ಬಿಕರ್ನಕಟ್ಟೆ: ಬಸ್ ಡಿಕ್ಕಿ, ವೃದ್ಧೆ ಸ್ಥಳದಲ್ಲೇ ಸಾವು
Friday, November 3rd, 2017ಮಂಗಳೂರು: ಬಿಕರ್ನಕಟ್ಟೆ ಬಾಲ ಏಸು ಮಂದಿರದ ಬಳಿ ಸಿಟಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಲಶೇಖರ ಕೋಟಿಮುರ ನಿವಾಸಿ ಲಿಲ್ಲಿ ಪಿಂಟೋ (65) ಸಾವನ್ನಪ್ಪರುವ ವೃದ್ಧೆ. ಬಾಲ ಏಸು ಮಂದಿರದಲ್ಲಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮನೆಗೆ ವಾಪಸ್ ಮರಳುವ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಡು, ತನಿಖೆ ಪ್ರಾರಂಭಿಸಿದ್ದಾರೆ.