ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ

Sunday, October 24th, 2021
Vishvesha Thirtha

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಕೇಂದ್ರ ಸರಕಾರವು ಮರಣೋತ್ತರವಾಗಿ ಘೋಷಿಸಲಾದ 2020ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಯನ್ನು ನವೆಂಬರ್ 8ರಂದು ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಲಿದೆ. ಪೇಜಾವರ ಮಠಾಧೀಶರಾದ ಶ್ರಿ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ  ಪ್ರಶಸ್ತಿಯನ್ನು ಸ್ವೀಕರಿಸಲಿರುವರು. ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಅವರಿಗೆ ಕೇಂದ್ರ ಸರಕಾರವು 2020ನೇ ಸಾಲಿನ ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು. ಆದರೆ ಕೋವಿಡ್-19 ಕಾರಣದಿಂದ ಇದುವರೆಗೆ ಪ್ರಶಸ್ತಿ […]

ಪದ್ಮಾಸನದಲ್ಲಿ ಕುಳಿತು ಬೃಂದಾವನಸ್ಥರಾದ ವಿಶ್ವೇಶ ತೀರ್ಥ ಸ್ವಾಮೀಜಿಗಳು

Monday, December 30th, 2019
vishwesha-thirtha

ಬೆಂಗಳೂರು:  ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಪಾರ್ಥೀವ ಶರೀರದ ಬೃಂದಾವನ ಬೆಂಗಳೂರಿನ ವಿದ್ಯಾ ಪೀಠದಲ್ಲಿ ಸಕಲ ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯಾಪೀಠದಲ್ಲಿ ಇಂದು ನೆರವೇರಿತು. ಉಡುಪಿಯಿಂದ ವಿಶೇಷ ವಿಮಾನದ ಮೂಲಕ ಬಂದ ಪಾರ್ಥೀವ ಶರೀರವನ್ನು ಸಂಜೆ 3,30 ಕ್ಕೆ ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಸಂಜೆ 6-20ಕ್ಕೆ ನಗರದ ವಿದ್ಯಾಪೀಠಕ್ಕೆ ಅಂತ್ಯಸಂಸ್ಕಾರಕ್ಕಾಗಿ ತರಲಾಯಿತು. ಬಳಿಕ ವಿದ್ಯಾಪೀಠ ಆವರಣದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರುಗಳಾದ ಕೆ.ಎಸ್. […]