ಎರಡು ದಿನ ವಾರಾಂತ್ಯ ಕರ್ಫ್ಯೂ, ಸರಳವಾಗಿರಲಿದೆ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ
Friday, August 13th, 2021ಮಂಗಳೂರು : ದೇಶದಾದ್ಯಂತ 2021ರ ಆಗಸ್ಟ್ 15 ರಂದು 75 ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಕೋವಿಡ್-19 ಸೋಂಕು ಕಾರಣ ಜಿಲ್ಲೆಯಲ್ಲಿ ಕೋವಿಡ್ 19 ಮಾರ್ಗಸೂಚಿಗಳು ಜಾರಿಯಲ್ಲಿದ್ದು, ಆಗಸ್ಟ್ 15 ರಂದು ವಾರಾಂತ್ಯ ಕರ್ಫ್ಯೂ ಕೂಡ ಜಾರಿಯಲ್ಲಿರುತ್ತದೆ. ಆದ ಕಾರಣ ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಸಾರ್ವಜನಿಕರು ಪಾಲಿಸಲು ಸೂಚಿಸಲಾಗಿದೆ. ಕಾರ್ಯಕ್ರಮದ ಆಯೋಜಕರು ಧ್ವಜಾರೋಹಣ ನಡೆಸುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ಸೇರಿಸದಂತೆ, ಕೋವಿಡ್ ಸಮುಚಿತ ವರ್ತನೆಗಳನ್ನು […]