಗಿರೀಶ್‌ ಮೂಲ್ಯ ಎಂದು ಗುರುತಿಸಲಾಗಿದೆ. ಲಾರಿಯು ಅಳದಂಗಡಿ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಸ್ಕೂಟಿ ಚಾಲಕ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.