ಖಾಸಗಿ ಟಿವಿ ಚಾನೆಲ್ ವರದಿಗಾರನ ಮೇಲೆ ವಕೀಲರಿಂದ ಹಲ್ಲೆ

Tuesday, November 23rd, 2021
yadunandan

ಮಂಗಳೂರು : ಖಾಸಗಿ ಟಿವಿ ಚಾನೆಲ್ ಒಂದರ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಸುಖ್ ಪಾಲ್ ಪೊಳಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಸಂಜೆಯ ವೇಳೆ ಘಟನೆ ನಡೆದಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಠಾಣೆಯಲ್ಲಿ ಪ್ರತಿದೂರು ಕೂಡ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು […]

ವಿಶ್ವೇಶ್ವರ ಭಟ್ ವಿಜಯ ಕರ್ನಾಟಕಕ್ಕೆ ರಾಜೀನಾಮೆ

Wednesday, December 8th, 2010
ವಿಶ್ವೇಶ್ವರ ಭಟ್

ಬೆಂಗಳೂರು  : ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ಮಧ್ಯಾಹ್ನ ಅವರು ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಆಡಳಿತ ವರ್ಗಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ರಾಜೀನಾಮೆ ಅಂಗೀಕೃತವಾಗಿದೆ ಎಂದು ವಿಶ್ವಸನೀಯವಾಗಿ ಗೊತ್ತಾಗಿದೆ. ಕಳೆದ ಹತ್ತು ವರ್ಷಗಳಿಂದ ಸಂಪಾದಕರಾಗಿ ಪತ್ರಿಕೆಯ ಚುಕ್ಕಾಣಿ ಹಿಡಿದು ವಿಜಯ ಕರ್ನಾಟಕವನ್ನು ಮುನ್ನಡೆಸಿದ್ದ ಭಟ್ಟರ ರಾಜೀನಾಮೆ ನಿರ್ಧಾರ ಪತ್ರಿಕೆಯ ಅಸಂಖ್ಯಾತ ಓದುಗರನ್ನು ಮತ್ತು ಅವರ ಅಭಿಮಾನಿ ವರ್ಗವನ್ನು ಬೆಚ್ಚಿಬೀಳಿಸಿದೆ. ಅಲ್ಲದೆ, ಸಮರ್ಥವಾದ […]