ಪಾಂಡೇಶ್ವರ ಮಹಿಳಾ ಠಾಣೆಯ 26 ಪೊಲೀಸ್ ಅಧಿಕಾರಿಗಳ ವರ್ಗಾವಣೆ, 6 ಮಂದಿ ಅಮಾನತು

Thursday, January 6th, 2022
shashikumar

ಮಂಗಳೂರು : ಪಾಂಡೇಶ್ವರದಲ್ಲಿರುವ ಮಹಿಳಾ ಠಾಣೆಯ 32 ಪೊಲೀಸ್ ಅಧಿಕಾರಿಗಳನ್ನು ಮತ್ತು  ಸಿಬ್ಬಂದಿಯನ್ನು ವರ್ಗಾವಣೆ (ಆರು ಮಂದಿ ಅಮಾನತು ಸೇರಿ) ಮಾಡಲಾಗಿದೆ. ಠಾಣೆಗೆ ಇಬ್ಬರು ಪಿಎಸ್‌ಐ, ಒಬ್ಬರು ಎಚ್‌ಸಿ ಹಾಗೂ 16 ಪಿಸಿಗಳು ಸೇರಿ 20 ಮಂದಿಯ ಹೊಸ ತಂಡವನ್ನು ನೇಮಕ ಮಾಡಿ ಪೊಲೀಸ್ ಆಯಕ್ತ ಎನ್. ಶಶಿಕುಮಾರ್ ಆದೇಶ ನೀಡಿದ್ದಾರೆ. ಕೆಲ ಸಿಬ್ಬಂದಿ ನಡುವೆ ಗುಂಪುಗಾರಿಕೆ, ಭಿನ್ನಾಭಿಪ್ರಾಯಮತ್ತು ಠಾಣೆಯಲ್ಲಿಯೇ ಮದ್ಯಪಾನ ಮಾಡಿರುವುದು ಈ ಬದಾಲಾವಣೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದು, […]

ಯಾರನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಯುಟಿ ಖಾದರ್

Wednesday, November 18th, 2020
UTKhader

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಯಾರನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ.  ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ಸಿಸಿಬಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊಲೆ, ಹಲ್ಲೆ ಪ್ರಕರಣ ಹೆಚ್ಚುತ್ತಿದೆ. ಸಚಿವರು ಈವರೆಗೆ ಪೊಲೀಸ್ ಇಲಾಖೆಯ ರಿವ್ಯೂ ಮಾಡಿಲ್ಲ ಎಂದು ಖಾದರ್ ಹೇಳಿದರು. ರಾಜ್ಯ ಸರ್ಕಾರ ಮತ ಬ್ಯಾಂಕ್ ರಾಜಕೀಯ ಮಾಡುತ್ತಿದೆ. ಮರಾಠ ಮತ್ತು ವೀರಶೈವ ನಿಗಮ ಮಂಡಳಿ ಮಾಡುವ ಮೂಲಕ ಓಲೈಕೆ […]

ಮುಡಿಪು ಕೆಂಪು ಬಾಕ್ಸೈಟ್ ದಂಧೆ ಮೇಲೆ ದಾಳಿ ಮಾಡಿದ ಉಪವಿಭಾಗಾಧಿಕಾರಿ ದಿಢೀರ್ ವರ್ಗಾವಣೆ

Wednesday, October 14th, 2020
Madan Mohan

ಮಂಗಳೂರು: ಮುಡಿಪುವಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಕೆಂಪು ಬಾಕ್ಸೈಟ್ (ಕೆಂಪು ಕಲ್ಲು)ದಂಧೆ ಮೇಲೆ  ದಾಳಿ ಮಾಡಿದ  ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೆಂಪು ಬಾಕ್ಸೈಟ್ ದಂಧೆಯ ಬಗ್ಗೆ ತನಿಖೆ ನಡೆಸಲು ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದ ಮದನ್ ಮೋಹನ್ ಸೇರಿದಂತೆ 7 ಅಧಿಕಾರಿಗಳ ವಿಶೇಷ ತಂಡವನ್ನು ಅಕ್ಟೋಬರ್ 10ಕ್ಕೆ ರಚಿಸಿದ್ದರು. ಈ ತಂಡ ಅಕ್ಟೋಬರ್ 20 ರಂದು ವರದಿ ನೀಡಬೇಕಿತ್ತು. ಅದಕ್ಕೂ ಮೊದಲೇ ಮದನ್ ಮೋಹನ್ ಅವರ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಮಂಗಳೂರು […]

ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ಯಾಕೆ ? ಯು.ಟಿ. ಖಾದರ್ ಪ್ರಶ್ನೆ

Wednesday, July 29th, 2020
UTKhader

ಮಂಗಳೂರು : ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಕ್ಕೆ  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆ ಆಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಟ್ವಿಟರ್ ನಲ್ಲಿ ರಾಜ್ಯ ಸರಕಾರದ ವಿರುದ್ದ ಆರೋಪ ವೆತ್ತಿದ್ದಾರೆ. ದನ  ಸಾಗಾಟಗಾರರ ಮೇಲೆ ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ

Tuesday, July 28th, 2020
sindhu b roopesh

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ‌ ಸಿಂಧೂ ಬಿ. ರೂಪೇಶ್ ಅವರು  ಬೆಂಗಳೂರಿಗೆ ವರ್ಗಾವಣೆ  ಆಗಿದೆ. ದ. ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ. ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಜೇಂದ್ರ […]

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಬೆಂಗಳೂರಿಗೆ ವರ್ಗಾವಣೆ

Friday, June 26th, 2020
Harsha IPS

ಮಂಗಳೂರು : ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಐಪಿಎಸ್., ಅವರು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮತ್ತು ಕಮಿಷನರ್, ಆಗಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕಇಲಾಖೆ, ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ವಿಕಾಸ್ ‌ಕುಮಾರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನಕ್ಸಲ್ ನಿಗ್ರಹ ಪಡೆಯ ಆಯುಕ್ತರಾಗಿದ್ದ ವಿಕಾಸ್ ‌ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು, ತಕ್ಷಣದಿಂದಲೇ ಜಾರಿ ಬರುವಂತೆ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಸಚಿವಾಲಯದ ಆದೇಶದ ಪ್ರಕಾರ 24 […]

ವರ್ಗಾವಣೆ ಹಾಗೂ ಖಾಲಿ ಹುದ್ದೆ ಭರ್ತಿಗೆ ವಕೀಲರ ಸಂಘದ ಸದಸ್ಯರ ಆಗ್ರಹ

Thursday, October 5th, 2017
lawyers

ಮಂಗಳೂರು: ಹೈ ಕೋರ್ಟ್‌ನ 2ನೇ ಹಿರಿಯ ನ್ಯಾಯಮೂರ್ತಿ ಜಯಂತ್‌ ಎಂ. ಪಟೇಲ್‌ ಅವರ ದಿಢೀರ್‌ ವರ್ಗಾವಣೆ ಖಂಡಿಸಿ ಹಾಗೂ ಖಾಲಿ ಇರುವ ನ್ಯಾಯಾಧೀಶರ ಹುದ್ದೆ ಭರ್ತಿಗೆ ಆಗ್ರಹಿಸಿ ಮಂಗಳೂರು ವಕೀಲರ ಸಂಘದ ಸದಸ್ಯರು ಬುಧವಾರ ಕೋರ್ಟ್‌ ಕಲಾಪದಿಂದ ದೂರ ಉಳಿದು ಪ್ರತಿಭಟಿಸಿದರು. ಬೆಳಗ್ಗೆ 11 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನ ಸಭೆ ನಡೆಸಿದ ವಕೀಲರ ಸಂಘದ ಪದಾಧಿಕಾರಿಗಳು ದಿನದ ಕೋರ್ಟ್‌ ಕಲಾಪದಲ್ಲಿ ಭಾಗವಹಿಸದಿರಲು ತೀರ್ಮಾನಿಸಿರುವ ಬಗ್ಗೆ ಪ್ರಕಟಿಸಿದರು. ಸಂಘದ ಅಧ್ಯಕ್ಷ ಎಂ.ಆರ್‌. ಬಲ್ಲಾಳ್‌ ಮಾತನಾಡಿ, ನ್ಯಾಯಮೂರ್ತಿ ಜಯಂತ್‌ ಎಂ. ಪಟೇಲ್‌ […]

ವರ್ಗಾವಣೆ ಕುರಿತು ಹಬ್ಬಿದ್ದ ಸುದ್ದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಸ್ಪಷ್ಟನೆ

Wednesday, July 27th, 2016
A-B-Ibrahim

ಮಂಗಳೂರು: ತಮ್ಮ ವರ್ಗಾವಣೆ ಕುರಿತು ಹಬ್ಬಿದ್ದ ಸುದ್ದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಸ್ಪಷ್ಟನೆ ನೀಡಿದ್ದಾರೆ. ಎ.ಬಿ.ಇಬ್ರಾಹಿಂ ಅವರ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಡೆ ನೀಡಿದ್ದಾರೆ ಎಂಬ ಸುದ್ದಿಗಳನ್ನು ಅವರು ತಳ್ಳಿ ಹಾಕಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಎ.ಬಿ.ಇಬ್ರಾಹಿಂ ಅವರ ವರ್ಗಾವಣೆಗೆ ತಡೆ ನೀಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಒನ್ ಇಂಡಿಯಾಗೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ‘ವರ್ಗಾವಣೆಗೆ ತಡೆ ನೀಡಿಲ್ಲ. ಡಾ.ಕೆ.ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ’ ಎಂದು ಹೇಳಿದ್ದಾರೆ. ಕಳೆದ ವಾರ […]

ನಗರದ ಪೊಲೀಸ್ ಆಯುಕ್ತರಾಗಿ ಎನ್ಎಸ್ ಮೇಘರಿಕ್

Friday, July 31st, 2015
N S Megharikh

ಬೆಂಗಳೂರು : ಬೆಂಗಳೂರು ನಗರಕ್ಕೆ ಹೊಸ ಪೊಲೀಸ್ ಆಯುಕ್ತರನ್ನು ನೇಮಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ. ಎಂಎನ್ ರೆಡ್ಡಿ ಅವರಿಗೆ ಡಿಜಿಪಿಯಾಗಿ ಬಡ್ತಿ ನೀಡಲಾಗಿದೆ. ಎನ್.ಎನ್ ಮೇಘರಿಕ್ ಅವರು ನೂತನ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಬಿಬಿಎಂಪಿ ಚುನಾವಣೆ ಮುಗಿಯುವವರೆಗೂ ಪ್ರಮುಖ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡದೇ. ಹಾಲಿ ಇರುವ ಸ್ಥಾನದಲ್ಲೇ ಮುಂದುವರೆಸಬೇಕು ಎಂದು ಚುನಾವಣಾ ಆಯೋಗ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಗೊಂದಲಕ್ಕೆ ಬಿದ್ದಿದ್ದ ಸರ್ಕಾರ ಕೊನೆಗೂ ಧೈರ್ಯ ಮಾಡಿ ಹಿರಿಯ ಐಪಿಎಸ್ […]

ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌ ಮತ್ತು ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾ ವರ್ಗಾವಣೆ

Saturday, May 14th, 2011
ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌ ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾ

ಮಂಗಳೂರು : ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌  ಮತ್ತು ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾರನ್ನು ಬೆಂಗಳೂರಿಗೆ ಹಾಗೂ ಪ್ರಸ್ತುತ ಚಿಕ್ಕಮಗಳೂರಿನ ಚೆನ್ನಪ್ಪ ಗೌಡರನ್ನು ಮಂಗಳೂರಿನ ಜಿಲ್ಲಾಧಿಕಾರಿಯಾಗಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಡಾ| ಎಂ.ಟಿ. ರೇಜು ಅವರನ್ನು ಉಡುಪಿ ಜಿಲ್ಲಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ದ.ಕ. ಜಿಲ್ಲಾಧಿಕಾರಿಯಾಗಿ 2010, ಅ.23 ರಂದು ಸುಬೋಧ್ ಯಾದವ್ ಅಧಿಕಾರ ಸ್ವೀಕರಿಸಿದ್ದರು.  ಕೇವಲ ಏಳು ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ವರ್ಗಾವಣೆಗೊಂಡಿದ್ದಾರೆ. ಸರಕಾರಿ ಭೂಮಿ ಒತ್ತುವರಿ ಮಾಡುವವರ ವಿರುದ್ಧ […]