ಉಗ್ರರ ಪರ ಗೋಡೆ ಬರಹ ಬರೆದ ಇಬ್ಬರು ಆರೋಪಿಗಳ ಬಂಧನ

Saturday, December 5th, 2020
vikasa kumar

ಮಂಗಳೂರು: ಬಿಜೈ ಮತ್ತು  ಕೋರ್ಟ್ ಆವರಣದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ  ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ. ತೀರ್ಥಹಳ್ಳಿ ಮೂಲದ ಮುಹಮ್ಮದ್ ಶಾರೀಕ್ (22) ಮತ್ತು ಮಾಝ್ ಮುನೀರ್ ಅಹಮ್ಮದ್ (21) ಬಂಧಿತ ಆರೋಪಿಗಳು. ಪ್ರಚಾರ ಪಡೆಯುವ ಉದ್ದೇಶದಿಂದ ವಿವಾದಿತ ಪ್ರಚೋದನಕಾರಿ ಗೋಡೆ ಬರಹವನ್ನು ಬರೆದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಬಳಿಕ ಪೊಲೀಸ್ ವಶಕ್ಕೆ ನೀಡಲಾಗುತ್ತದೆ. ಆ ಬಳಿಕ […]

ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚನೆ, 32 ಸ್ಥಳಗಳಲ್ಲಿ ಚೆಕ್‌ಪೋಸ್ಟ್ : ವಿಕಾಸ್‌ ಕುಮಾರ್

Tuesday, October 27th, 2020
Ujjodi Cow

ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚಿಸಲಾಗಿದ್ದು, ಇಲ್ಲಿಯವರೆಗೆ 28 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ವಿಕಾಸ್‌ ಕುಮಾರ್ ತಿಳಿಸಿದ್ದಾರೆ. ದನ ಕಳವು, ಅಕ್ರಮ ದನ ಸಾಗಾಟ ಮತ್ತು ಅಕ್ರಮ ದನಗಳ ವಧೆ ತಡೆಟ್ಟುವ ಸಲುವಾಗಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ‘ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ’ ಎಂಬ ವಿಶೇಷ ತಂಡ ಅ.5ರಿಂದ ಕಾರ್ಯಾಚರಿಸುತ್ತಿದೆ. ನಗರಕ್ಕೆ […]

ಮಂಗಳೂರು ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಸ್ವತ್ತುಗಳ ಹಸ್ತಾಂತರ

Saturday, October 3rd, 2020
Parade

ಮಂಗಳೂರು: ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019-20ರಲ್ಲಿ ಕಳುವಾದ ಸ್ವತ್ತುಗಳ ಪರೇಡ್ ಶನಿವಾರ  ಮಂಗಳೂರು ಪೊಲೀಸ್ ಕವಾಯತು ಮೈದಾನಿನಲ್ಲಿ ನಡೆಯಿತು. ಮಂಗಳೂರು ನಗರ ಪೊಲೀಸರಿಂದ ವಾರಸುದಾರರಿಗೆ ಸ್ವತ್ತುಗಳ ಹಸ್ತಾಂತರ ಈ ಸಂದರ್ಭ ನಡೆಯಿತು.  ಈ ಅವಧಿಯಲ್ಲಿ ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9,05,35,412 ರೂ. ಮೌಲ್ಯದ ಸ್ವತ್ತು‌ಗಳು ಕಳುವಾಗಿದ್ದು, ಅದರಲ್ಲಿ ಒಟ್ಟು 5,37,86,517 ರೂ. ಮೌಲ್ಯದ ಸ್ವತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಅವುಗಳಲ್ಲಿ ‌ಇಂದು 2.277 ಕೆಜಿ ಚಿನ್ನಾಭರಣ, 25 ದ್ವಿಚಕ್ರ ವಾಹನಗಳು, 19 ಮೊಬೈಲ್ ಫೋನ್ಗಳು, 11 ಇತರ […]

ಆಯುಧ ಪರವಾನಿಗೆಯ ಎಲ್ಲ ಸೇವೆಗಳಿಗೆ ಅಕ್ಟೋಬರ್ 1ರಿಂದ ಆನ್‌ಲೈನ್ ಮೂಲಕ ಆರಂಭ

Friday, September 25th, 2020
vikashkumar

ಮಂಗಳೂರು : ಕೇಂದ್ರ ಮಂತ್ರಾಲಯ ಭಾರತ ಸರಕಾರ ಹಾಗೂ ಒಳಾಡಳಿತ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಅವರ ನಿರ್ದೇಶನದಂತೆ  ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಯುಧ ಪರವಾನಿಗೆಯ ಎಲ್ಲ ಸೇವೆಗಳಿಗೆ ಅಕ್ಟೋಬರ್ 1ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವವರು www.mha.gov.inಗೆ ಲಾಗಿನ್ ಆಗಿ SERVICES > ARMS LICENCEONLINE PORTALಗೆ ಹೋಗಿ ಕಡ್ಡಾಯವಾಗಿ UIN ಸಂಖ್ಯೆಯನ್ನು ಹಾಕಿ ಆಯುಧಗಳ ಪರವಾನಿಗೆ ಸೇವೆ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.: 0824-2220603ಗೆ ಕರೆ ಮಾಡಬಹುದು ಎಂದು […]

ಮಂಗಳೂರು ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅಧಿಕಾರ ಸ್ವೀಕಾರ

Monday, June 29th, 2020
vikash-kumar

ಮಂಗಳೂರು : ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರು ಜೂ.29 ರ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. ಡಾ.ಪಿ.ಎಸ್.ಹರ್ಷ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ಬೆಂಗಳೂರಿನಲ್ಲಿ ಅಧಿಕಾರ  ವಹಿಸಿಕೊಂಡಿದ್ದಾರೆ. ಸೋಮವಾರ  ಬೆಳಗ್ಗೆ ನೂತನ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಕಾಸ್ ಕುಮಾರ್ ಅವರು ಹಿಂದೆ ಚಿಕ್ಕಮಂಗಳೂರು ಎಸ್ಪಿಯಾಗಿ, ಆಂತರಿಕ ಭದ್ರತೆ ವಿಭಾಗ, ನಕ್ಸಲ್ ನಿಗ್ರಹದಳದ ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದರು.