ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ : ಬಾಟಲ್ ಎಗರಿಸಿದ ಬಿಯರ್ ಪ್ರಿಯರು

Sunday, January 17th, 2021
beer

ಸುಳ್ಯ  : ಮೈಸೂರಿನಿಂದ ಮಂಗಳೂರಿಗೆ ಬಿಯರ್ ಸಾಗಿಸುತ್ತಿದ್ದ ಲಾರಿಯೊಂದು ಸುಳ್ಯ ತಾಲೂಕಿನ ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ಜರುಗಿದ್ದು, ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಲಾರಿ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಲಾರಿಯಲ್ಲಿ ಸುಮಾರು ರೂ. 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ಬಿಯರ್ ಲಾರಿ ಮಗುಚಿ ಬಿದ್ದಿರುವುದು ಸಾಮಾಜಿಕ ಜಾಲತಾಣಗಳ […]

ವಿದ್ಯುತ್ ಕಂಬದಲ್ಲಿ ಇಂಟರ್ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶ, ಸಾವು

Sunday, December 27th, 2020
Padmanabha

ಮಂಗಳೂರು: ಖಾಸಗಿ ಸಂಸ್ಥೆಯೊಂದರ  ಉದ್ಯೋಗಿ  ವಿದ್ಯುತ್ ಕಂಬದಲ್ಲಿ ಬಿಎಸ್ಎನ್ಎಲ್ ಇಂಟರ್ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶದಿಂದ  ಓರ್ವ ವ್ಯಕ್ತಿ  ಮೃತಪಟ್ಟಿರುವ ದುರ್ಘಟನೆ ಪುತ್ತೂರು ಕೋರ್ಟ್ ರೋಡಿನ ಮಾರ್ಕೆಟ್ ಬಳಿ ನಡೆದಿದೆ. ಅರ್ಲಪದವಿನ ಬೆಟ್ಟಂಪಾಡಿ ನಿವಾಸಿ ಪದ್ಮನಾಭ ಮೃತಪಟ್ಟ ದುರ್ದೈವಿ. ಪುತ್ತೂರು ಮೀನು‌ ಮಾರುಕಟ್ಟೆಯ ಬಳಿ ಇಂಟರ್ನೆಟ್ ಕೇಬಲ್ ಅಳವಡಿಸುವ ಕಾರ್ಯ‌ ನಡೆಸಲಾಗುತ್ತಿತ್ತು. ಈ ವೇಳೆ ವಿದ್ಯುತ್ ಪ್ರವಹಿಸಿ ಬೆಟ್ಟಂಪಾಡಿ ನಿವಾಸಿ  ಪದ್ಮನಾಭ ಮೃತಪಟ್ಟಿದ್ದಾರೆ. ಅವರು  ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸಕ್ರಿಯ ಕಾರ್ಯಕರ್ತರಾಗಿದ್ದರು. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ […]

ವಿದ್ಯುತ್ ಕಂಬವೇರಿದ ಪವರ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು

Saturday, June 27th, 2020
basavaraj

ಉಪ್ಪಿನಂಗಡಿ: ಬೆಳ್ತಂಗಡಿಯ ಕಲ್ಲೇರಿ ಬಳಿ ವಿದ್ಯುತ್ ಕಂಬವೇರಿ ದುರಸ್ತಿ ಮಾಡುತ್ತಿದ್ದ ಮೆಸ್ಕಾಂ ಸಿಬ್ಬಂದಿಯೋರ್ವರು ವಿದ್ಯುತ್ ಆಘಾತದ ಕಾರಣ ಕಂಬದಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ  ಶನಿವಾರ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಮೂಲದ ಬಸವರಾಜ್ ಕಟ್ಟಪರ (25) ಎಂಬಾತನೇ ಮೃತ ದುರ್ದೈವಿ. ಶನಿವಾರ ಬೆಳಗ್ಗೆ ಪಿಲಿಗೂಡು ಹುಣಸೆ ಕಟ್ಟೆ ಎಂಬಲ್ಲಿನ ಕಂಬದಲ್ಲಿ ವಿದ್ಯುತ್ ಸಮಸ್ಯೆ ಇದ್ದ ಕಾರಣ ಬಸವರಾಜ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಕಂಬದಿಂದ ಬಿದ್ದರು ಎನ್ನಲಾಗಿದೆ. ಕೂಡಲೇ ಇವರನ್ನು ಉಪ್ಪಿನಂಗಡಿಯ ಸರಕಾರಿ […]

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ, ಚಾಲಕ ಪಾರು

Friday, June 5th, 2020
lorry

ಬಂಟ್ವಾಳ: ಮರದ ದಿಮ್ಮಿಗಳನ್ನು ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಉರುಳಿ ಬಿದ್ದ ಘಟನೆ ಬಂಟ್ವಾಳದ ಮಾರ್ನಬೈಲು ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿದೆ. ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದೆ. ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಳಿಗ್ಗೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದಿದೆ ನಂತರ […]

ರಸ್ತೆ ಮಧ್ಯೆ ವಿದ್ಯುತ್ ಕಂಬ : ತೆರವುಗೊಳಿಸಲು ಗ್ರಾಮಸ್ಥರ ಆಗ್ರಹ

Thursday, November 7th, 2019
idyuth-kamba

ಮಡಿಕೇರಿ : ಕುಶಾಲನಗರದ ಮುಳ್ಳುಸೋಗೆ ಗ್ರಾ.ಪಂ ವ್ಯಾಪ್ತಿಯ ಗೊಂದಿಬಸವನಹಳ್ಳಿ ಗ್ರಾಮದ ರಸ್ತೆ ಮಧ್ಯೆಯಿರುವ ವಿದ್ಯುತ್ ಕಂಬವನ್ನು ತೆರವುಗೊಳಿಸುವಂತೆ ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ. ರಸ್ತೆ ಮಧ್ಯೆ ವಿದ್ಯುತ್ ಕಂಬವಿದ್ದರೂ ರಸ್ತೆ ಕಾಮಗಾರಿಯನ್ನು ಮುಂದುವರಿಸಿರುವುದು ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಮುಳ್ಳುಸೋಗೆ ಗ್ರಾ.ಪಂ ಪಿಡಿಓ ರಾಜಶೇಖರ್, ಆದಷ್ಟು ಬೇಗನೇ ವಿದ್ಯುತ್ ಕಂಬವನ್ನು ಸ್ಥಳಾಂತರಿಸಲಾಗುವುದು ಎಂದರು. ವಿದ್ಯುತ್ ಕಂಬ ಸ್ಥಳಾಂತರಿಸದಿದ್ದಲ್ಲಿ ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಯ ಮುಂಭಾಗ ಧರಣಿ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.  

ಭಾರೀ ಗಾಳಿ-ಮಳೆಯಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತ, ಶಾಲೆಗಳಿಗೆ ರಜೆ ಘೋಷಣೆ..!

Tuesday, May 29th, 2018
huge-rain-2

ಉಡುಪಿ: ಉದ್ಯಾವರ ಪರಿಸರದಲ್ಲಿ ನಿನ್ನೆ ರಾತ್ರಿ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ. ರಾತ್ರಿ ಬೀಸಿದ ಭಾರೀ ಗಾಳಿಗೆ ಉದ್ಯಾವರ ಪೇಟೆಯ ಕಾಮತ್ ಹೊಟೇಲ್ ಬಳಿಯಿದ್ದ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಉರುಳಿಬಿದ್ದಿದೆ. ಶಂಭುಕಲ್ಲು ದೇವಳದ ಬಳಿ ಹಾಗೂ ಪಿತ್ರೋಡಿಯಲ್ಲಿ ಮರಗಳು ಉರುಳಿ ರಸ್ತೆಗೆ ಬಿದ್ದಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಗುರುಳಿವೆ. ಇದರಿಂದ ರಸ್ತೆ […]

ಸಿಲಿಕಾನ್‌ ಸಿಟಿಯಲ್ಲಿ ಮಧ್ಯಾಹ್ನವೇ ಭಾರೀ ಮಳೆ… ಮರ ಬಿದ್ದು ಕಾರು ಜಖಂ..!

Tuesday, April 24th, 2018
bangaluru

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬೇಸಿಗೆ ಮಧ್ಯೆಯೂ ವರುಣ ಅಬ್ಬರಿಸಿದ್ದಾನೆ. ನಗರದ ಬಹುತೇಕ ಕಡೆ ಮಧ್ಯಾಹ್ನವೇ ಮಳೆ ಸುರಿದಿದೆ. ಮೆಜೆಸ್ಟಿಕ್, ಓಕಳಿಪುರಂ, ಕಾಟನ್ ಪೇಟೆ, ರಾಜಾಜಿನಗರ, ಗಾಯಿತ್ರಿನಗರ, ನವರಂಗ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಬಸವೇಶ್ವರ ನಗರ, ಕೈಗಾರಿಕಾ ನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಹಲವೆಡೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮರ ಬಿದ್ದು ಕಾರೊಂದು ಜಖಂಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ವಾಹನ ದಟ್ಟಣೆ ಉಂಟಾಗಿದೆ. […]

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು: ಕಾರಲ್ಲಿದ್ದವರು ಪರಾರಿ

Friday, August 12th, 2016
Cattle

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರಿನಲ್ಲಿ ದನ ಕಟ್ಟುವ ಹಗ್ಗ, ಸಗಣಿ, ಚೂರಿ ಪತ್ತೆಯಾದ ಘಟನೆ ಕೃಷ್ಣಾಪುರ ಸಮೀಪದ ನೈತಂಗಡಿ ಯುವಕ ಮಂಡಲದ ಬಳಿ ನಡೆದಿದ್ದು ಸ್ಥಳೀಯರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅಪಘಾತ ನಡೆದ ತಕ್ಷಣ ಕಾರಿನಲ್ಲಿ ಮೂವರು ಕಾರನ್ನು ಬಿಟ್ಟು ಪರಾರಿಯಾಗಿದ್ದರಾದರೂ ಈ ಮೂವರ ಫೊಟೋವನ್ನು ಸ್ಥಳೀಯರು ತೆಗೆದಿದ್ದು ಅದನ್ನು ಪೊಲೀಸರಿಗೆ ನೀಡಿದ್ದಾರೆ. ಅಪಘಾತ ನಡೆದ ಕೂಡಲೇ ಕಾರಲ್ಲಿದ್ದವರು ಪರಾರಿಯಾದ ಕಾರಣ ಶಂಕೆಗೊಂಡ ಸ್ಥಳೀಯರು ಕಾರು ಪರಿಶೀಲಿಸಿದಾಗ ಅದರಲ್ಲಿ ದನ […]