ವಿನಾಯಕ ಬಾಳಿಗಾ ಕೊಲೆ : ತೇಜೋ ವಧೆ ಯತ್ನ ಸಲ್ಲದು

Tuesday, March 27th, 2018
vinayak-baliga

ಮಂಗಳೂರು: ಹತ್ಯೆಗೀಡಾದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಅದು ಸಹ್ಯವಲ್ಲ ಎಂದು ಜಿ.ಹನುಮಂತ ಕಾಮತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿನಾಯಕ ಬಾಳಿಗ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ ಎಂದರು. ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ನರೇಶ ಶೆಣೈ ಅವರಿಗೂ ನನಗೂ 25 ವರ್ಷಗಳ ಸ್ನೇಹ. ಒಬ್ಬ ವ್ಯಕ್ತಿಯ ಮೇಲೆ ಆರೋಪ ಬಂತು ಎಂದ ಮೇಲೆ ಆತನ […]

ವಿನಾಯಕ ಬಾಳಿಗಾ ಕೊಲೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕವಾಗಿದ್ದ ರವೀಂದ್ರನಾಥ ಕಾಮತ್ ನೇಮಕಾತಿಗೆ ತಡೆಯಾಜ್ಞೆ

Tuesday, January 24th, 2017
Vinayak-Baliga murder case

ಮಂಗಳೂರು: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕವಾಗಿದ್ದ ರವೀಂದ್ರನಾಥ ಕಾಮತ್ ನೇಮಕಾತಿಗೆ ತಡೆಯಾಜ್ಞೆ ಸಿಕ್ಕಿದೆ. ಹೈಕೋರ್ಟ್ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿಯವರು ಸರ್ಕಾರದ ನೇಮಕಾತಿಗೆ ತಡೆಯಾಜ್ಞೆ ನೀಡಿದ್ದಾರೆ. ರವೀಂದ್ರನಾಥ ಕಾಮತ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ಸರ್ಕಾರ ನೇಮಿಸಿತ್ತು. ಇದ್ದನ್ನು ಪ್ರಶ್ನಿಸಿ ವಕೀಲ ಅರುಣ್ ಶ್ಯಾಮ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ನೇಮಕಾತಿಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.

ಬಾಳಿಗಾ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ

Wednesday, December 28th, 2016
Baliga

ಮಂಗಳೂರು: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಮೂರನೇ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹೆಚ್ಚುವರಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಡಿ.17ರಂದು ಮೂರನೇ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಹೆಚ್ಚುವರಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿಯಾಗಿರುವ ಎಸಿಪಿ ಉದಯ ನಾಯಕ್ ಸಲ್ಲಿಸಿದ್ದಾರೆ. 325 ಪುಟಗಳ ಈ ಆರೋಪ ಪಟ್ಟಿಯಲ್ಲಿ 130 ಸಾಕ್ಷಿಗಳನ್ನು ವಿಚಾರಿಸಿರುವ ಕುರಿತು ವಿವರಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಎಲ್ಲ ಆರೋಪಿಗಳೂ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಆರೋಪ […]