ಅಪಘಾತಕ್ಕೊಳಗಾದ ವ್ಯಕ್ತಿಗೆ ಉಪಚರಿಸಿದ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು

Sunday, July 11th, 2021
Tejas

ಮಂಗಳೂರು: ಬೈಕನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲು ಮುಂದಾಗಿದ್ದ ಯುವಕನಿಗೆ ಲಾರಿ ಡಿಕ್ಕಿ ಹೊಡೆದ  ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ. ಮೃತ ಯುವಕ ತೇಜಸ್‌ (28) ಸುಳ್ಯ ತಾಲೂಕಿನ ಮರ್ಕಜೆಯ ದೊಡ್ಡತೋಟ ನಿವಾಸಿಯಾಗಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಶನಿವಾರ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದ್ವಿಚಕ್ರ ವಾಹವೊಂದು ಅಪಘಾತಕ್ಕೀಡಾಗಿತ್ತು. ಇದನ್ನು ಗಮನಿಸಿದ ತೇಜಸ್, ಗಾಯಾಳುವನ್ನು ಉಪಚರಿಸಿ ಆತನ ಬೈಕ್ನನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲು ದೂಡಿಕೊಂಡು ಹೋಗುತ್ತಿದ್ದನು. ಅದೇ […]

ಕರ್ತವ್ಯ ನಿರತ ಪೊಲೀಸ್ ಪೇದೆಗೆ ಲಾರಿ ಡಿಕ್ಕಿ, ಮೃತಪಟ್ಟ ಪೊಲೀಸ್ ಪೇದೆ

Friday, April 5th, 2013
Mulky mishap constabel kill

ಮಂಗಳೂರು : ಕರ್ತವ್ಯ ನಿರತ ಪೊಲೀಸ್ ಪೇದೆಗೆ ಲಾರಿಯೊಂದು ಡಿಕ್ಕಿ ಹೊಡೆದುದರಿಂದ ಪೊಲೀಸ್ ಪೇದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಮುಲ್ಕಿ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ದಾವಣಗೆರೆ ಹೊನ್ನಾಳಿ ಮೂಲದ ರಾಜಪ್ಪ(27) ಮೃತ ಪೊಲೀಸ್ ಪೇದೆ. ಕರಾವಳಿ ಭದ್ರತಾ ಪಡೆಯ ಸಾಗರ ಕವಚ ಕಾರ್ಯಾಚರಣೆಯ ನಿಮಿತ್ತ ಗುರುವಾರ ಮಧ್ಯರಾತ್ರಿ ಮುಲ್ಕಿಯ ಬಪ್ಪನಾಡು ಚೆಕ್‌ಪೋಸ್ಟ್‌ನಲ್ಲಿ ರಾಜಪ್ಪ ಹಾಗೂ ಇತರ ಇಬ್ಬರು ಸಿಬ್ಬಂದಿಗಳಾದ ಪ್ರಮೋದ್ ಮತ್ತು ಸೀತಾರಾಮ ಎಂಬ ಪೊಲೀಸ್ ಪೇದೆಗಳು ತಪಾಸಣಾ ಕಾರ್ಯದಲ್ಲಿ ತೊಡಗಿದ್ದರು. ಮುಂಜಾನೆ 3.30ರ ಸುಮಾರಿಗೆ ಉಡುಪಿಯಿಂದ […]