ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡಬೇಕೆಂದು ರಾಜಕೀಯ ಪ್ರೇರಿತ ಪ್ರೇಮಾನಂದ ಶೆಟ್ಟಿ

Friday, December 4th, 2020
Premananda Shetty

ಮಂಗಳೂರು:  ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡುವುದನ್ನು ತಡೆಯಲು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡಬೇಕೆಂದು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ಇದು ರಾಜಕಾರಣ ಪ್ರೇರಿತ ಎಂದು ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, 2003 ರಲ್ಲಿ ಅಂದಿನ ಮೇಯರ್ ಆಗಿದ್ದ ದಿವಾಕರ್ ಲೇಡಿಹಿಲ್ ಬಳಿಯಿರುವ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂದು ಮನಪಾದಲ್ಲಿ ನಿರ್ಣಯ ಮಂಡಿಸಿದ್ದರು. […]

ವೃದ್ಧನ ಕಿಡ್ನಾಪ್: ಕರವೇ ಅಧ್ಯಕ್ಷೆ ಸಹಿತ ಇಬ್ಬರ ಬಂಧನ

Thursday, September 27th, 2018
karnataka

ಮಂಗಳೂರು: ಲೇಡಿಹಿಲ್ಗೆ ವೃದ್ಧರೊಬ್ಬರನ್ನು ಕರೆಸಿಕೊಂಡು ಅಪಹರಿಸಿ, ಬೆದರಿಸಿ ಚಿನ್ನಾಭರಣ ಸಹಿತ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ತಾಲೂಕು ಅಧ್ಯಕ್ಷೆ ಮತ್ತು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ತಾಲೂಕು ಅಧ್ಯಕ್ಷೆ ಶ್ರೀಲತಾ ಮತ್ತು ರಾಕೇಶ್ ಎಂಬವರು ಬಂಧಿತ ಆರೋಪಿಗಳು. ಬಂಧಿತರಿಂದ ದರೋಡೆಗೈದ ಚಿನ್ನದ ಚೈನ್, 2 ಚಿನ್ನದ ಉಂಗುರಗಳು, ವಾಚು ಮತ್ತು ಮೆಮೋರಿ ಕಾರ್ಡ್ ಅನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸೆ.23ರಂದು ವೃದ್ಧರೋರ್ವರಿಗೆ ದೂರವಾಣಿ ಕರೆ ಮಾಡಿ […]