ಹತ್ತನೇ ತರಗತಿಯ ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿಸಿರಿ ಬ್ಯಾಡ್‌ ಟಚ್‌ ಮಾಡುವ ಅಧ್ಯಾಪಕ

Friday, March 15th, 2024
Guruva-Mogera

ಮೂಡುಬಿದ್ರೆ : ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ […]

ಶಿಕ್ಷಕನ ಅವಮಾನ ತಾಳಲಾರದೆ ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು

Tuesday, February 13th, 2024
trisha

ಬೆಳ್ತಂಗಡಿ : ಶಿಕ್ಷಕ ಕಳುಹಿಸಿದ ಮೊಬೈಲ್ ಸಂದೇಶದಿಂದ ಅವಮಾನಗೊಂಡು ವಿಷ (ಇಲಿ ಪಾಷಾಣ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ […]

ದಪ್ಪ ಆಗಿದ್ದೇನೆ ಎಂದು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಮಹಡಿಯಿಂದ ಜಿಗಿದು ಆತ್ಮಹತ್ಯೆ

Tuesday, November 14th, 2023
Prakruti Shetty

ಮಂಗಳೂರು : ಎಷ್ಟೇ ಪ್ರಯತ್ನ ಪಟ್ಟರು ತೂಕ ಇಳಿಸಲು ಸಾಧ್ಯವಾಗದೆ ವೈದ್ಯಕೀಯ ವಿದ್ಯಾರ್ಥಿನಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ ನಲ್ಲಿ ನಡೆದಿದೆ. ಬೆಳಗಾವಿಯ ಅಥಣಿ ಮೂಲದ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಪ್ರಕೃತಿ ಶೆಟ್ಟಿ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಬೆಳಗಿನ ಜಾವ 3 ಗಂಟೆಗೆ ಕಾಲೇಜಿನ ಹಾಸ್ಟೆಲ್‌ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ” ನಾನು ತುಂಬಾ ದಪ್ಪಾ […]

ಎಂಜಿನಿಯರಿಂಗ್ ವಿದ್ಯಾರ್ಥಿನಿ ಕಾಲೇಜು ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Thursday, November 2nd, 2023
manya

ಹಾಸನ: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹಾಸನದಲ್ಲಿ ಗುರುವಾರ ಹಾಸನದಲ್ಲಿ ನಡೆದಿದೆ. ಮೂಲತಃ ಚನ್ನರಾಯಪಟ್ಟಣ ಸಮೀಪದ ಹೊನ್ನ ಶೆಟ್ಟಿಹಳ್ಳಿ ಗ್ರಾಮದ ಮಾನ್ಯ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಹಾಸನ ನಗರದ ಹೊರವಲಯದಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ ನಕಲು ಮಾಡಿ ಉಪನ್ಯಾಸಕರ ಕೈಗೆ ಸಿಕ್ಕಿ ಬಿದ್ದಿದಳು. ಈ ಹಿನ್ನೆಲೆಯಲ್ಲಿ ಕ್ಷಮಾಪಣಾ ಪತ್ರ ಬರೆದು ಪ್ರಾಂಶುಪಾಲರಿಗೆ ನೀಡುವಂತೆ ಆಕೆಗೆ ಉಪನ್ಯಾಸಕರು […]

ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಮಂಗಳೂರಿಗೆ ವಾಪಸ್

Thursday, March 3rd, 2022
Anusha

ಮಂಗಳೂರು : ಉಕ್ರೇನ್ ನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ ವೈದ್ಯ ವಿದ್ಯಾರ್ಥಿನಿ ಅನುಷಾ ಭಟ್ ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿದ್ದಾರೆ.  ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಬಂದಿಳಿದ ಮಗಳನ್ನು ಹೆತ್ತವರು ಮತ್ತು ಶಾಸಕ, ಸಂಸದರು ಬರಮಾಡಿಕೊಂಡರು. ಗುರುವಾರ  ಮಧ್ಯಾಹ್ನ 1 ಗಂಟೆ ಸುಮಾರಿಗೆ ಅನುಷಾ ಮಂಗಳೂರು ವಿಮಾನ ನಿಲ್ದಾಣ ತಲುಪಿದರು. ಹೆತ್ತವರು, ಸಂಬಂಧಿಕರು ಅವರನ್ನು ಬರಮಾಡಿಕೊಂಡರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಅನುಷಾ ಅವರನ್ನು ಸ್ವಾಗತಿಸಿದರು. ಅನುಷಾ […]

‘ಬುಲ್ ಶಿಟ್’ ಎಂದು ಶಿಕ್ಷಕಿಯನ್ನು ಅವಮಾನಿಸಿದ ಹಿಜಾಬ್ ಹಾಕಿದ ವಿದ್ಯಾರ್ಥಿನಿ

Thursday, February 10th, 2022
Hijab student

ಕಾರ್ಕಳ:  ಕಾರ್ಕಳದ ಕಾಲೇಜೊಂದರಲ್ಲಿ ನಡೆದ ಗಲಾಟೆಯ ವಿಡಿಯೋ ಇದೀಗ ವೈರಲ್‌ ಆಗಿದ್ದು ಹಿಜಾಬ್ ಹಾಕಿದ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿಯನ್ನು ಅವಮಾನಿಸಿರುವುದು ಬಯಲಾಗಿದೆ. ಮಂಗಳವಾರ (ಫೆ.8) ಎಂಜಿಎಂ ಕಾಲೇಜಿನಲ್ಲಿ ನಡೆದ ಘಟನೆಯ ವಿಡಿಯೋ ಇದಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೋದಲ್ಲಿ, ಹಿಜಾಬ್‌, ಬುರ್ಖಾ ಹಾಕಿಕೊಂಡು ಬಂದ ಕೆಲ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಗಲಾಟೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ನಯನಾ ಎಂಬ ಶಿಕ್ಷಕಿ ಮಕ್ಕಳನ್ನು ತಣ್ಣಗಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾರೂ ಗಲಾಟೆ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ […]

ವಿದ್ಯಾರ್ಥಿನಿ ಮುಂದೆ ನಗ್ನ ದೇಹ ಪ್ರದರ್ಶನ – ಯುವಕನ ಬಂಧನ

Thursday, January 6th, 2022
posco act

ಕಾಸರಗೋಡು :  ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮುಂದೆ ಬೈಕ್ ನಲ್ಲಿ ಬಂದ ಯುವಕನೋರ್ವ ನಗ್ನ ದೇಹ ಪ್ರದರ್ಶಿಸಿದ ಘಟನೆ ನಡೆದಿದ್ದು , ಈತನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಆರೋಪಿ ಅಜಾನೂರು ರಾವಣೇಶ್ವರ ನಿವಾಸಿ ರಾಜೇಂದ್ರನ್ (35)ನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ರಿಮಾಂಡ್ ವಿಧಿಸಿದೆ.

ಅನ್ಯಧರ್ಮದ ಯುವಕ ಮತ್ತು ಯುವತಿ ಮೇಲೆ ಬಸ್‌ನಲ್ಲಿ ಹಲ್ಲೆ, ನಾಲ್ವರ ಬಂಧನ

Saturday, December 11th, 2021
Bus Love

ಮಂಗಳೂರು : ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಅನ್ಯಧರ್ಮದ ಯುವಕ ಮತ್ತು ಯುವತಿ ಬಸ್‌ನಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ 5-6 ಮಂದಿ ಐಡಿ ಪ್ರೂಫ್ ಕೇಳಿ ಅವರ ಮನೆಯವರ ಬಗ್ಗೆ ವಿಚಾರಿಸಿ ಅವಾಚ್ಯ ಶಬ್ಧಗಳಿಂದ ಬೈದು ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಯುವತಿಯ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ವರ್ತಿಸಿದ್ದ […]

ಬೆಳ್ತಂಗಡಿ : ತಾವರೆ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು

Monday, November 15th, 2021
Shreya

 ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಯೊಬ್ಬರು ತಾವರೆ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದಾ ದಂಪತಿ ಪುತ್ರಿ, ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18)ಮೃತಪಟ್ಟ ದುರ್ದೈವಿ. ಈಕೆ ಬೆಳಗ್ಗೆ ತನ್ನ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಶ್ರೇಯಾ ಹಿಂತಿರುಗಿ ಬಾರದೆ ಇದ್ದ […]

10ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಇಬ್ಬರಿಂದ ಅತ್ಯಾಚಾರ, ಪ್ರಕರಣ ದಾಖಲು

Friday, October 1st, 2021
Rapist

ಬೆಳ್ತಂಗಡಿ : ಇಬ್ಬರು ಆರೋಪಿಗಳು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಆಕೆ ಗರ್ಭಧರಿಸಲು ಕಾರಣರಾದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜೆಸಿಬಿ ಚಾಲಕ ರವೀಂದ್ರ ಹಾಗೂ ಕೊಕ್ರಾಡಿಯ ಯೋಗೀಶ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಗ್ರಾಮವೊಂದರ 10ನೇ ತರಗತಿ ವಿದ್ಯಾರ್ಥಿನಿಯನ್ನು ಇವರಿಬ್ಬರು ಬಲತ್ಕಾರವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಸಿದ್ದಾರೆ ಎಂದು ದೂರಲಾಗಿದೆ. […]