ಹಳೆಯಂಗಡಿ : ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಚಿವರಿಗೆ ಮನವಿ
Thursday, September 19th, 2019ಹಳೆಯಂಗಡಿ : ಪಟ್ಟಣವಾಗಿ ಬೆಳೆಯುತ್ತಿರುವ ಹಳೆಯಂಗಡಿಯ ಮಾರುಕಟ್ಟೆಯನ್ನು ಆಧುನಿಕ ರೀತಿಯಲ್ಲಿ ನವೀಕರಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರಲ್ಲಿ ದ.ಕ. ಜಿ. ಪಂ. ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಸಚಿವರು ಕಾರ್ಯ ನಿಮಿತ್ತ ಮಂಗ ಳೂರಿಗೆ ತೆರಳುತ್ತಿದ್ದಾಗ ಹಳೆಯಂಗಡಿಯ ಪೇಟೆಯಲ್ಲಿ ವಿವಿಧ ಸಂಘ - ಸಂಸ್ಥೆಗಳ ಪ್ರಮುಖರೊಂದಿಗೆ ಸೌಹಾರ್ದ ಭೇಟಿ ನೀಡಿದ ಸಂದರ್ಭದಲ್ಲಿ ಜಿ.ಪಂ. ಸದಸ್ಯರು ಮನವಿ ನೀಡಿದರು. ಬಹಳ ವರ್ಷ ಗಳಿಂದ ದುಸ್ಥಿತಿಯಲ್ಲಿ ಇರುವ ಮೀನು ಮಾರುಕಟ್ಟೆಯನ್ನು ಸಂಪೂರ್ಣವಾಗಿ ನವೀಕರಿಸಿ, […]