ಮಕ್ಕಳಿಬ್ಬರಿಗೆ ವಿಷ ಕುಡಿಸಿದ ತಾಯಿ, 8 ವರ್ಷದ ಮಗಳು ಸಾವು

Sunday, September 20th, 2020
poision

ಪುತ್ತೂರು : ಮಕ್ಕಳಿಬ್ಬರಿಗೆ  ವಿಷ ಕುಡಿಸಿ  ಮಹಿಳೆಯೊಬ್ಬರು ಬಳಿಕ ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ಪುತ್ತೂರು ತಾಲೂಕಿನ ನಿಡ್ಪಳ್ಳಿ ಎಂಬಲ್ಲಿ ನಡೆದಿದ್ದು, 8 ವರ್ಷದ ಮಗಳು ಘಟನೆಯಲ್ಲಿ ಮೃತಪಟ್ಟಿದ್ದಾಳೆ. ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬಾತನ ಪತ್ನಿ ದಿವ್ಯಶ್ರೀ (29) ತನ್ನ ಇಬ್ಬರು ಮಕ್ಕಳಾದ ಅಜಯ್ (10) ಮತ್ತು ಅನ್ವಿತಾ (8) ಅವರಿಗೆ ಜ್ಯೂಸ್‌ನಲ್ಲಿ ವಿಷ ಬೆರೆಸಿ ನೀಡಿ ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ. ರಘುನಾಥನಿಗೆ ಅನ್ಯ ಸ್ತ್ರೀಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿದ್ದ ದಿವ್ಯಶ್ರೀ, ಕೊರೋನ ಲಾಕ್‌ಡೌನ್ […]

ಬ್ಯಾಂಕ್​ ಉದ್ಯೋಗಿ ಬ್ಯಾಂಕ್​ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ ಗೊತ್ತಾ ?

Wednesday, August 26th, 2020
Bank Employe

ಹೊಸಪೇಟೆ : ಬ್ಯಾಂಕ್ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಬ್ಯಾಂಕ್ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಮಹೇಶ್ (40) ಎಂಬ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ  ಶ್ರೀರಾಮುಲು ಉದ್ಯಾನವನದ ಬಳಿ ಇರುವ ಖಾಸಗಿ ಕಂಪೆನಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದೆ. ಮೇಲಾಧಿಕಾರಿಗಳ ಕಿರುಕುಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬ್ಯಾಂಕ್ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ಗೆ […]

ಸಾಲಕೊಟ್ಟ 26 ಸಾವಿರ ವಾಪಸು ಕೊಟ್ಟಿಲ್ಲ ಎಂದು ಚಾರ್ಮಾಡಿ ಘಾಟಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ

Thursday, August 20th, 2020
Nagaraj Holalkere

ಚಿಕ್ಕಮಗಳೂರು : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಹೊರಕೆರೆಯ  ವ್ಯಕ್ತಿಯೋರ್ವ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ತನ್ನ ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಕಾರಿನಲ್ಲಿ ದೊರೆತ ದಾಖಲೆಗಳ ಪ್ರಕಾರ ಮೃತಪಟ್ಟ ವ್ಯಕ್ತಿಯನ್ನು 44 ವರ್ಷದ ನಾಗರಾಜು ಎಂದು ಗುರುತಿಸಲಾಗಿದೆ. ಈತ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಹೊರಕೆರೆ ದೇವಪುರ ಗ್ರಾಮದವರು ಎನ್ನಲಾಗಿದೆ. ವಿಷ ಸೇವಿಸಿದ ವ್ಯಕ್ತಿಯ ಬಾಯಲ್ಲಿ ನೊರೆ ಬಂದಿಲ್ಲ. ಅಷ್ಟೆ ಅಲ್ದೆ ಜುಲೈ 31ನೇ ತಾರೀಖಿನಂದೆ ಬರೆದಿರೋ ಡೆತ್ ನೋಟ್ ಕೂಡ ಜೇಬಲ್ಲಿರುವುದು  ಸಂಶಯಕ್ಕೆ […]

ವಿಷವುಣಿಸಿ ತಂದೆಯನ್ನು ಕೊಲ್ಲಲು ಮುಂದಾದ ಮಕ್ಕಳು

Sunday, July 26th, 2020
sullia

ಸುಳ್ಯ : ಸಾಕಿ ಬೆಳೆಸಿದ ಮಕ್ಕಳೇ ತಂದೆಯನ್ನು ವಿಷ ಹಾಕಿ ಕೊಲ್ಲಲು ಯೋಚಿಸುತ್ತಾರೆಂದರೆ ಅವರ  ಮನಸ್ಥಿತಿ ಹೇಗಿರಬೇಕು ನೀವೇ ಯೋಚಿಸಿ, ಸುಳ್ಯ ತಾಲೂಕಿನ  ನಾಲ್ಕೂರು ಗ್ರಾಮದ ಅಂಜೇರಿ ಎಂಬಲ್ಲಿ ಮಕ್ಕಳಿಬ್ಬರು ಸೇರಿ ಆಹಾರಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ಮುಂದಾದ ಘಟನೆಯೊಂದು ಜು.24 ರ ಗುರುವಾರ ನಡೆದಿದೆ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬಿಬ್ಬರು ತಂದೆಗೆ ವಿಷವುಣಿಸಿದ್ದು, ತಂದೆ, ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ.  ಪೊಲೀಸರು ಮಕ್ಕಳನ್ನು  ವಶಕ್ಕೆ ಪಡೆದಿದ್ದಾರೆ. ಪುತ್ರ ಲೊಕೇಶ್ […]

ಹೆಂಡತಿ ಹಾಗೂ ಎರಡು ವರ್ಷದ ಮಗಳಿಗೆ ವಿಷ ನೀಡಿ ಆತ್ಮಹತ್ಯೆಗೆ ಶರಣಾದ ಉದ್ಯೋಗಿ

Saturday, July 25th, 2020
Mounesh Pattara

ಧಾರವಾಡ: ಶನಿವಾರ ಬೆಳ್ಳಂಬೆಳಿಗ್ಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೀಡಾದವರನ್ನು ಟಾಟಾ ಮಾರ್ಕೋಪೋಲೋ ಕಂಪನಿಯ ಉದ್ಯೋಗಿ ಮೌನೇಶ್ ವೀರಪ್ಪ ಪತ್ತಾರ ( 36 ) ಎಂದು ಗುರುತಿಸಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮದವರು. ಟಾಟಾ ಮಾರ್ಕೋಪೋಲೋ ಕಂಪೆನಿಯ ಉದ್ಯೋಗಿಯಾಗಿದ್ದರಿಂದ ಧಾರವಾಡದಲ್ಲಿ ನೆಲೆಸಿದ್ದರು. ಕಂಪನಿಯ 50ಕ್ಕೂ ಹೆಚ್ಚು ನೌಕರರಿಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಆತಂಕಗೊಂಡಿದ್ದ ಈ ನೌಕರ, ಎಲ್ಲಿ ತಮ್ಮ ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ […]

ಡೆತ್ ನೋಟಲ್ಲಿ ಪ್ರಿಯಕರನ ಹೆಸರು ಬರೆದಿಟ್ಟು ವಿಷ ಸೇವಿಸಿದ ಯುವತಿ

Thursday, July 23rd, 2020
uma

ತೆಲಂಗಾಣ : ಕಾಲೇಜಿನಲ್ಲಿ ಓದುತ್ತಿರುವ ಸಂದರ್ಭದಲ್ಲಿ ಸಹಪಾಠಿಯಾಗಿದ್ದವನನ್ನು ಪ್ರೀತಿಸಿ ನಂತರ ಮದುವೆ ಮಾಡಿಕೊ ಎಂದಿದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಪೋಥರಂ ಗ್ರಾಮದ 19 ವರ್ಷದ ಯುವತಿ ಉಮಾ ಎಂಬ ಹುಡುಗಿ ಕಾಲೇಜಿನಲ್ಲಿ ಓದುತ್ತಿರುವ ಸಂದರ್ಭದಲ್ಲಿ ಸಹಪಾಠಿಯಾಗಿದ್ದ ರಂಜಿತ್ ಎಂಬ ಯುವಕನ ಪ್ರೇಮಕ್ಕೆ ಬಿದ್ದಿದ್ದಾಳೆ. ಆತನೂ ಇವಳನ್ನು ಪ್ರೀತಿಸುವುದಾಗಿ ಹೇಳಿದ್ದು, ಅದನ್ನು ಉಮಾ ನಂಬಿದ್ದಾಳೆ. ಈ ಬಗ್ಗೆ ಅರಿವು ಇಲ್ಲದಿದ್ದ ಉಮಾ ಪಾಲಕರು ಮಗಳಿಗೆ ಹುಡುಗನನ್ನು ನೋಡಲು ಶುರು ಮಾಡಿದ್ದಾರೆ. ಮನೆಯವರಿಗೆ […]

ಕಡಬ : ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ

Wednesday, November 27th, 2019
Kadaba

ಕಡಬ : ಕಡಬದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಸವಿತ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮಂಗಳವಾರ ವಿಷ ಸೇವಿಸಿದ್ದಳು. ನಂತರ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇನ್ನು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ […]