ನಾಟ್ಯಗುರು ವಿದ್ವಾನ್ ಕುದ್ಕಾಡಿ ವಿಶ್ವನಾಥ್ ರೈ ಇನ್ನಿಲ್ಲ…!
Monday, December 17th, 2018ಪುತ್ತೂರು: ಹಿರಿಯ ನಾಟ್ಯಗುರು ವಿದ್ವಾಂಸ ಕಲಾಶ್ರೀ ವಿದ್ವಾನ್ ಕುದ್ಕಾಡಿ ವಿಶ್ವನಾಥ ರೈ (86) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುಳ್ಯಪದವಿನಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವಾಗ ಕುಸಿದು ಬಿದ್ದ ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಅವರು ಮೃತಪಟ್ಟಿದ್ದಾರೆ. ವಿಶ್ವ ಕಲಾನಿಕೇತನ ಎಂಬ ಹೆಸರಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯದ ಪಟ್ಟುಗಳನ್ನು ಕಲಿಸಿಕೊಟ್ಟ ಕಲಾಶ್ರೀ ಬಿರುದಾಂಕಿತ ವಿದ್ವಾನ್ ಕುದ್ಕಾಡಿ ಭರತನಾಟ್ಯ ಕ್ಷೇತ್ರದಲ್ಲಿ ಮೇರು ಪ್ರತಿಭೆಯಾಗಿದ್ದರು. ಭಾನುವಾರ ಪುತ್ತೂರಿನಲ್ಲಿ ನಡೆದ ಪುಸ್ತಕ ಹಬ್ಬದಲ್ಲಿ […]