ಆಳ್ವಾಸ್‍ನುಡಿಸಿರಿ -2016′ ರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಬಿ.ಎನ್. ಸುಮಿತ್ರಾಬಾಯಿ ಆಯ್ಕೆ

Thursday, September 29th, 2016
alwas-nudisiri

ಮಂಗಳೂರು :ಈ ಬಾರಿ ‘ಕರ್ನಾಟಕ ನಾಳೆಗಳ ನಿರ್ಮಾಣ’ ಎಂಬ ಪರಿಕಲ್ಪನೆಯಲ್ಲಿ ಮೂರು ದಿನಗಳ ಕಾಲ ಜರಗುವ `ಆಳ್ವಾಸ್‍ನುಡಿಸಿರಿ -2016′ ರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಸಂಸ್ಕೃತ ಭಾಷಾ ಪ್ರಾಧ್ಯಾಪಕಿಯಾಗಿರುವ ವಿಮರ್ಶಕಿ ಡಾ. ಬಿ.ಎನ್. ಸುಮಿತ್ರಾಬಾಯಿ ಆಯ್ಕೆಯಾಗಿದ್ದು, ಸಾಹಿತಿ ಡಾ. ಜಯಂತ ಗೌರೀಶ ಕಾಯ್ಕಿಣಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಈ ಕುರಿತು ತಿಳಿಸಿದ್ದಾರೆ. ನಿರಂತರ ಆಳ್ವಾಸ್ ನುಡಿಸಿರಿ ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಆಯೋಜಿಸಿಕೊಂಡು ಬರುತ್ತಿದ್ದು 13ನೇ ವರ್ಷಕ್ಕೆ […]

ವಿರೇಂದ್ರ ಹೆಗ್ಗಡೆಯವರಿಂದ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಗೆ ಚಾಲನೆ

Friday, December 20th, 2013
Alvas Nudisiri Virasat

ಮೂಡಬಿದಿರೆ : ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ 2013 ನ್ನು ಡಾ. ಡಿ ವಿರೇಂದ್ರ ಹೆಗ್ಗಡೆಯವರು ಗುರುವಾರ ಸಂಜೆ ಮೂಡಬಿದಿರೆಯ ವಿದ್ಯಾಗಿರಿಯಲ್ಲಿರುವ ಸುಂದರಿ ಆಳ್ವ ಆವರಣದಲ್ಲಿ ಸಂಜೆ 6.30 ರ ವೇಳೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಬತ್ತಕ್ಕೆ ಹಾಲೆರೆಯುವ ಮೂಲಕ ಇತರ ಗಣ್ಯರು ಉದ್ಘಾಟನೆಗೆ ಜತೆಗೂಡಿದರು. ಸಂಜೆ 3.30ಕ್ಕೆ ಸಾಂಸ್ಕ್ರತಿಕ ಮೆರವಣಿಗೆ ಆರಂಭಗೊಂಡಿತು. ಜನಪದ ಕಲಾವಿದೆ ನಾಡೋಜ ಸುಕ್ರಿ ಬೊಮ್ಮಗೌಡ ಮೆರವಣಿಗೆಯನ್ನು ಉದ್ಘಾಟಿಸಿದರು. ಮೆರವಣಿಗೆಯು ಚೌಟರ ಅರಮನೆಯಿಂದ ಹೊರಟು ವೆಂಕಟ್ರಮಣ ದೇವಸ್ಥಾನ, ಹನುಮಾನ್ ದೇವಸ್ಥಾನದ […]