ಶೋಭಾ ಬ್ರೂಟರಿಗೆ ವರ್ಣ ವಿರಾಸತ್‌ ಪ್ರಶಸ್ತಿ ಪ್ರದಾನ

Monday, January 15th, 2018
shobha

ಮೂಡಬಿದಿರೆ: ಹೊಸದಿಲ್ಲಿಯ ಹಿರಿಯ ಚಿತ್ರ ಕಲಾವಿದೆ ಶೋಭಾ ಬ್ರೂಟ ಅವರಿಗೆ ರವಿವಾರ ಮುಕ್ತಾಯಗೊಂಡ 24ನೇ ವರ್ಷದ ಆಳ್ವಾಸ್‌ ವಿರಾಸತ್‌ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಲ್ಲಿ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು “ಆಳ್ವಾಸ್‌ ವರ್ಣ ವಿರಾಸತ್‌ 2018′ ಪ್ರಶಸ್ತಿ ಪ್ರದಾನ ಮಾಡಿದರು. ಶಾಸ್ತ್ರೀಯ ಸಂಗೀತದಲ್ಲಿ ಸ್ನಾತಕೋತ್ತರ ಶಿಕ್ಷಣ, ಲಲಿತ ಕಲೆಗಳಲ್ಲಿ ಡಿಪ್ಲೊಮಾ ಹೊಂದಿರುವ ಶೋಭಾ ಬ್ರೂಟ ಅವರು ದೇಶದ ವಿವಿಧೆಡೆ ಮಾತ್ರವಲ್ಲದೆ ಆಸ್ಟ್ರೇಲಿಯ, ಅಮೆರಿಕ, ಬೆಲ್ಜಿಯಂ, ಇಂಗ್ಲಂಡ್‌ ದೇಶ ಗಳಲ್ಲಿ ಏಕವ್ಯಕ್ತಿ ಪ್ರದರ್ಶನ […]

ವಿರೇಂದ್ರ ಹೆಗ್ಗಡೆಯವರಿಂದ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಗೆ ಚಾಲನೆ

Friday, December 20th, 2013
Alvas Nudisiri Virasat

ಮೂಡಬಿದಿರೆ : ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ 2013 ನ್ನು ಡಾ. ಡಿ ವಿರೇಂದ್ರ ಹೆಗ್ಗಡೆಯವರು ಗುರುವಾರ ಸಂಜೆ ಮೂಡಬಿದಿರೆಯ ವಿದ್ಯಾಗಿರಿಯಲ್ಲಿರುವ ಸುಂದರಿ ಆಳ್ವ ಆವರಣದಲ್ಲಿ ಸಂಜೆ 6.30 ರ ವೇಳೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಬತ್ತಕ್ಕೆ ಹಾಲೆರೆಯುವ ಮೂಲಕ ಇತರ ಗಣ್ಯರು ಉದ್ಘಾಟನೆಗೆ ಜತೆಗೂಡಿದರು. ಸಂಜೆ 3.30ಕ್ಕೆ ಸಾಂಸ್ಕ್ರತಿಕ ಮೆರವಣಿಗೆ ಆರಂಭಗೊಂಡಿತು. ಜನಪದ ಕಲಾವಿದೆ ನಾಡೋಜ ಸುಕ್ರಿ ಬೊಮ್ಮಗೌಡ ಮೆರವಣಿಗೆಯನ್ನು ಉದ್ಘಾಟಿಸಿದರು. ಮೆರವಣಿಗೆಯು ಚೌಟರ ಅರಮನೆಯಿಂದ ಹೊರಟು ವೆಂಕಟ್ರಮಣ ದೇವಸ್ಥಾನ, ಹನುಮಾನ್ ದೇವಸ್ಥಾನದ […]