ವಿಶೇಷ ಭೂ ಸ್ವಾಧೀನಾಧಿಕಾರಿಯೋರ್ವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರ ಬಲೆಗೆ

Thursday, January 5th, 2017
Gayathri-n-nayak

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿಯೋರ್ವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಗಾಯತ್ರಿ ನಾಯಕ್ ಎಸಿಬಿ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ. ಇವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೋಗೀಶ್ ಎಂಬವರಿಂದ ತಮ್ಮ ಕಚೇರಿಯಲ್ಲಿ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಗಾಯತ್ರಿಯನ್ನು ವಶಕ್ಕೆ ಪಡೆದರು. ಯೋಗೀಶ್ ಅವರಿಗೆ ದೊರೆತ ಭೂ ಪರಿಹಾರದ ಮೊತ್ತದಲ್ಲಿ 1.6 ಲಕ್ಷ ರೂ. ಲಂಚ ನೀಡಬೇಕೆಂದು ಗಾಯತ್ರಿ […]