ಕೋಟೆಕಾರು, ಬಗಂಬಿಲದಲ್ಲಿನ ಬಹುಮಹಡಿ ವಸತಿ ಸಂಕೀರ್ಣಕ್ಕೆ ವಸತಿ ಸಚಿವ ವಿ. ಸೋಮಣ್ಣ ನವರಿಂದ ಶಿಲಾನ್ಯಾಸ

Monday, March 18th, 2013
V Somanna

ಮಂಗಳೂರು : ಕೋಟೆಕಾರು ಗ್ರಾಮದ ಬಗಂಬಿಲ ಸಮೀಪ ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಿಸಲಾಗುವ ಬಹು ಮಹಡಿ ವಸತಿ ಸಂಕೀರ್ಣಕ್ಕೆ ಭಾನುವಾರ ವಸತಿ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಂಗಳೂರಿನಲ್ಲಿ ಈಗಾಗಲೇ ಗುರುತಿಸಲಾದ 38 ಎಕರೆ ಸರಕಾರಿ ಜಾಗದಲ್ಲಿ ವಸತಿ ಬಡಾವಣೆ ಹಾಗೂ ಸಂಕೀರ್ಣ ನಿರ್ಮಿಸುವಂತೆ ಪ್ರಸ್ತಾವನೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸುಮಾರು 1500 ಕೋಟಿ ರೂಪಾಯಿ ಗಳ ಕ್ರಿಯಾ ಯೋಜನೆ ರೂಪಿಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು. ಮುಂದುವರಿದು, ಕೋಟೆಕಾರಿನ […]