ಸಂಪಾಜೆಯಲ್ಲಿ ಗುಂಡು ಹಾರಿಸಿಕೊಂಡು ವಕೀಲ ಆತ್ಮಹತ್ಯೆ
Monday, December 18th, 2017ದಕ್ಷಿಣ ಕನ್ನಡ: ಕೌಟುಂಬಿಕ ಕಲಹದಿಂದ ಬೇಸತ್ತು ವಕೀಲರೊಬ್ಬರು ಪಿಸ್ತೂಲಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದೆ. ದೇವಿಚರಣ್ (39) ಆತ್ಮಹತ್ಯೆ ಮಾಡಿಕೊಂಡ ವಕೀಲ. ನಿನ್ನೆ ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಸಂಪಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.