ಕೊರಗಜ್ಜನ ವೇಷವನ್ನು ಧರಿಸಿ ಅವಹೇಳನ, ಇಬ್ಬರ ಬಂಧನ

Tuesday, January 11th, 2022
Koragajja Defame

ವಿಟ್ಲ: ಸಾಲೆತ್ತೂರು ಎಂಬಲ್ಲಿ ಮದುವೆ ಮನೆಯಲ್ಲಿ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.‌ ಪ್ರಕರಣದ ಪ್ರಮುಖ ಆರೋಪಿ ಮಂಗಲಪ್ಪಾಡಿ  ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು(28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಬಂಧಿತ ಆರೋಪಿಗಳು. ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, […]

40 ಪಾರಿವಾಳಗಳನ್ನು ಕದ್ದ ಕಳ್ಳರು, 24 ಗಂಟೆಯಲ್ಲಿ ಆರೋಪಿಗಳ ಬಂಧನ

Thursday, January 7th, 2021
pigeon

ಬಂಟ್ವಾಳ : ವಿಟ್ಲ ಸಮೀಪದ ಒಕ್ಕೆತ್ತೂರು ಮೂಲೆ ಎಂಬಲ್ಲಿ  ಸುಮಾರು 29 ಸಾವಿರ ರೂ. ಮೌಲ್ಯದ 40 ಪಾರಿವಾಳಗಳನ್ನು ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರ ತಂಡ ಯಶಸ್ವಿಯಾಗಿದೆ. ಪಾರಿವಾಳ ಸಾಕಿದ ಸುಲೈಮಾನ್  ಎಂಬವರು  ದೂರು ನೀಡಿ 24 ಗಂಟೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ದೇರಳಕಟ್ಟೆ ಪನೀರ್ ಮೂಲದ ಕುಂಪಳ ಚಿತ್ರಾಂಜಲಿ ನಗರ ನಿವಾಸಿ ಕರಡಿ ನಾಸಿರ್ (24), ಕಾವಲಕಟ್ಟೆ ಮೂಲದ ವಿಟ್ಲ ಸಮೀಪದ ಪಾತ್ರತೋಟ ನಿವಾಸಿ ರಿಝ್ವಾನ್ (19), ಬೋಳಂತೂರು ಮೂಲದ ಅಮ್ಟೂರು ನಿವಾಸಿ ಅಫೀಝ್ (18) ಬಂಧಿತ […]

ಮಹಿಳೆಯ ಚಿನ್ನದ ಸರ ಎಗರಿಸಿದ ಪ್ರಕರಣ, ಓರ್ವ ಮಹಿಳೆ ಸಹಿತ ನಾಲ್ವರು ಆರೋಪಿಗಳ ಬಂಧನ

Thursday, September 24th, 2020
Vitla Accuced

ಬಂಟ್ವಾಳ: ಮಹಿಳೆಯ ಚಿನ್ನದ ಸರ ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ವಿಟ್ಲ ಎಸ್ಐ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್ (23), ಮಹಮ್ಮದ್ ಇಕ್ಬಾಲ್ (24), ಕೆ.ಎ. ಮಹಮ್ಮದ್ ಯಾನೆ ಐಟಿ ಮಮ್ಮು (41) ಆರೋಪಿಗಳಿಗೆ ಸಹಕರಿಸಿದ ತಿಂಗಳಾಡಿ ನಿವಾಸಿ ಹಾಜೀರಾ (44)  ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವು ಮಾಡಿದ ಚಿನ್ನ, ಆಕ್ಟೀವ್ […]

ದ್ವಿಚಕ್ರ ವಾಹನಗಳ ಢಿಕ್ಕಿ ; ಸವಾರಿಬ್ಬರು ಮೃತ್ಯು

Wednesday, January 15th, 2020
Mani Accident

ಬಂಟ್ವಾಳ: ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಮೃತಪಟ್ಟು, ಸಹಸವಾರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಕಲ್ಲಡ್ಕ ಶಾಲಾಬಳಿ ನಿವಾಸಿ ಕರೀಂ ಎಂಬವರ ಪುತ್ರ ಮುಹಮ್ಮದ್ ಅಜ್ಮಲ್(19), ಮಾಣಿ ಬರೆನೆಕ್ಕರೆ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಪುತ್ರ ಪರೀಕ್ಷಿತ್ (19) ಮೃತಪಟ್ಟ ದ್ವಿಚಕ್ರ ವಾಹನ ಸವಾರರಾಗಿದ್ದು, ಸ್ಥಳೀಯ ನಿವಾಸಿ, ಸಹಸವಾರ ಪದ್ಮನಾಭ ಗೌಡ (28) ಎಂಬವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪರೀಕ್ಷಿತ್ ಹಾಗೂ […]

ಕೆಎಸ್ಆರ್ ಟಿಸಿ ಬಸ್ – ಲಾರಿ ಡಿಕ್ಕಿ : ಹಲವರಿಗೆ ಗಾಯ

Wednesday, October 23rd, 2019
kambalabettu

ಬಂಟ್ವಾಳ : ಕೆಎಸ್ಆರ್ ಟಿಸಿ ಬಸ್ ಮತ್ತು ವಿಟ್ಲ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಕಂಬಳಬೆಟ್ಟು ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ಬುಧವಾರ ಸಂಭವಿಸಿದೆ. ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಇನ್ನು ಕೆಲವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.  

ದಾದಿಯರ ವಸತಿಗೃಹದಿಂದ ಬೀಗ ಮುರಿದು 14ಪವನ್‌ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯ ಬಂಧನ

Wednesday, November 23rd, 2016
Ibrahim mujamal

ಮಂಗಳೂರು: ದಾದಿಯರ ವಸತಿಗೃಹದಿಂದ ಬೀಗ ಮುರಿದು 14ಪವನ್‌ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ತಾಲೂಕಿನ ಬಾಯಾರುಪದವು ಕ್ಯಾಂಪ್ಕೋ ನಿವಾಸಿ ಇಬ್ರಾಹಿಂ ಮುಜಾಮಲ್ (20) ಎಂಬಾತನೇ ಬಂಧಿತ ಆರೋಪಿ. ಸುಬ್ರಹ್ಮಣ್ಯ, ಮಂಜೇಶ್ವರ ಅಂತಾರಾಜ್ಯ ಹೆದ್ದಾರಿಯ ಅಳಿಕೆ ಸರ್ಕಾರಿ ಆಸ್ಪತ್ರೆಯ ದಾದಿಯರ ವಸತಿಗೃಹದಲ್ಲಿ ಕಳ್ಳತನ ಬಳಿಕ ತಲೆಮರೆಸಿಕೊಂಡಿದ್ದ. ಪೊಲೀಸರು ತನಿಖೆ ಕೈಬಿಟ್ಟಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಊರಿಗೆ ಹಿಂದಿರುಗಿ ಕರ್ನಾಟಕದೆಡೆಗೆ ಸೋಮವಾರ ಆಗಮಿಸಿದ್ದಾಗ ಪೊಲೀಸರು ಕನ್ಯಾನದಲ್ಲಿ ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಹೆಚ್ಚಿನ ಬಂಗಾರವನ್ನು ಇಬ್ರಾಹಿಂ ತನ್ನ […]

ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಿಸುತ್ತಿದ್ದವರ ಬಂಧನ

Wednesday, August 7th, 2013
vitla-cattle

ಬಂಟ್ವಾಳ: ವಿಟ್ಲ ಪೊಲೀಸರು ಒಕ್ಕೆತ್ತೂರು ಎಂಬಲ್ಲಿ  ಪಿಕಪ್ ವಾಹನದಲ್ಲಿ  ಅಕ್ರಮವಾಗಿ ದನ ಸಾಗಿಸುತ್ತಿದ್ದ ಪಿಕಪ್ ವಾಹನದಲ್ಲಿ  ಅಕ್ರಮವಾಗಿ ದನ ಇಬ್ಬರನ್ನು ಮಂಗಳವಾರ ಮಧ್ಯಾಹ್ನ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ವ್ಯಕ್ತಿಗಳನ್ನು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ಸಿರಾಜುದ್ದೀನ್ ಮತ್ತು  ಕುಂಡಡ್ಕ ದರ್ಬೆ ನಿವಾಸಿ ತಿಮ್ಮಯ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಕಾರ್ಯಚರಣೆ ಯಲ್ಲಿ ವಿಟ್ಲ ಠಾಣಾಧಿಕಾರಿ  ಮಾಧವ ಕೂಡ್ಲು, ಹೆಡ್ ಕಾನ್ಸ್ ಟೇಬಲ್ ರಾಧಾಕೃಷ್ಣ, ಪ್ರವೀಣ್ ರೈ, ರಕ್ಷಿತ್ ರೈ, ಮುರುಗೇಶ್, ಲೋಕೇಶ್, ಭವಿತ್ ರೈ ಅವರು ಭಾಗವಹಿಸಿದ್ದರು. […]