ಜನಾರ್ದನ ಪೂಜಾರಿ ಗಡಿಪಾರು ಮಾಡಿ ಎಂದವನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್​ ನಾಯಕರ ಮನವಿ

Friday, December 7th, 2018
j-r-lobo

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಗಡಿಪಾರು ಮಾಡಬೇಕೆಂದು ಆಡಿಯೋ ಸಂದೇಶ ಕಳುಹಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಮಾಜಿ ಶಾಸಕರುಗಳ ನೇತೃತ್ವದಲ್ಲಿ ಪೊಲೀಸ್ ಕಮಿಷನರ್ಗೆ ಮನವಿ ಸಲ್ಲಿಸಲಾಯಿತು. ಪೂಜಾರಿ ಅವರು ರಾಮಮಂದಿರ ನಿರ್ಮಾಣ ಕುರಿತಂತೆ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವ್ಯಕ್ತಿವೋರ್ವ ಅವರನ್ನು ಎನ್ಕೌಂಟರ್ ಮಾಡಬೇಕು, ಗಡಿಪಾರು ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಸಂದೇಶ ಕಳುಹಿಸಿದ್ದ. ಮಾಜಿ ಶಾಸಕರಾದ ಜೆ ಆರ್ ಲೋಬೋ, ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ನ ನಾಯಕರು […]

ಪೂಜಾರಿ ‘ಕೈ’ ಹಿಡಿದ ರಾಹುಲ್‌: ಕರಾವಳಿಯಲ್ಲಿ ಒಗ್ಗಟ್ಟಿನ ಮಂತ್ರ !

Thursday, March 29th, 2018
rahul-gandhi

ಮಂಗಳೂರು: ವಿಧಾನಸಭೆ ಚುನಾವಣೆ ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜನಾಶೀರ್ವಾದ ಯಾತ್ರೆ ಮೂಲಕ ಕರಾವಳಿಗೆ ನೀಡಿರುವ ಮೊದಲ ಭೇಟಿಯು ರಾಜಕೀಯವಾಗಿ ಹಲವು ರೀತಿಯ ವಿಶ್ಲೇಷಣೆಗಳಿಗೆ ಕಾರಣವಾಗಿದೆ. ಆ ಪೈಕಿ ಪ್ರಸಿದ್ಧ ಕುದ್ರೋಳಿ ದೇವಸ್ಥಾನ ಭೇಟಿ ಹಾಗೂ ತಮ್ಮ ಅಜ್ಜಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಪ್ತರಾಗಿದ್ದ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರೊಂದಿಗೆ ನಡೆಸಿದ ಕುಶಲೋಪರಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ಪಕ್ಷದ ಅಧ್ಯಕ್ಷರಾದ ಬಳಿಕ ರಾಹುಲ್‌ ಗಾಂಧಿ ಮೊದಲ ಬಾರಿಗೆ ಕರಾವಳಿಯ ಉಭಯ […]

ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಜನವರಿ 26ರಿಂದ ತೀವ್ರ ಹೋರಾಟದ ಎಚ್ಚರಿಕೆ

Thursday, January 19th, 2017
NRSS

ಮಂಗಳೂರು: ಎತ್ತಿನಹೊಳೆ ಯೋಜನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ನಡೆಸಿದ ಮಾತುಕತೆ ಯಾವುದೇ ರೀತಿ ಫಲಪ್ರದವಾಗಿಲ್ಲ. ಈ ನಿಟ್ಟಿನಲ್ಲಿ ಜನವರಿ 26ರಿಂದ ತೀವ್ರ ಹೋರಾಟ ನಡೆಸುವುದಾಗಿ ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ಬಿಗಡಾಯಿಸಲು ರಾಜಕಾರಣಿಗಳು ಹಾಗೂ ಅಧಿಕಾರಿಗಳೇ ಕಾರಣ. ಜಿಲ್ಲಾ ಉಸ್ತುವಾರಿ ಸಚಿವರು ಮನಸ್ಸು ಮಾಡಿದರೆ ಒಂದು ದಿನದಲ್ಲಿ ಸಮಸ್ಯೆ ಬಗೆಹರಿಸಬಹುದು. ಆದರೆ, ಅವರು ಮುತುವರ್ಜಿ ವಹಿಸುತ್ತಿಲ್ಲ ಎಂದು ದೂರಿದರು. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ […]

ರೈ ಅವರಿಂದ ಏಕವಚನದಲ್ಲಿ ನಿಂದಿಸುವಷ್ಟು ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ: ವಿಜಯಕುಮಾರ್ ಶೆಟ್ಟಿ

Thursday, December 29th, 2016
Yettinahole horata sdamithi

ಮಂಗಳೂರು: ದ.ಕ. ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಅವರು ಬಾಲ ಬಿಚ್ಚಿದರೆ ಅವರ ಅನೇಕ ಸಂಗತಿಗಳನ್ನು ಬಯಲು ಮಾಡುತ್ತೇನೆ ಎಂದು ಮಾಜಿ ಶಾಸಕ, ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದ ಮುಖಂಡ ವಿಜಯಕುಮಾರ್ ಶೆಟ್ಟಿ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈ ಅವರಿಂದ ಏಕವಚನದಲ್ಲಿ ನಿಂದಿಸುವಷ್ಟು ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆ ಬಗ್ಗೆ ಸಿಎಂ ಸಮ್ಮಖದಲ್ಲಿ ನಡೆದ ಸಭೆಯು ಇಸ್ಪೀಟು ಕ್ಲಬ್ ನಡೆಸುವ ರೀತಿಯಲ್ಲಿ ನಡೆಸಲಾಗಿದೆ. ಮುಖ್ಯಮಂತ್ರಿಗಳು ನಮ್ಮನ್ನು ಮಂಕು ಮಾಡುವ ರೀತಿಯಲ್ಲಿ ವ್ಯವಸ್ಥಿತವಾಗಿ […]

ನೇತ್ರಾವತಿಯನ್ನು ಉಳಿಸಲು ಸರ್ವ ಪ್ರಯತ್ನದ ಅಂಗವಾಗಿ ಡಿ. 10ರಿಂದ 12ರವರೆಗೆ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ :ವಿಜಯಕುಮಾರ್ ಶೆಟ್ಟಿ

Tuesday, December 6th, 2016
NRSS

ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ಮತ್ತೆ ಕಾವೇರಿದೆ. ಎಷ್ಟೇ ಮೊರೆ ಹೋದರೂ ಸರ್ಕಾರದ ಮನ ಕರಗುತ್ತಿಲ್ಲ. ಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಉಳಿಸಲು ಮಾಡುತ್ತಿರುವ ಸರ್ವ ಪ್ರಯತ್ನದ ಅಂಗವಾಗಿ ಡಿ. 10ರಿಂದ 12ರವರೆಗೆ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎತ್ತಿನಹೊಳೆ ಸಂಯುಕ್ತ ಹೋರಾಟ ಸಮಿತಿ ಗೌರವಾಧ್ಯಕ್ಷ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ವಿಜಯಕುಮಾರ್ ಶೆಟ್ಟಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಈ ರಥಯಾತ್ರೆ ನಡೆಯಲಿದೆ. ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರೆ […]

ವಿಜಯಕುಮಾರ್ ಶೆಟ್ಟಿ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ : ಭಂಡಾರಿ

Tuesday, October 30th, 2012
Monappa Bhandary

ಮಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿಯವರ ಇತ್ತೀಚಿನ ಹೇಳಿಕೆಗೆ ಉತ್ತರವಾಗಿ ನಗರದ ಬಿ.ಜೆ.ಪಿ. ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಬಿ.ಜೆ.ಪಿ. ಜಿಲ್ಲಾ ವಕ್ತಾರ ಹಾಗೂ ವಿದಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಅವರು, ವಿಜಯಕುಮಾರ್ ಶೆಟ್ಟಿ ಪಕ್ಷದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು ಮೂಲೆಗುಂಪಾಗಿದ್ದಾರೆ. ಹಾಗಾಗಿ ಅವರಿಗೆ ಕಳೆದ ಚುನಾವಣೆಯಲ್ಲಿ ಟಿಕೆಟ್ ಸಿಕ್ಕಿರಲಿಲ್ಲ ಆದರೆ ಮುಂದಿನ ಚುನಾವಣೆಯಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ಮಾಜಿ ಶಾಸಕ […]