ಕಾಂಗ್ರೇಸ್ ಮುಖಂಡನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Sunday, March 31st, 2024
padmanabha-samanth

ಬಂಟ್ವಾಳ : ಕಾಂಗ್ರೇಸ್ ಮುಖಂಡನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಂಚನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ ಹಿಂದೆ ವಂಚನೆ ಆರೋಪ ಕೇಳಿ ಬಂದಿದೆ. ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ […]

10ಕ್ಕೂ ಹೆಚ್ಚು ಕಡೆ ಇಂಟರ್ನೆಟ್ ಕೇಬಲ್ ತುಂಡರಿಸಿದ ಕಿಡಿಗೇಡಿಗಳು

Monday, August 23rd, 2021
cable cuting

ಬಂಟ್ವಾಳ: ಇಲ್ಲಿನ ವಾಮದಪದವು-ಕುದ್ಕೋಳಿ ನಡುವೆ ಹಾದು ಹೋಗಿರುವ ಸೊರ್ನಾಡು ರ್ಯಾಪಿಡ್ ಇನಫೋಟೆಕ್ ಸಂಸ್ಥೆಗೆ ಸೇರಿದ ಇಂಟರ್ನೆಟ್ ಕೇಬಲ್ ಗಳನ್ನು ಕಿಡಿಗೇಡಿಗಳು ತುಂಡರಿಸಿ ಹಾನಿ ಉಂಟು ಮಾಡಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಜನತೆಗೆ ಗುಣಮಟ್ಟದ ಇಂಟರ್ನೆಟ್ ಸೌಲಭ್ಯ ಒದಗಿಸಲು ಕಾನೂನು ಬದ್ಧ ಪರವಾನಿಗೆ ಪಡೆದು ಅಳವಡಿಸಿದ್ದ ಲಕ್ಷಾಂತರ ಮೌಲ್ಯದ ಕೇಬಲ್ ಗಳನ್ನು ಎಲ್ಪೇಲು ಸಹಿತ 10ಕ್ಕೂ ಮಿಕ್ಕಿ ಕಡೆಗಳಲ್ಲಿ ಭಾನುವಾರ ರಾತ್ರಿ ಕಿಡಿಗೇಡಿಗಳು ತುಂಡರಿಸಿದ್ದಾರೆ. ಇಲ್ಲಿನ ಹಲವು ಮಂದಿ ವಿದ್ಯಾರ್ಥಿಗಳು ಸಹಿತ […]