ಮುಖ್ಯಮಂತ್ರಿಗಳಿಂದ 14 ಲಕ್ಷ ರೂ. ಮೊತ್ತದ ಸೌಲಭ್ಯ ವಿತರಣೆ

Sunday, July 11th, 2021
cheque

ಕಲಬುರಗಿ : ಶನಿವಾರ ಲೋಕೋಪಯೋಗಿ ಭವನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ 14 ಲಕ್ಷ ರೂ. ಸಾಲ-ಸೌಲಭ್ಯ ಪಡೆದ 5 ಜನ ಫಲಾನುಭವಿಗಳಿಗೆ ಸಹಾಯ ಧನದ ಚೆಕ್ ವಿತರಿಸಿದರು. ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಭೂ ಒಡೆತನ ಯೋಜನೆಯಡಿ ಜೇವರ್ಗಿ ತಾಲೂಕಿನ ಶೃತಿ ಹರಿಶ್ಚಂದ್ರ ಮತ್ತು ಗಂಗಮ್ಮ ಚನ್ನಬಸಪ್ಪ ಅವರಿಗೆ ತಲಾ 4,83,750 ರೂ. […]

ಕಲಬುರಗಿ ಲೋಕೋಪಯೋಗಿ ಭವನ ಲೋಕಾರ್ಪಣೆ

Sunday, July 11th, 2021
Kalburgi PWD

ಕಲಬುರಗಿ :  ಲೊಕೋಪಯೋಗಿ ಇಲಾಖೆಯ ವಿವಿಧ ಹಂತದ ಕಚೇರಿಗಳು ಒಂದೇ ಸೂರಿನಡಿ ಇರಬೇಕೆಂಬ ಪರಿಕಲ್ಪನೆಯಿಂದ 47.10 ಕೋಟಿ ರೂ. ವೆಚ್ಚದಲ್ಲಿ ಆಕರ್ಷಕ ವಾಸ್ತುಶಿಲ್ಪಿಯೊಂದಿಗೆ ಕಲಬುರಗಿ ನಗರದಲ್ಲಿ ನಿರ್ಮಾಣಗೊಂಡಿರುವ “ಲೋಕೋಪಯೋಗಿ ಭವನ” ಸೇರಿದಂತೆ ಕಲಬುರಗಿ ಜಿಲ್ಲೆಯ 181.85 ಕೋಟಿ ರೂ. ಬೃಹತ್ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಚಾಲನೆ ನೀಡಿದರು. ನೂತನ ಲೋಕೋಪಯೋಗಿ ಭವನದಲ್ಲಿ ಅಯೋಜಿಸಲಾದ ಭವ್ಯ ಕಾರ್ಯಕ್ರಮದಲ್ಲಿ ಲೊಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಅರೋಗ್ಯ ಇಲಾಖೆಯ ಒಟ್ಟು 16 ಕಾಮಗಾರಿಗಳಿಗೆ ಅಡಿಗಲ್ಲು, ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಯನ್ನು […]