ಲಿಂಗಾಯತ ಮಾತ್ರವಲ್ಲ, ಯಾವುದೇ ಸಮುದಾಯದ ನಿರ್ಬಂಧ ಸರಿಯಲ್ಲ : ಮಾಜಿ ಸಚಿವ ಎಂ.ಬಿ.ಪಾಟೀಲ್
Tuesday, October 15th, 2019ಬೆಂಗಳೂರು : ಯಾವುದೇ ಸಮುದಾಯಕ್ಕೆ ತಮ್ಮ ಪಕ್ಷದ ಕಚೇರಿಗೆ ಬರಬೇಡಿ ಎಂದು ಹೇಳೋದು ಸರಿಯಲ್ಲ. ಇದು ತಪ್ಪು ಕೆಲಸ ಎಂದು ಲಿಂಗಾಯತರಿಗೆ ಬಿಜೆಪಿ ಕಚೇರಿಗೆ ನಿರ್ಬಂಧ ವಿಚಾರ ಸಂಬಂಧ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ಕಚೇರಿಗೆ ಲಿಂಗಾಯತ ಸಮುದಾಯ ನಿರ್ಬಂಧ ವಿಷಯ ಸತ್ಯ, ಆದರೆ ಅದು ಬಹಳ ತಪ್ಪು ನಿರ್ಧಾರವಾಗಲಿದೆ. ಲಿಂಗಾಯತರ ಬೆಂಬಲ ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಸಿಕ್ಕಿದೆ. ಇಷ್ಟಾದರೂ ಈ ರೀತಿ ಅಪಮಾನ ಸರಿಯಲ್ಲ. ಯಡಿಯೂರಪ್ಪ ಆದಿಯಾಗಿ […]